ಮತದಾರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿರಲಿ

ಮತದಾರರ ಸಮಗ್ರ ಮಾಹಿತಿ ಸಂಗ್ರಹಿಸಿ: ಕೂರ್ಮಾರಾವ್‌

Team Udayavani, Sep 1, 2019, 11:33 AM IST

1-September-13

ಸುರಪುರ: ಮತಗತಟ್ಟೆ ಅಧಿಕಾರಿಗಳು ತಮಗೆ ವಹಿಸಿರುವ ಮತ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಲೋಪದೋಷ ಆಗದಂತೆ ಜಾಗೃತಿ ವಹಿಸಿ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ತಾಕೀತು ಮಾಡಿದರು.

ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಮತಗಟ್ಟೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದರ ಪಟ್ಟಿ ಲೋಪದೋಷ ಕುರಿತು ಈ ಹಿಂದೆ ಸಾಕಷ್ಟು ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ. ಪ್ರಸಕ್ತ ಬಾರಿ ಹೀಗಾಗದಂತೆ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮತಗಟ್ಟೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಮತದಾರ ಪಟ್ಟಿ ಪರಿಷ್ಕರಣೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ದೇಶದಾದ್ಯಂತ ಒಂದೇ ಮಾದರಿಯ ಮತಗಟ್ಟೆ ಜಾರಿಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಬೇಕು. ಮತದಾರರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಆಧಾರ ಸಂಖ್ಯೆಯೊಂದಿಗೆ ನಿಗದಿಪಡಿಸಿದ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದರು. ಮೃತಪಟ್ಟಿದ್ದರೆ, ಸ್ಥಳಾಂತರಗೊಂಡಿದ್ದರೆ, ಮದುವೆಯಾಗಿ ಹೋಗಿದ್ದರೆ ಮತ್ತು ಎರಡೆರಡು ಕಡೆ ಮತಪಟ್ಟಿಗಳಲ್ಲಿ ಹೆಸರು ಹೊಂದಿದ್ದರೆ, ಅಂತವರ ಹೆಸರು ತಗೆದು ಹಾಕಬೇಕು. ನೂತನವಾಗಿ ಸೇರ್ಪಡೆ ಮಾಡಿಕೊಳ್ಳಲು ದಾಖಲೆಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಕೊಂಡು ಮಾಹಿತಿ ನೀಡಿದವರ ರುಜು ಪಡೆದುಕೊಳ್ಳಬೇಕು. ಇದನು ಅತ್ಯಂತ ಜಾಗೃತಿಯಿಂದ ನಿರ್ವಹಿಸಬೇಕು ಎಂದರು. ಮತದಾರ ಪಟ್ಟಿ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿ ಪ್ರತಿ ಮತಗಟ್ಟೆ ಅಧಿಕಾರಿಗಳಿಗೆ ಪ್ರತೇಕ ಲಾಗಿನ್‌ ನೀಡಲಾಗುವುದು. ಮೊಬೈಲ್ ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಂಡು ಸಂಗ್ರಹಿಸಿರುವ ಮತದಾರರ ಮಾಹಿತಿಯನ್ನು ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಸಾರ್ವಜನಿಕರಿಗಾಗಿ ನಾಡ ಕಚೇರಿ, ಗ್ರಾಪಂ ಕಚೇರಿ, ಗ್ರಾಹಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಬಹುದು ಎಂದು ತಿಳಿಸಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಿಗರು, ಕಂದಾಯ ಅಧಿಕಾರಿಗಳು, ಗ್ರಾಪಂ ಸಿಬ್ಬಂದಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಸರಿಯಾಗಿ ತಿಳಿಯದಿದ್ದಲ್ಲಿ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯ ಅಧಿಕಾರಿಗಳ ಸಲಹೆ ಪಡೆದುಕೊಳ್ಳಬೇಕು. ಇದೊಂದು ಹೆಚ್ಚಿನ ಹೊರೆ ಎಂದು ತಿಳಿಯದೆ ರಾಷ್ಟ್ರೀಯ ಕರ್ತವ್ಯ ಎಂದು ಭಾವಿಸಿ ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಾಹಯಕ ಆಯುಕ್ತ ಶಂಕರಗೌಡ ಸೋಮನಾಳ ಮಾತನಾಡಿ, ಸೆಪ್ಟೆಂಬರ್‌ 1ರಿಂದ 30ರ ವರೆಗೆ ಮತದಾರ ಪಟ್ಟಿ ಪರಿಷ್ಕರಣಿ ಅಭಿಯಾನ ನಡೆಯಲಿದೆ. ನೂತನವಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳಬಯಸುವ ಮತದಾರರು ಸಂಬಂಧಿಸಿದ ಬಿಎಲ್ಒಗಳ ಬಳಿ ಸಮರ್ಪಕ ಮಾಹಿತಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಿಬ್ಬಂದಿಗಳಿಗೆ ಸಹಾಯ ಸಹಕಾರ ನೀಡಿ ಪಾರದರ್ಶಕ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣಕ್ಕೆ ನೆರವಾಗಬೇಕು ಎಂದು ತಿಳಿಸಿದರು. ತಹಶೀಲ್ದಾರ್‌ ಸುರೇಶ ಅಂಕಲಗಿ, ಹುಣಸಗಿ ತಹಶೀಲ್ದಾರ್‌ ಸುರೇಶ ಚವಲ್ಕರ್‌, ಚುನಾವಣಾ ಶಿರಸ್ತೇದಾರ್‌ ಅಶೋಕ ಸುರಪುರ, ಸಹಾಯಕ ಅಶೋಕ ಬಿರಾದಾರ, ಕಂದಾಯ ನಿರೀಕ್ಷಕರಾದ ಗುರುಬಸಪ್ಪ ಪಾಟೀಲ, ಮಹ್ಮದ್‌ ರಾಜಾ ಸಾಬಾ, ವಿಠ್ಠಲ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.