ಸುರಪುರ ತಹಶೀಲ್ದಾರ್ ಕಚೇರಿಯಲ್ಲಿ ಕೃಷ್ಣ ಜಯಂತಿ
Team Udayavani, Aug 24, 2019, 11:51 AM IST
ಸುರಪುರ: ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಿಸಲಾಯಿತು.
ಸುರಪುರ: ಸೃಷ್ಟಿಯಲ್ಲಿ ನಡೆಯುವ ಪ್ರತಿಯೊಂದು ಕ್ರಿಯೆಗೂ ಶ್ರೀ ಕೃಷ್ಣನೆ ಕಾರಣ. ಆತನ ಕೃಪ ಕಟಾಕ್ಷೆ ಇಲ್ಲದೆ ಹುಲ್ಲುಕಡ್ಡಿ ಕೂಡ ಅಲುಗಾಡುವುದಿಲ್ಲ ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಹೇಳಿದರು.
ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಶ್ರೀ ಕೃಷ್ಣ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಅಧರ್ಮ ಹೆಚ್ಚಾದಾಗ ಧರೆಗಿಳಿದು ಬಂದು ಧರ್ಮ ರಕ್ಷಿಸುತ್ತೇನೆ ಎಂಬ ಶ್ರೀ ಕೃಷ್ಣನ ಮಾತು ಇಂದು ಸತ್ಯವಾಗಿದೆ. ಕಳೆದ ಕೆಲ ದಿನಗಳ ಹಿಂದೆ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಯಾಗಿತ್ತು. ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಯಿತು. ಜೀವಹಾನಿಯಂತ ಯಾವುದೇ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ರಕ್ಷಿಸಿರುವುದು ಕೃಷ್ಣ ಪರಮಾತ್ಮ ಎಂದರು.
ಯಾದವ ಸಮಾಜದ ರಾಜ್ಯ ಉಪಾಧ್ಯಕ್ಷ ವಿಠuಲ ಯಾದವ ಮಾತನಾಡಿ, ಶ್ರೀ ಕೃಷ್ಣನ ಸಂದೇಶಗಳನ್ನು ಪ್ರತಿಯೊಬ್ಬರು ಅಳವಡಿಸಿ ಕೊಂಳ್ಳಬೇಕೆಂದರು.
ನರಸಿಂಹ ಕುಲಕರ್ಣಿ ಮಾತನಾಡಿ, ಭಗವದ್ಗೀತೆ ವಿಶ್ವದ ಇತರೆ ಧರ್ಮ ಗ್ರಂಥಗಳಿಗಿಂತ ಉತ್ಕೃಷ್ಟವಾಗಿದೆ. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಪ್ರತಿ ಧರ್ಮಕ್ಕೂ ಧರ್ಮ ಗ್ರಂಥಗಳಿವೆ. ಕರ್ಮ ಯೋಗ, ಭಕ್ತಿ ಯೋಗ, ಜ್ಞಾನ ಯೋಗ, ಸಾಂಖ್ಯೆ ಯೋಗ ಸೇರಿದಂತ 12 ಅಧ್ಯಾಯಗಳ ಮೂಲಕ ಮಾನವ ಕಲ್ಯಾಣ ಬಯಸಿ ಶ್ರೀ ಕೃಷ್ಣ ಭೋದಿಸಿರುವ ಸಂದೇಶ ಜಗತ್ತಿಗೆ ಆದರ್ಶವಾಗಿದೆ. ಎಲ್ಲಾ ಧರ್ಮಗಳ ಸಾರ ಹೊಂದಿರುವ ಭಗವದ್ಗೀತೆಯನ್ನು ಪವಿತ್ರ ಗ್ರಂಥ ಎಂದು ಸ್ವೀಕರಿಸಿರುವುದು ಭಾರತೀಯರಾದ ನಮ್ಮೆಲ್ಲರ ಸೌಭಾಗ್ಯ ಎಂದರು. ಗ್ರೇಡ್-2 ತಹಶೀಲ್ದಾರ್ ಸೊಫೀಯಾ ಸುಲ್ತಾನ್, ಖಜಾನೆ ಅಧಿಕಾರಿ ಮಂಗಲಕುಮಾರ ಗುಡುಗುಂಟಿ. ರಂಗಣ್ಣ, ಕೊಂಡಲ ನಾಯಕ, ಪ್ರಮುಖರಾದ ವೀರುಪಾಕ್ಷಿ ಕೋನಾಳ, ಶಿವುರಾಜ ನಾಯಕ ಇತರರಿದ್ದರು. ರವಿ ನಾಯಕ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು