ಮಕ್ಕಳ ರಕ್ಷಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಶಿವನಗೌಡ
ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ
Team Udayavani, Jul 24, 2019, 4:06 PM IST
ಸುರಪುರ: ನಗರದ ಶ್ರೀ ಪ್ರಭು ಕಾಲೇಜಿನಲ್ಲಿ ಜರುಗಿದ ಮಕ್ಕಳ ರಕ್ಷಣಾ ಜಾಗೃತಿ ಅಭಿಯಾನದಲ್ಲಿ ಡಿವೈಎಸ್ಪಿ ಶಿವನಗೌಡ ಪಾಟೀಲ ಮಾತನಾಡಿದರು
ಸುರಪುರ: ಇತ್ತೀಚೆಗೆ ಮಕ್ಕಳ ಕಾಣೆಯಾಗುವ ಪ್ರಕರಣ ಬೆಳಕಿಗೆ ಬರುತ್ತಿವೆ. ಈ ಬಗ್ಗೆ ಅನೇಕ ದೂರುಗಳು ಬರುತ್ತಿವೆ. ಮಕ್ಕಳ ರಕ್ಷಣೆಗಾಗಿ ಪೊಲೀಸ್ ಇಲಾಖೆ ಅಷ್ಟೇ ಪ್ರಯತ್ನಿಸಿದರೆ ಸಾಲದು, ಇದಕ್ಕೆ ವಿದ್ಯಾರ್ಥಿ ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಡಿವೈಎಸ್ಪಿ ಶಿವನಗೌಡ ಪಾಟೀಲ ಹೇಳಿದರು.
ನಗರದ ಶ್ರೀ ಪ್ರಭು ಜೆ.ಎಂ. ಬೋಹರಾ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಆಪರೇಷನ್ ಮುಸ್ಕಾನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಶಾಲೆಗಳ ಬಳಿ ಅಥವಾ ಮನೆ ಹತ್ತಿರ ಅನಾಮದೇಯ ವ್ಯಕ್ತಿಗಳು ಆಗಮಿಸಿ ಆಟ ಆಡುತ್ತಿರುವ ಮಕ್ಕಳಿಗೆ ತಿಂಡಿಗಳ ಆಸೆ ತೋರಿಸಿ ಮಕ್ಕಳನ್ನು ಎತ್ತಿಕೊಂಡು ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು, ಶಾಲಾ ಶಿಕ್ಷಕರು ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಇಂತಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ, ಪಾಲಕ ಪೋಷಕರಲ್ಲಿ, ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜು. 1ರಿಂದ 31ರ ವರೆಗೆ ಪೊಲೀಸ್ ಇಲಾಖೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಕಾರಣ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಕೋರಿದರು.
ಠಾಣೆಯ ಪೊಲೀಸ್ ಸರ್ಕಲ್ ಇನ್ಸೆಪೆಕ್ಟರ್ ಆನಂದರಾವು ಮಾತನಾಡಿ, ಮಕ್ಕಳ ಕಳ್ಳ ಸಾಗಾಣಿಕೆ ಮಾಡುವುದು, ಮಕ್ಕಳನ್ನು ಬಿಕ್ಷಾಟನೆಗೆ ಸೇರಿಸುವುದು. ಅಂಗಾಗ ಮಾರಾಟ ಮಾಡುವುದು ಸೇರಿದಂತೆ ಹೀನ ಕೃತ್ಯಗಳಲ್ಲಿ ತೊಡಗಿಸಲಾಗುತ್ತಿದೆ. ಕಾರಣ ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಕಾಲೇಜಿನ ಪದವಿ ವಿಭಾಗದ ಪ್ರಾಚಾರ್ಯ ಎಸ್.ಹೆಚ್. ಹೊಸ್ಮನಿ ಅಧ್ಯಕ್ಷತೆ ವಹಸಿದ್ದರು. ಪಿಯು ಕಾಲೇಜಿನ ಪ್ರಾಚಾರ್ಯ ವಾರೀಸ್ ಕುಂಡಾಲೆ ಮಾತನಾಡಿದರು. ಪೇದೆ ದಯಾನಂದ ಸ್ವಾಗತಿಸಿದರು. ಡಾ| ಸಾಯಿಬಣ್ಣ ನಿರೂಪಿಸಿದರು. ಸಿ.ಎಂ. ಸುತಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?