ಖಾಲಿ ಕೊಡಗಳೊಂದಿಗೆ ನಾಗೂರಲ್ಲಿ ಪ್ರತಿಭಟನೆ

ಕುಡಿಯುವ ನೀರಿಗೆ ಹಾಹಾಕಾರ

Team Udayavani, May 22, 2019, 4:58 PM IST

22-May-32

ತಾಳಿಕೋಟೆ: ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಆಗ್ರಹಿಸಿ ನಾಗೂರ ಗ್ರಾಮಸ್ಥರು ತಹಶೀಲ್ದಾರ್‌ ಕಚೇರಿಮುಂದೆ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.

ತಾಳಿಕೋಟೆ: ನಾಗೂರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಬುಗಿಲೆದ್ದಿದ್ದು ಗ್ರಾಮಸ್ಥರರು ತಹಶೀಲ್ದಾರ್‌ ಕಚೇರಿ ಮುಂದೆ ಖಾಲಿ ಕೊಡಗಳೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ನಾಗೂರ ಗ್ರಾಮಕ್ಕೆ ಬಹುಹಳ್ಳಿ ಕುಡಿಯುವ ಯೋಜನೆಯ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಈ ಯೋಜನೆಗೆ ಸಂಬಂಧಿಸಿ ಕೆರೆಯಲ್ಲಿ ಸಂಗ್ರಹಿಸಿದ ನೀರೆಲ್ಲವೂ ಕಲುಷಿತಗೊಂಡಿದೆ. ಇಂತಹ ನೀರನ್ನೇ ವಾರಕ್ಕೊಮ್ಮೆ ಸರಬರಾಜು ಮಾಡಲಾಗುತ್ತಿದೆ. ಈ ನೀರು ವಾಸನೆ ಬರುತ್ತಿದ್ದು ಇಂತಹ ನೀರಿನ ಸೇವನೆಯಿಂದ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿದೆ.

ಗ್ರಾಮದಲ್ಲಿ ಒಂದೂ ಬೋರ್‌ವೆಲ್ ಕೊರೆಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಜಾನುವಾರುಗಳು ಹನಿ ನೀರಿಗೂ ಪರದಾಡುವಂತಾಗಿದೆ. ಗ್ರಾಮದಲ್ಲಿರುವ ಬಾವಿಗಳೆಲ್ಲವೂ ಬತ್ತಿ ಹೋಗಿವೆ. ನೀರು ಹುಡುಕಿಕೊಂಡು ಸುಮಾರು 4 ಕಿ.ಮೀ. ದೂರದ ಬಪ್ಪರಗಿ ಗ್ರಾಮಕ್ಕೆ ಎತ್ತಿನ ಬಂಡಿಯಲ್ಲಿ, ಸೈಕಲ್ ಮೇಲೆ ಹೋಗಿ ತರುತ್ತಿದ್ದೇವೆ. ನಮಗೆ ಬಂದಿರುವ ಕುಡಿಯುವ ನೀರಿನ ಕಷ್ಟಕ್ಕೆ ಯಾವೊಬ್ಬ ಅಧಿಕಾರಿಯೂ ಸ್ಪಂದಿಸುತ್ತಿಲ್ಲ. ನೀರಿನ ಸಮಸ್ಯೆ ಕುರಿತು ಸಾಕಷ್ಟು ಬಾರಿ ಜಿಪಂ ಸಿಇಒ, ತಾಪಂ ಇಒಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ನಿಂಗಪ್ಪ ಬಿರಾದಾರ ಅವರು ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಿದರಲ್ಲದೇ ಸ್ಥಳದಲ್ಲಿಯೇ ದೂರವಾಣಿ ಮೂಲಕ ಮೂಕಿಹಾಳ ಪಿಡಿಒ ಅವರನ್ನು ಸಂಪರ್ಕಿಸಿ ನಾಗೂರ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಸ್ಪಂದಿಸಬೇಕೆಂದು ಸೂಚಿಸಿದರು. ನಂತರ ಗ್ರಾಮಸ್ಥರೊಂದಿಗೆ ಮಾತನಾಡಿ ಗ್ರಾಮಕ್ಕೆ ನಾನೇ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇನೆ ಎಂದು ಗ್ರಾಮಸ್ಥರರಿಗೆ ಭರವಸೆ ನೀಡಿದರು.

ತಹಶೀಲ್ದಾರ್‌ ಭರವಸೆ ಮೆರೆಗೆ ಗ್ರಾಮಸ್ಥರರು ಪ್ರತಿಭಟನೆ ಕೈ ಬಿಟ್ಟರು. ನಾಗೂರ ಗ್ರಾಮದ ಮುಖಂಡರಾದ ಶಿವರಾಜ್‌ ಗುಂಡಕನಾಳ, ಜೆಟ್ಟೆಪ್ಪ ಭಂಟನೂರ, ಶಿವರಾಯ ಮುದ್ನೂರ, ಮಲ್ಲಪ್ಪ ಬಿರಾದಾರ, ಮಾಳಪ್ಪ ಬಿರಾದಾರ, ಹನುಮಂತ್ರಾಯ ಕೆಂಭಾವಿ, ಮಲ್ಲಯ್ಯ ಹಿರೇಮಠ, ಆನಂದ ಹೂಗಾರ, ಶರಣು ಗುಂಡಕನಾಳ, ಶಿವಪ್ಪ ಹೂಗಾರ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.