ಹಿರಿಯರಿಗೆ ಅಗೌರವ ಅಪಾರಾಧ


Team Udayavani, Nov 1, 2019, 2:45 PM IST

1-November-31

ಸುರಪುರ: ಹಿರಿಯ ನಾಗರಿಕರನ್ನು ಅಗೌರವಿಸುವುದು ಮತ್ತು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಇವೆರಡು ಶಿಕ್ಷಾರ್ಹ ಅಪರಾಧವಾಗಿದೆ. ಅಂತವರಿಗಾಗಿ ಹಿರಿಯ ನಾಗರಿಕರ ಸಂರಕ್ಷಣಾ ಹಾಗೂ ಭ್ರೂಣ ಹತ್ಯೆ ತಡೆ ಕಾಯ್ದೆ ಅಡಿ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ ಎಂದು ಸಿವಿಲ್‌ ನ್ಯಾಯಾಧೀಶ ಚಿದಾನಂದ ಬಡಿಗೇರ
ಹೇಳಿದರು.

ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂದೆ, ತಾಯಿ. ಗುರು ಹಿರಿಯರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅದೇ ತೆರನಾಗಿ ಗಂಡು ಬೇಕು ಹೆಣ್ಣು ಬೇಡ ಎಂಬ ಮನೋಭಾವ ಒಳ್ಳೆಯದಲ್ಲ. ಹೆಣ್ಣಿರಲಿ ಗಂಡಿರಲಿ ಮಕ್ಕಳಲ್ಲಿ ಲಿಂಗ ಬೇಧ ಮಾಡದೆ ಸಮಾನತೆಯಂದ ಕಾಣುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ. ಇದನ್ನು ಉಲ್ಲಂಘಿ ಸುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್‌ ನ್ಯಾಯಾಧೀಶೆ ತಯ್ಯಬಾ ಸುಲ್ತಾನ್‌ ಮಾತನಾಡಿ, ಹೆಣ್ಣು ಹುಣ್ಣಲ್ಲ ಜಗದ ಕಣ್ಣು. ಈ ಮನೋಭಾವ ಪ್ರತಿಯೊಬ್ಬ ಪಾಲಕರಲ್ಲಿ ಬೇರೂರಬೇಕು. ಹೆಣ್ಣಿರಲಿ ಗಂಡಿರಲಿ ಬಂಜೆ ಎಂಬ ಶಬ್ದ ಹೊರಲಾರೆ ಎಂಬ ಜನಪದ ಹಾಡಿನ ಗರತಿಯರು ಹೇಳುವಂತೆ ಮಕ್ಳಳ ಸಂಪತ್ತು ಹೊಂದಿದ್ದರೆ ಸಾಕು ಅದುವೇ ಕಟುಂಬದ ಶೋಭೆ. ಸಮಾಜದಲ್ಲಿ ಮಕ್ಕಳಿಂದ ತಂದೆ ತಾಯಿಗೆ ಗೌರವಿದೆ ಹೊರತು ತಂದೆ, ತಾಯಿಯಿಂದ ಅಲ್ಲ. ಕಾರಣ ಮಕ್ಕಳಲ್ಲಿ ಬೇಧಭಾವ ಬೇಡ. ಗಂಡು ಮಗವಿಗೆ ನೀಡುವಷ್ಟು ಸಮಾನ ಅವಕಾಶಗಳನ್ನು ಹೆಣ್ಣು ಮಗುವಿಗೂ ನೀಡುವ ಮೂಲಕ ಅವಳನ್ನು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ವೃದ್ದಾಪ್ಯದಲ್ಲಿರುವ ತಂದೆ, ತಾಯಿಯನ್ನು ವೃದ್ದಾಶ್ರಮಗಳಿಗೆ ತಳುತ್ತಿರುವ ಧಾರುಣ ಘಟನೆಗಳು ಇತ್ತೀಚೆಗೆ ಸಮಾಜದಲ್ಲಿ ನಡೆಯುತ್ತಿವೆ. ಇಂತಹ ಕೃತ್ಯಕ್ಕೆ ಒಳಗಾಗುವ ಸಂತ್ರಸ್ತರು ಹಿರಿಯ ನಾಗರಿಕ ಹಿತರಕ್ಷಣಾ ಕಾಯ್ದೆ ಅಡಿ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಿ ಆಸ್ತಿ ಮರಳಿ ಪಡೆಯಬಹುದು ಅಥವಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ದೂರು ದಾಖಲಿಸಿ ನ್ಯಾಯ ಪಡೆದುಕೊಳ್ಳಬಹುದು.

ಹಿರಿಯ ನಾಗರಿಕರು ಕಾನೂನು ನೆರವು ಪಡೆದುಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಬಿ.ಎನ್‌. ಅಮರನಾಥ, ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಮಹ್ಮದ್‌ ಹುಸೇನ್‌, ಸಹಾಯಕ ಸಿಡಿಪಿಒ ಮೀನಾಕ್ಷಿ
ಪಾಟೀಲ ಮಾತನಾಡಿದರು.

ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕುರಿತು ನ್ಯಾಯವಾದಿ ಸವಿತಾ ಮಾಲಿಪಾಟೀಲ
ಹಾಗೂ ಹಿರಿಯ ನಾಗರಿಕ ಸಂರಕ್ಷಣಾ ಕಾಯ್ದೆ ಕುರಿತು ವಿ.ಎಸ್‌. ಬೈಚಬಾಳ ಉಪನ್ಯಾಸ ನೀಡಿದರು.

ಹಿರಿಯ ವಕೀಲ ಬಸಲಿಂಗಪ್ಪ ಪಾಟೀಲ, ಎಸ್‌. ಸಿದ್ರಾಮಪ್ಪ, ನಂದನಗೌಡ ಪಾಟೀಲ ಇದ್ದರು. ವಕೀಲರ ಸಂಘದ ಕಾರ್ಯದರ್ಶಿ ಮಲ್ಲು ಭೋವಿ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.