ದೊಡ್ಡ ಬಾವಿ ಅಂತರ್ಜಲ ಮಾಯ


Team Udayavani, Sep 11, 2019, 1:34 PM IST

11-Sepctember–12

ಸುರಪುರ: ವಿನಾಶದ ಅಂಚಿನಲ್ಲಿರುವ ರಂಗಂಪೇಟೆ ದೊಡ್ಡ ಬಾವಿ.

ಸಿದ್ದಯ್ಯ ಪಾಟೀಲ
ಸುರಪುರ:
ರಂಗಂಪೇಟೆ ಜನತೆ ಜೀವ ಜಲವಾಗಿದ್ದ ಐತಿಹಾಸಿಕ ಪುರಾತನ ದೊಡ್ಡ ಬಾವಿ ನೀರಿಲ್ಲದೇ ಬರಿದಾಗಿದೆ. ಈ ಹಿಂದೆ ದೊಡ್ಡ ಬಾವಿ ರಂಗಂಪೇಟೆ, ತಿಮ್ಮಾಪುರ ಜನತೆಗೆ ಕುಡಿಯುವ ನೀರೊದಗಿಸುವ ಮೂಲವಾಗಿತ್ತು. ಆದರೆ, ಪ್ರಸ್ತುತ ದಿನದಲ್ಲಿ ಅಂತರ್ಜಲ ಮಟ್ಟ ಕ್ಷೀಣಿಸಿ ಹನಿ ನೀರೂ ಇಲ್ಲದಾಗಿದೆ.

ಬಾವಿ ಹಿನ್ನೆಲೆ: 17ನೇ ಶತಮಾನದಲ್ಲಿ ಅರಸು ಮನೆತನದ ಪಿತಾಂಬರಿ ಬೈರಿಪಿಡ್ಡಾ ನಾಯಕ ಜನತೆಗೆ ಕುಡಿಯುವ ನೀರಿಗಾಗಿ ದೊಡ್ಡ ಬಾವಿ ನಿರ್ಮಿಸಿಕೊಟ್ಟು ಅನುಕೂಲ ಕಲ್ಪಿಸಿದ್ದರು. ಬಾವಿಯನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲಾಗಿದ್ದು, ನಾಲ್ಕು ಕಡೆಯಿಂದಲೂ ಬಾವಿಗೆ ಸರಳವಾಗಿ ಇಳಿಯಲು ಮೆಟ್ಟಲುಗಳ ವ್ಯವಸ್ಥೆ ಮಾಡಲಾಗಿದೆ. ಬಾವಿ 100 ಅಡಿ ಒಳಕ್ಕೆ ಹೋದಂತೆ ಅಲ್ಲಿಯೂ ನೀರು ತುಂಬಿಕೊಂಡು ಮೇಲೆ ಬರಲು ಮೆಟ್ಟಿಲುಗಳ ವ್ಯವಸ್ಥೆ ಮಾಡಲಾಗಿದೆ.

ಸುಜ್ಜಿತ ಕಟ್ಟಡ: ನಾಲ್ಕು ಶತಮಾನ ಕಳೆದರೂ ಇಂದಿಗೂ ಬಾವಿ ತನ್ನ ಸೌಂದರ್ಯ ಕಳೆದುಕೊಂಡಿಲ್ಲ. ಅಂದಿನ ಗುಣಮಟ್ಟದ ಕಾಮಗಾರಿಗೆ ಹಿಡಿದ ಕೈಗನ್ನಡಿ ಇದಾಗಿದೆ. ಬಾವಿ ಮೇಲ್ಭಾಗದಲ್ಲಿ ಸುತ್ತಲೂ 74 ಕಲ್ಲಿನ ಕಂಬಗಳಿಂದ ಕಮಾನು ನಿರ್ಮಿಸಲಾಗಿದೆ. ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಆಗಮಿಸಿದ ಜನರು ವಸತಿ-ವಿಶ್ರಾಂತಿ ಪಡೆಯಲು ತಂಗುದಾಣ ನಿರ್ಮಿಸಿದ್ದು, ಇಂದಿಗೂ ಇವು ಸುಸಜ್ಜಿತವಾಗಿವೆ.

ಪುನಃಶ್ಚೇತನ ಹೆಸರಿನಲ್ಲಿ ಕಳಪೆ ಕಾಮಗಾರಿ: 2016-17ರಲ್ಲಿ ಬಾವಿ ಪುನಃಶ್ಚೇತನಕ್ಕಾಗಿ ಸುಮಾರು 60 ಲಕ್ಷ ರೂ. ಮಂಜೂರಾಗಿತ್ತು. ಈ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸದೇ ಅನುದಾನ ಮುಳುಗಿಸುವ ಕೆಲಸ ಮಾಡಿದ್ದಾರೆ.

ಬಾವಿ ಮೇಲೆ ಹೂಳು: ಬಾವಿಯಲ್ಲಿ ತುಂಬಿದ್ದ ಹೂಳನ್ನು ಎತ್ತಿ ಬೇರೆಡೆ ಸಾಗಿಸದೆ ಮೆಟ್ಟಿಲುಗಳ ಮೇಲೆ ಹಾಕಿ ಹೋಗಿರುವುದು ಕಾಮಗಾರಿ ಎಷ್ಟರ ಮಟ್ಟಿಗೆ ನಿರ್ವಹಿಸಿದ್ದಾರೆ ಎನ್ನುವುದಕ್ಕೆ ಜ್ವಲಂತ ಸಾಕ್ಷಿಯಾಗಿದೆ.

ಅಪೂರ್ಣ ಕಾಮಗಾರಿ: ಬಾವಿ ಸುತ್ತ ಕಾಂಪೌಂಡ್‌ ಎತ್ತರಿಸಿ ಸುತ್ತಲೂ ಸೋಡಿಯಂ ಲೈಟ್‌ಗಳನ್ನು ಹಾಕಬೇಕಿತ್ತು. ಬಾವಿಯ ನಾಲ್ಕು ಕಡೆ ದ್ವಾರಕ್ಕೆ ಗೇಟ್ ಅಳವಡಿಸಿ, ಕಾರಂಜಿ ನಿರ್ಮಿಸುವ ಮೂಲಕ ಪ್ರೇಕ್ಷಣೀಯ ಸ್ಥಳವನ್ನಾಗಿಸುವ ಯೋಜನೆ ರೂಪಿಸಲಾಗಿತ್ತು. ಆದರೆ, ಕೇವಲ ಗೇಟ್‌ಗಳನ್ನು ಮಾತ್ರ ಕೂಡಿಸಿದ್ದು, ಲೈಟ್ ಮತ್ತು ಕಾರಂಜಿ ನಿರ್ಮಿಸದೆ ಕೈ ತೊಳೆದುಕೊಳ್ಳಲಾಗಿತ್ತು. ವಿನಾಶದ ಅಂಚಿನಲ್ಲಿದ್ದ ಬಾವಿ ಸುತ್ತ ಕಮಾನುಗಳು ಬೀಳುವ ಹಂತದಲ್ಲಿದ್ದು, ಅವುಗಳ ದುರಸ್ತಿಯನ್ನು ಮಾಡಿಲ್ಲ.

ನೀರಿನಲ್ಲಿ ಹೋಮವಾದ ಅನುದಾನ: ಎಚ್ಕೆಆರ್‌ಡಿಬಿ ಯೋಜನೆಯಡಿ ಕಾಮಗಾರಿಗೆ 60 ಲಕ್ಷ ರೂ. ಅನುದಾನ ಒದಗಿಸಲಾಗಿತ್ತು. ನಿರ್ಮಿತಿ ಕೇಂದ್ರಕ್ಕೆ ಕಾಮಗಾರಿ ನೀಡಲಾಗಿತ್ತು. ಆದರೆ, ನಿರ್ಮಿತಿ ಕೇಂದ್ರವರು ಕಾಮಗಾರಿ ಪೂರ್ಣಗೊಳಿಸದೆ ಅರ್ಧ ಕಾಮಗಾರಿ ಮಾಡಿ ಕೈ ಬಿಟ್ಟಿದ್ದಾರೆ. ಇದರಿಂದ ಸರಕಾರದ ಅನುದಾನ ನೀರನಲ್ಲಿ ಹೋಮ ಆದಂತಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.