ನಿರಂತರ ಅಧ್ಯಯನದಿಂದ ಯಶಸ್ಸು
•ಕಥೆ-ಕಾವ್ಯ-ಕಾದಂಬರಿ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿರವಾಳ
Team Udayavani, Aug 19, 2019, 1:23 PM IST
ಸುರಪುರ: ರಂಗಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಜರುಗಿತು.
ಸುರಪುರ: ಫಲಿತಾಂಶ ಮತ್ತು ಅಂಕಗಳಿಕೆ ದೃಷ್ಟಿಯಲ್ಲಿಟ್ಟುಕೊಂಡು ಓದಬೇಡಿ. ಜ್ಞಾನ ಸಂಪಾದಿಸಬೇಕು ಎನ್ನುವ ದೃಷ್ಟಿಯಿಂದ ಅಧ್ಯಯನ ಮಾಡಿ ಎಂದು ಉಪಖಜಾನೆ ಅಧಿಕಾರಿ ಮೋನಪ್ಪ ಶಿರವಾಳ ಹೇಳಿದರು.
ರಂಗಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಪಿಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಪಠ್ಯ ವಿಷಯಗಳೊಂದಿಗೆ ಸಾಮಾನ್ಯ ಜ್ಞಾನ ಒದಗಿಸುವ ಇತರೆ ಪುಸ್ತಗಳನ್ನು ಸಹ ಓದಬೇಕು. ಇದರಿಂದ ಜ್ಞಾನ ಸಂಪತ್ತು ಹೆಚ್ಚಾಗುತ್ತದೆ. ಕಥೆ, ಕಾವ್ಯ, ಕಾದಂಬರಿ, ಪ್ರವಾಸ ಕಥನ, ಸಾಹಿತಿಗಳ ಜೀವನ ಚರಿತ್ರೆ ಸೇರಿದಂತೆ ಇತರೆ ಪುಸ್ತಕಗಳನ್ನು ಓದುವ ಅವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೇಸರದ ಓದು ಬೇಡ, ಇಷ್ಟ ಪಟ್ಟು ಓದಬೇಕು. ಅಂದಾಗ ವಿಷಯ ಕಷ್ಟವೆನಿಸುವುದಿಲ್ಲ. ಓದಿಗೆ ವಯಸ್ಸಿನ ಮಿತಿ ಇಲ್ಲ್ಲ, ಓದುವುದರ ಜೊತೆಗೆ ಬರೆಯುವುದನ್ನು ರೂಢಿಸಿಕೊಳ್ಳಿ, ಓದಿದ್ದನ್ನು ಪುನಃ ಪುನಃ ಮನನ ಮಾಡಿಕೊಳ್ಳಬೇಕು. ಟಿ.ವಿ, ಮೊಬೈಲ್ಗಳನ್ನು ಮಿತವಾಗಿ ಬಳಸಿ ಎಂದು ಸಲಹೆ ನೀಡಿದರು.
ಅಬ್ದುಲ್ ರಜಾಕ್ ಭಗವಾನ ಮಾತನಾಡಿ, ಶಿಕ್ಷಕರು ಪಠ್ಯ ವಿಷಯದೊಂದಿಗೆ ನೈತಿಕ ಶಿಕ್ಷಣ ಬೋದಿಸುವುದು ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಕಷ್ಟು ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಬಸವರಾಜ ಕೊಡೇಕಲ್ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಗುರುಲಿಂಗಪ್ಪ ಖಾನಾಪುರ, ಉಪನ್ಯಾಸಕ ಗೌಸಿಯಾ ಬೇಗಂ, ವೆಂಕೋಬ, ನಿಂಗನಗೌಡ ಪಾಟೀಲ, ನಗರಸಭೆ ಸದಸ್ಯ ಜಾಹೀರ ಇದ್ದರು. ಅರುಣಾ ಚಿನ್ನಾಕಾರ ಪ್ರಾಸ್ತಾವಿಕ ಮಾತನಾಡಿದರು. ಅಬ್ದುಲ್ ಅಜೀಜ್ ಸ್ವಾಗತಿಸಿದರು. ಮಹಮ್ಮದ್ ಮಶಾಖ ನಿರೂಪಿಸಿದರು. ಶಕುಂತಲಾ ಜಾಲವಾದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ