ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆ

•10 ಸಾವಿರ ಹೆಕ್ಟೇರ್‌ ಬೆಳೆ ನಷ್ಟ •ವಿವಿಧೆಡೆ ಉರುಳಿದ ವಿದ್ಯುತ್‌ ಕಂಬ-ಪರಿವರ್ತಕಗಳು

Team Udayavani, Aug 19, 2019, 11:16 AM IST

19-Agust-10

ಸುರಪುರ: ಕೃಷ್ಣಾ ನದಿ ಪ್ರವಾಹಕ್ಕೆ ಕೊಚ್ಚಿ ಹೋದ ಶೆಳ್ಳಗಿ ಗ್ರಾಮದ ರಸ್ತೆ.

ಸಿದ್ದಯ್ಯ ಪಾಟೀಲ
ಸುರಪುರ:
ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 6.80 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟರುವುದು ಇತಿಹಾಸದಲ್ಲಿಯೇ ಮೊದಲು. ಸುಮಾರು 10ರಿಂದ 12 ದಿನಗಳಿಗೂ ಹೆಚ್ಚು ಮೈದುಂಬಿ ಹರಿದ ಕೃಷ್ಣಾ ನದಿ ನೀರಿಗೆ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಹಲವಾರು ಅವಾಂತರಗಳು ಸೃಷ್ಟಿಯಾಗಿದೆ.

ನೆರೆ ಹೊಡೆತಕ್ಕೆ ಸುಮಾರು 10 ಸಾವಿರ ಹೆಕ್ಟೇರ್‌ ಜಮೀನುಗಳಲ್ಲಿ ನೀರು ನುಗ್ಗಿ ಕೋಟ್ಯಂತರ ರೂ. ಬೆಳೆ ನಷ್ಟವಾಗಿದೆ. ಇದರಿಂದ ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾದರೆ ಮತ್ತೂಂದೆಡೆ ನದಿ ಪಾತ್ರದ ರಸ್ತೆಗಳು ಸಂಪೂರ್ಣ ಕಿತ್ತು ಹೋಗಿ ಸಂಚಾರಕ್ಕೆ ಆಪತ್ತು ತಂದೊಡ್ಡಿದೆ.

ಹೊಲದಲ್ಲಿ ಕಾಣದಾದ ಬೆಳೆಗಳು: ಹೊಲ, ಗದ್ದೆಗಳಲ್ಲಿ ನಾಟಿ ಮಾಡಿದ್ದ ಭತ್ತದ ಸಸಿ, ಶೇಂಗಾ, ಹತ್ತಿ, ತೊಗರಿ, ಸೂರ್ಯಕಾಂತಿ, ಮೆಣಸಿನಕಾಯಿ, ಸಜ್ಜಿ ಸೇರಿದಂತೆ ಇತರೆ ಬೆಳೆಗಳು ಹರಿಯುವ ನೀರಿನ ರಭಸಕ್ಕೆ ಕಿತ್ತು ಹೋಗಿವೆ. ಬೆಳಗಳಿಲ್ಲದೆ ಹೊಲಗಳು ಪಾಳು ಭೂಮಿಯಂತೆ ಗೋಚರಿಸುತ್ತಿವೆ.

ಜೆಸ್ಕಾಂಗೆ ಅಪಾರ ನಷ್ಟ: ಪ್ರವಾಹದ ಹೊಡೆತಕ್ಕೆ ಜೆಸ್ಕಾಂ ಇಲಾಖೆಗೆ ಅಪಾರ ನಷ್ಟು ಉಂಟಾಗಿದೆ. ನದಿ ತಟದಲ್ಲಿ 500ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ನೀರಿನ ಕೊರೆತಕ್ಕೆ ಉರುಳಿ ಬಿದ್ದಿವೆ. 200ಕ್ಕೂ ಹೆಚ್ಚು (ಟಿ.ಸಿ.) ವಿದ್ಯುತ್‌ ಪರಿವರ್ತಕಗಳು ಕೆಟ್ಟು ಹೋಗಿವೆ. ಇದರಲ್ಲಿ ಶೆಳ್ಳಗಿ ಗ್ರಾಮ ವ್ಯಾಪ್ತಿವೊಂದರಲ್ಲಿ 160 ಟಿಸಿಗಳು ಸುಟ್ಟು ಹೋಗಿವೆ.

ಪಂಪ್‌ಸೆಟ್ ನೀರಪಾಲು: ಜಮೀನುಗಳಲ್ಲಿ ಹಾಕಿಕೊಂಡಿದ್ದ ಪಂಪ್‌ಸೆಟ್‌ಗಳು ಸಂಪೂರ್ಣ ನಾಶವಾಗಿವೆ. ನದಿ ದಂಡೆಯಲ್ಲಿದ್ದ ನೀರೆತ್ತುವ ಮೋಟಾರ ಪುಟ್ಬಾಲ್ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ಇದರಿಂದ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ಸ್ಥಗಿತಗೊಂಡಿದ್ದು, ಕತ್ತಲಲ್ಲೇ ದಿನನೂಕು ವಂತಾಗಿದೆ. ಅಧಿಕಾರಿಗಳು ನೀರು ಇಳಿಮುಖವಾಗುವುದನ್ನು ಕಾಯುತ್ತಿದ್ದು, ವಿದ್ಯುತ್‌ ಒದಗಿಸಲು ಶತಪ್ರಯತ್ನ ನಡೆಸಿದ್ದಾರೆ.

ಮಲಗಿದ ಬೆಳೆಗಳು: ಪ್ರವಾಹವು ನದಿ ಪಾತ್ರದ ಸಮೀಪದ ತಮ್ಮ ಹೊಲ ಗದ್ದೆಗಳಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಹಾಕಿದ್ದ ಬೆಳೆಗಳನ್ನು ಅಡ್ಡಡ್ಡ ಮಲಗಿಸಿ ಹೋಗಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಬಿತ್ತನೆಗಾಗಿ ಮಾಡಿದ ಸಾಲ ಹೇಗೆ ತೀರಿಸೋದು ಎಂಬ ಆಲೋಚನೆಯಲ್ಲಿ ರೈತರಿದ್ದಾರೆ.

ಮುಳಗಿದ ಪಂಪಹೌಸ್‌: ಕೃಷ್ಣಾ ನದಿ ಪ್ರವಾಹ ಇಳಿಮುಖವಾಗಿದ್ದರೂ ನದಿ ಹರಿವು ಯಥಾ ಸ್ಥಿತಿಯಿದ್ದು, ಸುರಪುರ ನಗರಕ್ಕೆ ಕುಡಿಯುವ ನೀರು ಪೂರೈಸುವ ಪಂಪ್‌ಹೌಸ್‌ ಇನ್ನೂ ನೀರಿನಲ್ಲಿಯೇ ಮುಳುಗಿದೆ. ಹೀಗಾಗಿ ನಗರದ ನೀರು ಸರಬರಾಜು ಇನ್ನೂ ಆರಂಭಗೊಂಡಿಲ್ಲ. ಹರಿವು ಇಳಿಮುಖವಾಗಿ ಪಂಪ್‌ಹೌಸ್‌ ಆರಂಭಿಸಲು ಇನ್ನೂ ಒಂದಿಷ್ಟು ದಿನಗಳು ಬೇಕಾಗುತ್ತವೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.

ಸರ್ವೇ ವಿಳಂಬ: ಶೆಳ್ಳಗಿಯ ಕೃಷ್ಣೆ ತಟದಲ್ಲಿದ್ದ ಮಾರುತಿ ಮಂಟಪ ಪ್ರವಾಹದಿಂದ ಮುಕ್ತವಾಗಿದ್ದು, ಗುಡಿಯೊಳಗೆ ಸಾಕಷ್ಟು ಪ್ರಮಾಣದಲ್ಲಿ ಮಣ್ಣು ಸೇರಿಕೊಂಡಿದೆ. ಪ್ರವಾಹದಿಂದ ಆದ ಹಾನಿ ಮಾಹಿತಿ ಇನ್ನೂ ಸಿಗುತ್ತಿಲ್ಲ. ಪ್ರವಾಹ ಇಳಿದ ಮೇಲೆಯೇ ಹಾನಿಯ ಸರ್ವೇ ಸಾಧ್ಯವಾಗುತ್ತದೆ ಎನ್ನಲಾಗುತ್ತಿದೆ. ನೆರೆ ಸಂತ್ರಸ್ತರು ಮತ್ತೆ ಬದುಕು ಕಟ್ಟಿಕೊಳ್ಳಲು ವಿವಿಧ ತಾಪತ್ರೆಗಳನ್ನು ಅನುಭವಿಸುವ ಸ್ಥಿತಿ ಉದ್ಭವಿಸಿದೆ. ಪ್ರವಾಹ ನಿಂತರೂ ಸಂತ್ರಸ್ತರ ಸಂಕಟಕ್ಕೆ ಕೊನೆಯಿಲ್ಲವಾಗಿದೆ.

ಬೆಳೆ ಹಾನಿ, ರಸ್ತೆ, ಮನೆಗಳ ಸಮಗ್ರ ಸಮೀಕ್ಷೆ ನಡೆಸಿ ಪೂರ್ಣ ಹಾನಿಯ ಚಿತ್ರಣ ಸಿಗಬೇಕಾದರೆ ಇನ್ನೊಂದು ವಾರ ಬೇಕಾಗುತ್ತದೆ. ಹೀಗಾಗಿ ಸರ್ವೇ ಕಾರ್ಯ ವಿಳಂಬವಾಗಲಿದೆ.
ಸುರೇಶ ಅಂಕಲಗಿ,
 ತಹಶೀಲ್ದಾರ್‌ ಸುರಪುರ

ಪ್ರವಾಹ ನುಗ್ಗಿದ ಕಡೆಗಳಲ್ಲಿ ನೀರು ಮಿಶ್ರಿತ ರಾಡಿ ಮಣ್ಣನ್ನು ತನ್ನ ಅವಶೇಷವಾಗಿ ಬಿಟ್ಟು ಹೋಗಿದೆ. ಮಣ್ಣು ಮಿಶ್ರಿತ ಕೊಳಚೆಯಿಂದಾಗಿ ನದಿ ತೀರದ ಜನರು ಸಾಂಕ್ರಾಮಿಕ ರೋಗದ ಭೀತಿಗೆ ಒಳಗಾಗಿದ್ದಾರೆ.
ಶರಣಪ್ಪ, ಶೆಳ್ಳಗಿ ಗ್ರಾಮಸ್ಥ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.