ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ


Team Udayavani, Jul 21, 2019, 12:52 PM IST

21-July-24

ಸುರಪುರ: ನಗರ ಪಿಂಜಾರ ಸೇವಾ ಸಂಘದ ಕಚೇರಿಯಲ್ಲಿ ಪಿಂಜಾರ ಸಮುದಾಯ ಸಭೆ ಜರುಗಿತು.

ಸುರಪುರ: ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ ಪಿಂಜಾರ, ನದಾಫ್‌ ಸಮುದಾಯವನ್ನು ಅಭಿವೃದ್ಧಿ ಪಡಿಸಲು ಸರಕಾರ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಂಜಾರ, ನದಾಫ್‌ ವಿವಿದೋದ್ದೇಶ ಸೇವಾ ಸಂಘದ ಜಿಲ್ಲಾಧ್ಯಕ್ಷ ಅಹ್ಮದ್‌ ಪಠಾಣ ಒತ್ತಾಯಿಸಿದರು.

ನಗರದ ಸಂಘದ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಪಿಂಜಾರ ಸಮುದಾಯದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸ್ಥಿತಿ ಗತಿ ಕುರಿತು ಅಧ್ಯಯನ ನಡೆಸಿದ ಡಾ| ಸಿ.ಎಸ್‌. ದ್ವಾರಕನಾಥ ಅವರು ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ 2011-12ರಲ್ಲಿಯೇ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದುವರೆಗೂ ಆಡಳಿತಕ್ಕೆ ಬಂದಿರುವ ಸರಕಾರಗಳು ಈ ಕುರಿತು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಸಿದರು.

ಅಲ್ಪ ಸಂಖ್ಯಾತವಾಗಿರುವ ಸಮಾಜದಲ್ಲಿ ಬಡತನ ದಾರಿದ್ರ್ಯ ತಾಂಡವಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳಾದರು ಸಮಾಜದವರಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ನದಾಫ್‌ ಪಿಂಜಾರ, ಮನ್ಸೂರಿ ಜಾತಿಗಳಿಗೆ ಹಿಂದುಳಿದ ವರ್ಗದ ಜಾತಿ ಪ್ರಮಾಣ ಪತ್ರ ನೀಡುವ ಅವಕಾಶವಿದೆ. ಆದರೆ ಅನಕ್ಷರತೆ ಕಾರಣದಿಂದ ಸಮಾಜಕ್ಕೆ ಈ ಸೌಲಭ್ಯ ಸಿಗುತ್ತಿಲ್ಲ. ಶಾಲಾ ಕಾಲೇಜುಗಳಲ್ಲಿ ತಾರತಮ್ಯ ನಡೆಯುತ್ತಿದೆ. ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಕಂದಾಯ ಇಲಾಖೆಯಿಂದಲೂ ಅನ್ಯಾಯವಾಗುತ್ತಿದೆ. ಯೋಜನೆಗಳಿಂದಲೂ ವಂಚಿಸಲಾಗುತ್ತಿದೆ ಎಂದು ದೂರಿದರು.

ಪಿಂಜಾರ, ನದಾಫ್‌ ವಿದ್ಯಾರ್ಥಿಗಳನ್ನು ಮುಸ್ಲಿಂ ಸಮುದಾಯದಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಅನೇಕ ಬಾರಿ ಪ್ರತಿಭಟಿಸಿ ಪ್ರತೇಕ ಜಾತಿ ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಇದು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಗ್ರಾಮ ಲೆಕ್ಕಿಗರು ಖುದ್ದಾಗಿ ಮನೆಗೆ ಭೇಟಿ ನೀಡಿ ಸ್ಥಳಪಂಚನಾಮೆ ಮಾಡಿ ಜಾತಿ ಪ್ರಮಾಣ ಪತ್ರ ನೀಡಲು ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಪಿಂಜಾರ ಮತ್ತು ನದಾಫ್‌ ಸಮಾಜದವರನ್ನು ಖಾದಿಯಾನ ಸಮುದಾಯಕ್ಕೆ ಮತಾಂತರ ಮಾಡುತ್ತಿರುವ ಕೆಲಸ ತೆರೆಮರೆಯಲ್ಲಿ ನಡೆದಿದೆ ಎಂಬ ಗುಮಾನಿ ಇದೆ. ಈ ಕುರಿತು ಸಮಾಜ ಬಾಂಧವರು ಜಾಗೃತಿ ವಹಿಸಬೇಕು. ಸಮಾಜದ ಜನರಲ್ಲಿ ಅರಿವು ಮೂಡಿಸಲು ಅ. 1ರಿಂದ ತಾಲೂಕು ಘಟಕದ ನೇತೃತ್ವದಲ್ಲಿ ಜಾಗೃತಿ ಜಾಥಾ ಅಭಿಯಾನ ಆಯೋಜಿಸಿ ಸಮಾಜದ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಆರೋಗ್ಯ, ಆಹಾರ, ಶಿಕ್ಷಣ, ವಸತಿ ಸೇರಿದಂತೆ ಸರಕಾರದ ವಿವಿಧ ಯೋಜನೆಗಳಿಂದ ವಂಚಿತಗೊಳ್ಳೂತ್ತಿರುವ ಸಮಾಜವನ್ನು ಮುಖ್ಯ ವಾಹಿನಿಗೆ ತರಲು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಸೆಪ್ಟಂಬರ್‌ 5ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್‌ ಪ್ರತಿಭಟನೆ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಸಮಾಜದ ಜಿಲ್ಲಾ ಕಾರ್ಯದರ್ಶಿ ಶರಮುದಿನ್‌ ಶಖಾಪುರ, ತಾಲೂಕು ಅಧ್ಯಕ್ಷ ಅಬ್ದುಲ್ಸಾಬ ನದಾಫ್‌, ಕಾರ್ಯದರ್ಶಿ ಸೋಫಿಸಾಬ ಸೂಗೂರ, ಹುಣಸಗಿ ತಾಲೂಕು ಅಧ್ಯಕ್ಷ ಬಂದಗಿಸಾಬ ಬಸಂತಪೂರ, ಪ್ರಮುಖರಾದ ಖಾಸಿಂಸಾಬ ಅಂಜಳ, ಖಾದರಸಾಬ ನದಾಫ್‌, ಹುಸೇನ ಸಾಬ ಕಿರದಳ್ಳಿ, ಖಾಜಾಹುಸೇನ ದಳಪತಿ, ಬಾದಾಶಾ ನಾಗರಾಳ, ನಬಿರಸೂಲ ಏವುರ, ಹುಸೇನ ಮಂಗ್ಯಾಳ, ಚಾಂದಸಾಬ ಚಂದ್ಲಾಪುರ, ಹುಸೇನ ಹುಣಸಗಿ, ಖಾಶಿಂ ಮುಷ್ಠಳ್ಳಿ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.