ಸುವಿಧಾ ಸ್ಯಾನಿಟರಿ ಪ್ಯಾಡ್‌ ಕೊರತೆ

ಪಿಎಂ ಜನೌಷಧ ಕೇಂದ್ರದಲ್ಲಿ ಸಿಗುತ್ತಿಲ್ಲ ಪ್ಯಾಡ್‌ಮಹಿಳೆಯರು-ಯುವತಿಯರ ಪರದಾಟ

Team Udayavani, Sep 30, 2019, 12:16 PM IST

3-Sepctember-6

ಸಿದ್ದಯ್ಯ ಪಾಟೀಲ
ಸುರಪುರ: ಮಹಿಳೆಯರ ಆರೋಗ್ಯದ ಶುಚಿತ್ವ ಕಾಪಾಡಿಕೊಳ್ಳಲು ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರದಲ್ಲಿ ಸುವಿಧಾ ಸ್ಯಾನಿಟರಿ ಪ್ಯಾಡ್‌ ಕೊರತೆ ಉಂಟಾಗಿದ್ದು, ಖಾಸಗಿ ಔಷಧಾಲಯಗಳಲ್ಲೂ ಸಮರ್ಪಕವಾಗಿ ದೊರೆಯುತ್ತಿಲ್ಲ. ಹೀಗಾಗಿ ಯುವತಿಯರು, ಮಹಿಳೆಯರು ಪರದಾಡುವಂತಾಗಿದೆ.

ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತೆ ಕೇಂದ್ರ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಮಹಿಳೆಯರ ಆರೋಗ್ಯದ ಶುಚಿತ್ವದ ಹಿನ್ನೆಲೆಯಲ್ಲಿ ಹೊಸ ಹೆಜ್ಜೆಯಿಟ್ಟು ಅಗ್ಗದ ದರದಲ್ಲಿ ಪಿಎಂ ಜನೌಷಧ ಕೇಂದ್ರಗಳಿಗೆ ಸುವಿಧಾ ಹೆಸರಿನ ಸ್ಯಾನಿಟರಿ ಪ್ಯಾಡ್‌ಗಳನ್ನು ಸರಬರಾಜು ಮಾಡುತ್ತಿತ್ತು. ಇದರಿಂದ ಅತ್ಯಂತ ಕಡಿಮೆ ದರದ ಸ್ಯಾನಿಟರಿ ಪ್ಯಾಡ್‌ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಯಿತು.

ದುಬಾರಿ ಬೆಲೆ: ಈ ಮೊದಲು ಖಾಸಗಿ ಔಷಧಾಲಯಗಳಲ್ಲಿ ದುಬಾರಿ ದರದಲ್ಲಿ ಪ್ಯಾಡ್‌ ಗಳು ದೊರೆಯುತ್ತಿದ್ದವು. ಬಡ ಮಹಿಳೆಯರಿಗೆ ನಿಲುಕದ ತುತ್ತಾಗಿತ್ತು. ಇದರಿಂದಾಗಿ ಬಡ ಯುವತಿಯರು-ಮಹಿಳೆಯರು ಕೊಳ್ಳಲು ಹಿಂದೇಟು ಹಾಕುತ್ತಿದ್ದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಗ್ಗದ ಬೆಲೆ: ಕೇಂದ್ರ ಸರಕಾರವೂ ಬಡವರಿಗೆ ಕೈಗೆಟಕುವ ಅಗ್ಗದ ದರದಲ್ಲಿ ಪ್ಯಾಡ್‌ಗಳನ್ನು ಸರಬರಾಜು ಮಾಡಲಾಗುತ್ತಿತ್ತು. 4 ಪ್ಯಾಡ್‌ ಹೊಂದಿರುವ ಒಂದು ಪ್ಯಾಕೆಟ್‌ 10 ರೂ.ಗೆ ಲಭ್ಯವಾಗುತ್ತಿತ್ತು. ಇದನ್ನು ಇನ್ನಷ್ಟು ಅಗ್ಗಕ್ಕೆ ಇಳಿಸಿ 1 ರೂ.ಗೆ ಪ್ಯಾಡ್‌ ಲಭ್ಯವಾಗುವಂತೆ ಮಹಿಳೆಯರಿಗೆ ಅನುಕೂಲ ಕಲ್ಪಿಸಿಕೊಡಲಾಗಿತ್ತು.

ಸಿಗದಾದ ಸುವಿಧಾ: ಪಟ್ಟಣದಲ್ಲಿ ಕಳೆದ 15-20 ದಿನಗಳಿಂದ ಪ್ಯಾಡ್‌ಗಳ ಕೊರತೆ ಉಂಟಾಗಿದೆ. ನಿತ್ಯ ಪಿಎಂ ಜನೌಷಧ ಕೇಂದ್ರಗಳಿಗೆ ಮಹಿಳೆಯರು, ಯುವತಿಯರು ತಿರುಗುತ್ತಿದ್ದು, ನಿರಾಶಾಭಾವದಿಂದ ಹಿಂದಿರುಗುತ್ತಿದ್ದಾರೆ. ಬಂದ ಮಹಿಳೆಯರಿಗೆ ಉತ್ತರಿಸುವುದೇ ಜನೌಷಧ ಕೇಂದ್ರಗಳ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮಹಿಳೆಯರಿಗೆ ತೊಂದರೆ: ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ಆರೋಗ್ಯ ಇಲಾಖೆಯಿಂದಲೇ ಪ್ಯಾಡ್‌ಗಳನ್ನು ಪೂರೈಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಕೊರತೆಯುಂಟಾಗಿಲ್ಲ. ಆದರೆ, ಸಾಮಾನ್ಯ ಮಹಿಳೆಯರಿಗೆ, ಯುವತಿಯರಿಗೆ ತೊಂದರೆಯಾಗಿದೆ. ಮಹಿಳೆಯರು ಬಾಯಿಬಿಟ್ಟು ಎಲ್ಲಿ ಹೇಳಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ದರದಲ್ಲಿ ಖಾಸಗಿ ಔಷಧ ಅಂಗಡಿಗಳಲ್ಲಿ ಸಿಗುವ ಪ್ಯಾಡ್‌ಗಳ ಖರಿದೀಸಲಾಗುತ್ತಿಲ್ಲ. ಇದು ಬಡ ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಬೇಡಿಕೆಯಷ್ಟು ಪೂರೈಸುತ್ತಿಲ್ಲ: ಪ್ರತಿ ತಿಂಗಳು ಏನಿಲ್ಲವೆಂದರೂ 70ರಿಂದ 80 ಸಾವಿರ ಪ್ಯಾಡ್‌ಗಳು ಮಾರಾಟವಾಗುತ್ತಿದ್ದವು. ಇತ್ತೀಚಿಗೆ ಮುಂಗಡವಾಗಿ ಬುಕ್‌ ಮಾಡಿದ್ದರೂ ಕೂಡ ಶೇ. ಅರ್ಧಕ್ಕಿಂತಲೂ ಕಡಿಮೆ ಪೂರೈಸುತ್ತಿದ್ದಾರೆ. ಕೆಲದಿನಗಳಿಂದ ಅದು ಕೂಡ ಸಂಪೂರ್ಣವಾಗಿ ನಿಂತು ಹೋಗಿದೆ. ಇದರಿಂದ ಮಹಿಳೆಯರು ನಿತ್ಯ ಅಂಗಡಿಗೆ ಅಲೆದಾಡುವುದು ಮಾತ್ರ ನಿಂತಿಲ್ಲ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.