ದೇಶಭಕ್ತಿ ಮೂಡಿಸುತ್ತದೆ ಆರೆಸ್ಸೆಸ್‌


Team Udayavani, Oct 19, 2019, 11:57 AM IST

19-October-7

ತಾಳಿಕೋಟೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘ 93 ವರ್ಷದಿಂದ ದೇಶಭಕ್ತಿ ಮೂಡಿಸುತ್ತ ಸಾಗಿದೆ ಎಂದು ಆರೆಸ್ಸೆಸ್‌ ಜಿಲ್ಲಾ ವಿಭಾಗ ಪ್ರಚಾರಕ ಪ್ರಮುಖ ದಯಾನಂದ ಹೇಳಿದರು. ಶುಕ್ರವಾರ ಪಟ್ಟಣದ ಕನ್ನಡ ಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲೆಯ ಪ್ರಾಥಮಿಕ ಶಿಕ್ಷಾ ವರ್ಗದ ಯುಗಾಬ್ದದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

1925ರಲ್ಲಿ ನಾಗಪುರದಲ್ಲಿ ಡಾ| ಹೆಡಗೆವಾರ ಪ್ರಾರಂಭಿಸಿದ ಸಂಘಟನೆ ತನ್ನ ಧ್ಯೇಯೋದ್ದೇಶಗಳೊಂದಿಗೆ ಮುನ್ನಡೆದಿದೆ. ಬ್ರಿಟಿಷರ ಕಪಿಮುಷ್ಠಿಯಲ್ಲಿದ್ದ ಭಾರತ ದೇಶವನ್ನು ಸ್ವತಂತ್ರಗೊಳಿಸಬೇಕು. ಸ್ವತಂತ್ರಗೊಳಿಸಿಯೇ ತೀರುತ್ತೇವೆ ಎಂಬ ಶಪಥದ ಮೇಲೆ ಪ್ರಾರಂಭಗೊಂಡ ಸಂಘಟನೆ ಈಗ ಜಗತ್ತಿನ 40 ದೇಶಗಳಲ್ಲಿ ಬೆಳೆದು ನಿಂತಿದೆ ಎಂದರು.

ಅಂದಿನ ರಾಜರುಗಳ ಆಡಳಿತದಲ್ಲಿ ಕೆಲವರು ಬ್ರಿಟಿಷರ್‌ ಸೊಪ್ಪಿಗೆ ಬಲಿಯಾಗಿ ಸಾಮ್ರಾಜ್ಯವನ್ನು ಧ್ವಂಸಗೊಳಿಸಿದರು. ದೇಶ ಕಂಡ ಅಪ್ರತಿಮವೀರ ಮಹಾರಾಣಾಪ್ರತಾಪಸಿಂಹ್‌ ಕಾಲದಲ್ಲಿ ಅವರದೇ ಸಾಮ್ರಾಜ್ಯದಲ್ಲಿದ್ದ ಮಾನಸಿಂಗ್‌ ಎಂಬ ವ್ಯಕ್ತಿ ಅವನನ್ನು ಸೋಲಿಸಲು ಕಾರಣನಾದ. ಬ್ರಿಟಿಷರಿಗೆ ನಡುಕನ್ನೇ ಹುಟ್ಟಿಸಿದ ಕಿತ್ತೂರ ರಾಣಿ ಚನ್ನಮ್ಮನ ಆಸ್ಥಾನದಲ್ಲಿ ಮಲ್ಲಪ್ಪ ಶೆಟ್ಟಿ ಎಂಬಾತ ಆಕೆಯನ್ನು ಬಂಧಿಸಲು ಬ್ರಿಟಿಷರಿಗೆ ಸಹಾಯ ಮಾಡಿದ. ಇಂತಹ ಅನೇಕ ರಾಜಮಹನೀಯರ ಅವನತಿ ಹಿಂದೆ ನಮ್ಮವರ ಕೈವಾಡ ಅಡಗಿದೆ ಎಂದರು.

ಛತ್ರಪತಿ ಶಿವಾಜಿ ಮಹಾರಾಜರ ಆಡಳಿತದಲ್ಲಿ ಬೆರಳೆಣಿಕಯಷ್ಟು ಸೈನಿಕರಿದ್ದರೂ ಕೂಡಾ ಸುಸ್ತೆಂಬುದೇ ಇದ್ದಿಲ್ಲ. ಧರ್ಮ ಎಂಬ ವಿಷಯ ಬಂದಾಗ ಕೆಲಸ ಮುಗಿಯುವವರೆಗೂ ಹೋರಾಡುವುದನ್ನು ರೂಢಿಸಿಕೊಂಡಿದ್ದರು. ಒಮ್ಮೆ ಔರಂಗಜೇಬನು ಶಿವಾಜಿ ಜೊತೆ ಲಕ್ಷಾಂತರ ಸೈನಿಕರೊದಿಗೆ ಯುದ್ಧಕ್ಕೆ ಹೋದಾಗ ಮರಳಿ ತನ್ನ ಸ್ಥಾನಕ್ಕೆ ಹೋಗಲಿಲ್ಲ.

ಅಷ್ಟೋಂದು ಕೆಚ್ಚೆದೆಯಿಂದ ಸುಸ್ತಾಗದೇ ತಮ್ಮ ಕಾರ್ಯದಲ್ಲಿ ಶಿವಾಜಿ ಸೈನಿಕರು ಹೋರಾಡಿದ್ದರು ಎಂದು ಶಿವಾಜಿ ಮಹಾರಾಜರು ಹಿಂದೂ ಸ್ವರಾಜ್ಯ ಸ್ಥಾಪನೆಗೋಸ್ಕರ ಮಾಡಿದ ಕೆಲಸ ಕಾರ್ಯಗಳನ್ನು ವಿವರಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ 7 ದಿನಗಳಿಂದ ನಡೆದ ಪ್ರಾಥಮಿಕ ಶಿಕ್ಷಾ ವರ್ಗ ಕಾರ್ಯಚಟುವಟಿಕೆಗಳ ಕುರಿತು ಸಂಘ ಎಂದರೇನು? ಸಂಘದ ಸ್ವಯಂ ಸೇವಕರು ಮಾಡುತ್ತಿರುವ ದಿನದ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿ ಬ್ರಿಟಿಷರ ಕಾಲದಲ್ಲಿಯೇ ಅಂಜಿ ಅಳುಕದೇ ಅಂದು ಸಂಘ ಪ್ರಾರಂಭಿಸಿರುವುದರಿಂದ ಈಗ ಸಂಘದ ನೇತೃತ್ವದಲ್ಲಿ 50 ಸಾವಿರಕ್ಕೂ ಹೆಚ್ಚು ಗ್ರಾಮಗಳಲ್ಲಿ ಶಾಲೆಗಳು ನಡೆಯುತ್ತಿವೆ 1.50 ಲಕ್ಷಕ್ಕೂ ಅ ಧಿಕ ಸ್ವಯಂ ಸೇವಕರು ತಮ್ಮ ಕಾರ್ಯ ನಡೆಸುತ್ತಿದ್ದಾರೆಂದು ಹೇಳಿದರು.

ಗುಂಡಕನಾಳ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಪ್ರಾಥಮಿಕ ಶಿಕ್ಷಾ ವರ್ಗದ ವರ್ಗಾಧಿಕಾರಿ ಎಸ್‌.ಎಂ. ಸಜ್ಜನ ವರದಿ  ವಾಚಿಸಿದರು.

ಪಥ ಸಂಚಲನ: ಬಹಿರಂಗ ಸಭೆಗೂ ಮುನ್ನ ಗಣ ವೇಷಧಾರಿ ರಾಷ್ಟ್ರೀಯ ಸ್ವಯಂ ಸೇವಕರಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲ ನಡೆಯಿತು. ಪಥಸಂಚಲನ ಉದ್ದಕ್ಕೂ ಮಹಿಳೆಯರು ದಾರಿಯೂದ್ದಕ್ಕೂ ರಂಗೋಲಿ ಚಿತ್ತಾರ ಬಿಡಿಸಿದ್ದರು. ವೀರ ಮಹಾ ಪುರುಷರಾದ ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾಪ್ರತಾಪ ಹಾಗೂ ಕಿತ್ತೂರು ರಾಣಿ ಚನ್ನಮ್ಮ, ಭಗತ್‌ಸಿಂಗ್‌, ಸ್ವಾಮಿ ವಿವೇಕಾನಂದರ ಒಳಗೊಂಡಂತೆ ಅನೇಕರ ವೇಷ ಧರಿಸಿದ ಮಕ್ಕಳು ಜನಮನ ಸೆಳೆದರು.

ಕಾರ್ಯಕ್ರಮದ ಮೊದಲಿಗೆ ಸ್ವಯಂ ಸೇವಕರಿಂದ ಶಾರೀರಿಕ ಪ್ರದರ್ಶನ ನಡೆಯಿತು. ಘೋಷ ಪ್ರದರ್ಶನ, ಯೋಗ ಪ್ರದರ್ಶನ, ದಂಡ ಪ್ರದರ್ಶನ, ಕರಾಟೆ, ಸರಪಳಿ ಹಾಗೂ ಬಿಚ್ಚು ಆಟ, ಸೇತುವೆ ಹಾರುವ ಆಟ, ಸಾರಿಗೆ ವಾಹನ ಆಟ, ತುರ್ತು ಚಿಕಿತ್ಸೆ ಕ್ರಮ ಕೈಗೊಳ್ಳುವ ಆಟ, ಗೋಪುರ ಆಟ, ದಂಡ ವ್ಯಾಯಾಮಗಳನ್ನು ಪ್ರದರ್ಶಿಸಲಾಯಿತು. ಸ್ವಯಂ ಸೇವಕ ಪರಮೇಶ್ವರ ಕುಂಬಾರ ಸ್ವಾಗತಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.