ಬೆಳೆ ಹಾನಿ ವೀಕ್ಷಿಸದ ಸಿಎಂ; ನೆರೆ ಸಂತ್ರಸ್ತರಲ್ಲಿ ನಿರಾಸೆ

ಕಾಯ್ದು ಕುಳಿತಿದ್ದ ರೈತರನ್ನು ಭೇಟಿ ಮಾಡದ ಸಿಎಂರಾಜುಗೌಡರ ಒತ್ತಾಯಕ್ಕೆ ಮಣಿದು ದಾಳಿಂಬೆ ಬೆಳೆ ಹಾನಿ ವೀಕ್ಷಣೆ

Team Udayavani, Oct 6, 2019, 11:34 AM IST

06-October-3

ಸುರಪುರ: ಸಿಎಂ ಬಿ.ಎಸ್‌.ಯಡಿಯೂರಪ್ಪನವರು ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಉಂಟಾಗಿದ್ದ ಬೆಳೆಹಾನಿ ವೀಕ್ಷಿಸದೆ ಹೋದದ್ದು ನೆರೆ ಸಂತ್ರಸ್ತ ರೈತರಲ್ಲಿ ನಿರಾಸೆ ತಂದಿತು. ಪ್ರವಾಹದಿಂದ ಉಂಟಾಗಿದ್ದ ಬೆಳೆ ಹಾನಿ ಸಮೀಕ್ಷೆಗೆ ಆಗಮಿಸಿದ್ದ ಸಿಎಂ ದೇವಾಪುರ ಜಡಿ ಶಾಂತಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಮಠದ ಶಿವಮೂರ್ತಿ ಶಿವಾಚಾರ್ಯರಿಂದ ಆಶೀರ್ವಾದ ಪಡೆದು ಐದೇ ನಿಮಿಷದಲ್ಲೇ ಅಲ್ಲಿಂದ ನಿರ್ಗಮಿಸಿದರು.

ಈ ವೇಳೆ ಹೋಗುವ ದಾರಿಯಲ್ಲಿ ಕೆಲವರ ಮನವಿ ಸ್ವೀಕರಿಸಿದರು. ಶಾಸಕ ರಾಜುಗೌಡರ ಒತ್ತಾಯಕ್ಕೆ ಮಣಿದು ಹಾದಿ ಮಧ್ಯೆ ಕಾರಿನಿಂದ ಇಳಿದು ಕಾಟಾಚಾರಕ್ಕೆಂಬಂತೆ ದೇವಾಪುರ ಹಿರಿಹಳ್ಳದ ಹತ್ತಿರ ದಾಳಿಂಬೆ ನಾಶವಾಗಿರುವುದನ್ನು ವೀಕ್ಷಿಸಿದರು. ಸಿಎಂಗೆ ತಮ್ಮ ಸಮಸ್ಯೆ ಹೇಳಿಕೊಳ್ಳಲೆಂದು ಮಠದ ಕಲ್ಯಾಣ ಮಂಟಪದಲ್ಲಿ ಬೆಳಗಿನಿಂದ ರೈತರು ಕುಳಿತುಕೊಂಡಿದ್ದರು. ಆದರೆ, ಸಿಎಂ ಅವರನ್ನು ಭೇಟಿ ಮಾಡದೆ ಹಾಗೇ ತೆರಳಿದರು.

ತಾಲೂಕಿನಲ್ಲಿ ಸಂಭವಿಸಿದ ಭೀಕರ ಪ್ರವಾಹ ಚಿತ್ರಗಳನ್ನು ಕಲ್ಯಾಣ ಮಂಟಪದ ನಾಲ್ಕು ಗೋಡೆಗಳಲ್ಲಿ ನೇತು ಹಾಕಲಾಗಿತ್ತು. ಪ್ರವಾಹದ ಭೀಕರತೆಯನ್ನು ಪ್ರದರ್ಶಿಸುವ ವೀಡಿಯೋ ಚಿತ್ರಣ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಿಎಂ ಇದಾವುದನ್ನು ನೋಡಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಶಾಸಕರಾದ ರಾಜುಗೌಡ, ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌, ಎಸ್ಪಿ ಋಷಿಕೇಶ ಭಗವಾನ್‌ ಸೋನಾವಣೆ, ಪಿಐ ಆನಂದರಾವ್‌, ಬಿಜೆಪಿ ತಾಲೂಕು ಅಧ್ಯಕ್ಷ ಅಮರಣ್ಣ ಹುಡೇದ್‌, ಪ್ರಮುಖರಾದ ರಾಜಾ ಹಣಮಪ್ಪ ನಾಯಕ ತಾತಾ, ಡಾ| ಸುರೇಶ್‌ ಸಜ್ಜನ್‌, ಮರಲಿಂಗಪ್ಪ ಕರ್ನಾಳ, ಬಾಬುಗೌಡ ಪಾಟೀಲ, ಎಚ್‌.ಸಿ. ಪಾಟೀಲ, ಬಸವರಾಜ ಸ್ವಾಮಿ, ದೊಡ್ಡದೇಸಾಯಿ ದೇವರಗೋನಾಲ, ಬಿ.ಎಂ. ಹಳ್ಳಿಕೋಟಿ ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.