ಅನಿಷ್ಟ ಪದ್ಧತಿ ತಡೆಗೆ ಸಾರ್ವಜನಿಕರು ಕೈ ಜೋಡಿಸಲಿ
18 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ: ನ್ಯಾ| ಸುಲ್ತಾನ್
Team Udayavani, Jun 30, 2019, 3:31 PM IST
ಸುರಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಡಿಯೋ ಸಿಡಿ ಮತ್ತು ಜಾಗೃತಿ ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.
ಸುರಪುರ: ಬಾಲ ಕಾರ್ಮಿಕತೆ ಇದೊಂದು ಕೆಟ್ಟ ಪದ್ಧತಿ. ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಕೂಡ ಈ ಅನಿಷ್ಟತೆ ನಿರೀಕ್ಷಿತ ಪ್ರಮಾಣದಲ್ಲಿ ತಡೆಗಟ್ಟಲಾಗದಿರುವುದು ವಿಷಾದದ ಸಂಗತಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ್ ಹೇಳಿದರು.
ನಗರದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಜಿಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕರ ಕಚೇರಿ ತಾಲೂಕು ಮಟ್ಟದ ವಿವಿಧ ಇಲಾಖೆ ಮತ್ತು ಸಂಘಟನೆಗಳು ಸಂಯುಕ್ತವಾಗಿ ಏರ್ಪಡಿಸಿದ್ದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.
18 ವರ್ಷದ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕಾಯ್ದೆಯನ್ನು ಉಲ್ಲಂಘಿಸಿ ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಕನಿಷ್ಠ 6 ತಿಂಗಳಿಂದ ಗರಿಷ್ಠ 2 ವರ್ಷದ ವರೆಗೆ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸುವ ಅವಕಾಶವಿದೆ, ಕಾರಣ ಯಾವುದೇ ಕಾರಣಕ್ಕೆ ಮಕ್ಕಳನ್ನು ದುಡಿಸಿಕೊಳ್ಳಬಾರದು ಎಂದು ತಾಕೀತು ಮಾಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಚಿದಾನಂದ ಬಡಿಗೇರ ಮಾತನಾಡಿ, ಸರಕಾರ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಜಾರಿಗೊಳಿಸಿ ವಿವಿಧ ಸೌಲಭ್ಯ ಒದಗಿಸಿದೆ. ಪಾಲಕ ಪೋಷಕರಿಗೆ ಮಕ್ಕಳ ಶಿಕ್ಷಣದ ಬಾರ ಕಡಿಮೆಮಾಡಿದೆ. ಇಷ್ಟಿದ್ದು ಶಾಲೆ ಬಿಡಿಸಿ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸುವುದು ಹೊಲ ಮನೆಗಳ ಕೆಲಸಕ್ಕೆ ಕರೆದುಕೊಂಡು ಹೋಗುವುದು ಸರಿಯಲ್ಲ. ಪ್ರತಿಯೊಬ್ಬರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಅವರನ್ನು ಒಳ್ಳೆಯ ಅಧಿಕಾರಿಗಳನ್ನಾಗಿ ಮಾಡಿ ದೇಶದ ಅಭಿವೃದ್ಧಿಗೆ ನೆರವಾಗಿ ಎಂದು ಸಲಹೆ ನೀಡಿದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘವೀರಸಿಂಗ್ ಠಾಕೂರ ಪ್ರಮಾಣ ವಚನ ಬೋಧಿಸಿ ನಂತರ ಪ್ರಾಸ್ತವಿಕ ಮಾತನಾಡಿ, ಈ ಅನಿಷ್ಟ ಪದ್ಧತಿಯನ್ನು ತಡೆಗಟ್ಟಲು ಅಧಿಕಾರಿಗಳು ಪ್ರಯತ್ನ ಮಾಡಿದರೆ ಸಾಲದು ಇದಕ್ಕೆ ಸಾರ್ವಜನಿಕರು ಕೈ ಜೋಡಿಸುವುದು ಅಗತ್ಯವಾಗಿದೆ. ರೆಡೆಮೇಡ್ ಗಾರ್ಮೆಂಟ್ಸ, ಗ್ಯಾರೇಜ, ಹೋಟೆಲ್, ಕಿರಾಣಿ ಮತ್ತು ಇತರೆಡೆ ಬಾಲ ಕಾರ್ಮಿಕರು ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಜಿಲ್ಲಾ ಸಹಾಯವಾಣಿ 08473-253456, 253727 ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ವಕೀಲೆ ಜಯಲಲಿತಾ ಪಾಟೀಲ, ನಂದನಗೌಡ ಪಾಟೀಲ ಉಪನ್ಯಾಸ ನೀಡಿದರು. ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಡಿಯೋ ಸಿಡಿ ಮತ್ತು ಜಾಗೃತಿ ಪೋಸ್ಟರ್ ಹಾಗೂ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ಎನ್. ಅಮರನಾಥ, ವಕೀಲರ ಸಂಘದ ಅಧ್ಯಕ್ಷ ಮಹ್ಮದ್ ಹುಸೇನ್, ತಹಶೀಲ್ದಾರ್ ಸುರೇಶ ಅಂಕಲಗಿ, ಮಕ್ಕಳ ಸಮಿತಿ ಜಿಲ್ಲಾಧ್ಯಕ್ಷ ಹಣಮಂತ್ರಾಯ ಕರಡಿ, ಸದಸ್ಯ ಮಾಳಪ್ಪ ವಂಟೂರ, ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ, ಸಿಡಿಪಿಒ ಲಾಲಸಾಬ ಪೀರಾಪೂರ, ಹಿಂದುಳಿದ ವರ್ಗಗಳ ಅಧಿಕಾರಿ ಬಾಬೂ, ಅರಣ್ಯಾಧಿಕಾರಿ ಶರಣಪ್ಪ ಕುಂಬಾರ, ಯಲ್ಲಪ್ಪ ಕಾಡ್ಲೂರ, ಅಮರೇಶ ಕುಂಬಾರ, ಮೆಕ್ಯಾನಿಕ್ ಸೇವಾ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಚವ್ಹಾಣ, ಡಾನ್ ಬಾಸ್ಕೋ ಸೇವಾ ಕೇಂದ್ರದ ಶರಣಪ್ಪ ಅಮರಾಪುರ, ಅಹ್ಮದ್ ಹುಸೇನ್ ಇತರರು ವೇದಿಕೆಯಲ್ಲಿದ್ದರು. ಲಕ್ಷ್ಮಣ ಬಿರಾದಾರ ಸ್ವಾಗತಿಸಿದರು. ಮಲ್ಲು ಭೋವಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Puttur ಎಲೆಕ್ಷನ್ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು