ಸರ್ಕಾರಿ ಶಾಲೆಯಲ್ಲಿ ಸೌಲಭ್ಯ ಮರೀಚಿಕೆ
ಶಾಲಾ ಕೊಠಡಿ ಸಂಪೂರ್ಣ ಶಿಥಿಲ•ಕಿತ್ತು ಹೋದ ಛಾವಣಿಯ ಸಿಮೆಂಟ್•ಸೋರುತ್ತಿದೆ ಗ್ರಂಥಾಲಯ ಕೊಠಡಿ
Team Udayavani, Aug 25, 2019, 11:37 AM IST
ಸುರಪುರ: ರಂಗಂಪೇಟೆ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಛಾವಣಿ ಸಿಮೆಂಟ್ ಕಿತ್ತು ಹೋಗಿದೆ.
ಸುರಪುರ: ತಾಲೂಕು ಕೇಂದ್ರದಲ್ಲಿರುವ ತಿಮ್ಮಾಪುರ ರಂಗಂಪೇಟೆಯಲ್ಲಿರುವ ಮೂರು ಸರಕಾರಿ ಶಾಲೆಗಳ ವ್ಯವಸ್ಥೆ ಮೂರಾಬಟ್ಟೆಯಾಗಿದ್ದು, ಅಧಿಕಾರಿಗಳ, ಜನಪ್ರತಿನಿಧಿಗಳ ನಿಷ್ಕಾಳಜಿ ಇದಕ್ಕೆ ಸಾಕ್ಷಿಯಾಗಿದೆ. ತಿಮ್ಮಾಪುರ ರಂಗಂಪೇಟೆ ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಮೌಲಾನ ಅಬ್ದುಲ್ ಕಲಾಂ ಅಜಾದ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮೂಲ ಸೌಕರ್ಯ ಮರಿಚೀಕೆಯಾಗಿವೆ.
ಕನ್ನಡ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಗೆ ಸಂಬಂಧಿಸಿದ 12 ಕೊಠಡಿ ಇದ್ದು, 10 ಸಂಪೂರ್ಣ ಶಿಥಿಲಾವ್ಯವಸ್ಥೆಯಿಂದ ಕೂಡಿವೆ. ಕೊಠಡಿ ಛಾವಣಿ ಕಿತ್ತು ಹೋಗಿದ್ದು, ಕಬ್ಬಿಣ ಸಲಾಕೆಗಳು ಹೊರ ಬಿದ್ದಿವೆ. ಇದರಿಂದ ವಿದ್ಯಾರ್ಥಿಗಳು ಭಯದಲ್ಲಿ ಕಾಲ ಕಳೆಯುವಂತಾಗಿದೆ. ಉರ್ದು ವಿಭಾಗದ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಇದೇ ಆವರಣದಲ್ಲಿದೆ. ಏಳು ಕೊಠಡಿಗಳಿದ್ದು, ಇದರಲ್ಲಿ 5 ಕೊಠಡಿಗಳು ಬೀಳುವ ಹಂತದಲ್ಲಿವೆ. ಇವುಗಳ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ಇದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಶಾಲಾ ಮುಖ್ಯಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಶಾಲೆ ದುಸ್ಥಿತಿ ಕುರಿತು ಮೇಲಧಿಕಾರಿಗಳಿಗೆ ಹಲವು ವರ್ಷಗಳಿಂದ ಮಾಹಿತಿ ದಾಖಲೆ ಸಲ್ಲಿಸುತ್ತಿದ್ದರೂ ಕಡೆಗಣಿಸಲಾಗುತ್ತಿದೆ. ಶಾಲಾ ಆವರಣದಲ್ಲಿರುವ ಗ್ರಂಥಾಲಯದ ಕಟ್ಟಡ ಸಂಪೂರ್ಣ ಬೀಳುವ ಹಂತದಲ್ಲಿದೆ. ಪುಸ್ತಕಗಳು ಅದೇ ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿದೆ. ಮುಖ್ಯಶಿಕ್ಷಕರು ಮಾತ್ರ ಕೊಠಡಿಯೊಳಗೆ ತೆರಳಿ ವಿದ್ಯಾರ್ಥಿಗಳಿಗೆ ಪುಸ್ತಕ ತಂದು ಕೊಡುವ ಕೆಲಸ ಮಾಡುತ್ತಿದ್ದಾರೆ. ಯಾವ ಸಂದರ್ಭದಲ್ಲಿ ಕಟ್ಟಡ ಬಿಳುತ್ತದೆ ಎಂಬ ಆತಂಕ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಗ್ರಂಥಾಲಯ ಕಟ್ಟಡ ಪ್ರವೇಶ ಮಾಡುತ್ತಿಲ್ಲ.
ಮಳೆ ಬಂದರೆ ಮೂರು ಶಾಲೆಯಲ್ಲಿರುವ 23 ಕೊಠಡಿಗಳು ನೀರು ಹರಿದು ಹೊರ ಹೋಗಲು ಅವಕಾಶವಿಲ್ಲದೆ ಜಲಾವೃತವಾಗುತ್ತವೆ. ಶಾಲಾ ಆವರಣದಲ್ಲಿ ನಿಲ್ಲುವ ನೀರು ಹೆಚ್ಚಾದಂತೆ ಕೊಠಡಿಗಳಿಗೆ ನುಗ್ಗುತ್ತದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ನೀರಿನಲ್ಲಿ ಓಡಾಡಬೇಕಿದೆ. ಅಲ್ಲದೆ ನೀರಿನಲ್ಲಿ ಕುಳಿತು ಪಾಠ ಕೇಳಬೇಕಿದೆ. ಛಾವಣಿಗಳು ಮಳೆ ಬಂದರೆ ಸಂಪೂರ್ಣ ಸೋರುತ್ತವೆ. ವಿದ್ಯಾರ್ಥಿಗಳ ದಾಖಲಾತಿಗಳನ್ನು ಸುರಕ್ಷಿತವಾಗಿ ರಕ್ಷಿಸಲು ಮನೆಗೆ ತಗೆದುಕೊಂಡು ಹೋಗುವ ಅನಿವಾರ್ಯತೆ ಶಿಕ್ಷಕರಲ್ಲಿ ಸೃಷ್ಟಿಸಿದೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ಈ ಬಗ್ಗೆ ಯಾರೊಬ್ಬರು ಸ್ಪಂದಿಸದಿರುವುದು ವಿಪರ್ಯಾಸ.
ಕ್ಷೇತ್ರ ಶಿಕ್ಷಣಾಧಿಕಾರಿ, ಸುರಪುರ
•ಮುದ್ದಪ್ಪ ಅಪ್ಪಾಗೋಳ,
ಮುಖ್ಯಗುರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್