ಈ ಶಾಲೆಗೆ ದಾರಿ ಯಾವುದಯ್ನಾ?

ಎಲ್ಲೆಂದರಲ್ಲಿ ಮಲೀನ ನೀರು ಶಾಲೆ ಪಕ್ಷದಲ್ಲೇ ಶೌಚಾಲಯದುರ್ವಾಸನೆ ನಡುವೆ ಬೋಧನೆ

Team Udayavani, Nov 15, 2019, 1:08 PM IST

15-November-8

„ಲಕ್ಷ್ಮಣ ಹಿರೇಕುರುಬರ
ತಾಂಬಾ:
ಅಸರ್ಮಪಕ ಚರಂಡಿ ವ್ಯವಸ್ಥೆ ಮತ್ತು ಸಾಮೂಹಿಕ ಶೌಚಾಲಯದ ಕಲುಷಿತ ನೀರು ರಸ್ತೆತುಂಬ ಹರಿಯುತ್ತಿರುವುದರಿಂದ ಇಲ್ಲಿನ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆಗೆ ಹೋಗಲು ದಾರಿ ಇಲ್ಲದಂತಾಗಿದೆ.!

ಗ್ರಾಮದ ಇಂದಿರಾ ನಗರದಲ್ಲಿ ಸುಮಾರು 2000 ಜನರು ವಾಸಿಸುತ್ತಿದ್ದು, ಇಲ್ಲಿ ಮೂಲ ಸೌಲಭ್ಯಗಳು ಮರೀಚಿಕೆಯಾಗಿವೆ. ಗ್ರಾಪಂ ಸದಸ್ಯರು, ಅಧಿಕಾರಿಗಳು ಸಮರ್ಪಕ ಚರಂಡಿ ನಿರ್ಮಿಸದ ಕಾರಣ ರಸ್ತೆಗುಂಟ ಚರಂಡಿ ನೀರು ಹರಿದು ಶಾಲೆ ಕಟ್ಟಡಕ್ಕೆ ಹತ್ತಿಕೊಂಡಿರುವ ಶೌಚಾಲಯದಲ್ಲಿ ಸಂಗ್ರಹಗೊಂಡಿದೆ. ಇದು ಈಗ ಗಬ್ಬೆದ್ದು ನಾರುತ್ತಿದ್ದು, ಸರ್ಕಾರಿ ಪ್ರೌಢಶಾಲೆಗೆ ತೆರಳುವ ಮಕ್ಕಳಿಗೆ ತೊಂದರೆಯಾಗಿದೆ. ಇಲ್ಲಿ ಜ್ಞಾನ ದೇಗುಲವಿದ್ದು, ಮೂಗು ಮುಚ್ಚಿಕೊಂಡು ಬಾ ಎನ್ನುವಂತಾಗಿದೆ.

ಶಾಲೆ ಪಕ್ಕವೇ ಸಾಮೂಹಿಕ ಶೌಚಾಲಯ: ಶಾಲೆಯೆಂದರೆ ಜೀವಂತ ದೇವರ ದೇಗುಲ. ಆದರೆ, ಶಾಲೆ ಪಕ್ಕವೇ ಸಾಮೂಹಿಕ ಶೌಚಾಲಯ ನಿರ್ಮಿಸಲಾಗಿದೆ. ಗ್ರಾಮದ ಬಚ್ಚಲ ನೀರು ಮತ್ತು ಇಡೀ ಗ್ರಾಮದ ತ್ಯಾಜ್ಯವನ್ನು ಇಲ್ಲಿಯೇ ಎಸೆಯಲಾಗುತ್ತಿದೆ. ಹೀಗಾಗಿ ಮಕ್ಕಳು ನಿತ್ಯ ಪಾಠ, ಆಟ, ಬಿಸಿಯೂಟವನ್ನು ದುರ್ವಾಸನೆಯಲ್ಲಿಯೇ ಮಾಡಬೇಕಿದೆ. ಶಾಲೆಯ ಪಕ್ಕದಲ್ಲಿರುವ ಸಾಮೂಹಿಕ ಶೌಚಾಲಯದ ದುರ್ವಾಸನೆಗೆ ಶಾಲಾ ಶಿಕ್ಷಕರು ಬೇಸತ್ತಿದ್ದಾರೆ. ಅವರು ಕೂಡ ಮೂಗು ಮುಚ್ಚಿಕೊಂಡೆ ಶಾಲೆಗೆ ಬರುವಂತಾಗಿದೆ.

ಸಾಂಕ್ರಾಮಿಕ ರೋಗ ಭೀತಿ: ಗ್ರಾಮದಲ್ಲಿನ ಕಲುಷಿತ ವಾತಾವರಣದಿಂದ ಚಿಕ್ಯೂನ್‌ ಗುನ್ಯಾ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗ ಭೀತಿ ಇಲ್ಲಿಯ ಜನರ ಹಾಗೂ ಶಾಲಾ ಮಕ್ಕಳನ್ನು ಕಾಡುತ್ತಿದೆ. ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಇಲ್ಲ. ಬಹಿರ್ದೆಸೆಗೆ ಬಯಲೆ
ಗತಿ ಎನ್ನುವಂತಾಗಿದೆ. ಯಾವೊಬ್ಬ ಅಧಿಕಾರಿಗಳು ಇಲ್ಲಿಯ ಪರಿಸ್ಥಿತಿ ಅರಿತು ಜನರಿಗೆ ವೈಯಕ್ತಿಕ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ತಿಳಿವಳಿಕೆ ನೀಡುತ್ತಿಲ್ಲ. ಶಾಲೆಯ ಪಕ್ಕದಲ್ಲಿರುವ ಶೌಚಾಲಯ ತೆರವು ಗೊಳಿಸುವ ಪ್ರಯತ್ನ ಮಾಡಿಲ್ಲ.

ಶಾಲೆಯ ಮುಖ್ಯಗುರುಗಳು 2013ರಲ್ಲಿ ಸಾರ್ವಜನಿಕ ಶೌಚಾಲಯ ತೆರವುಗೊಳಿಸಿ ಶಾಲೆಗೆ ಹೋಗಲು ರಸ್ತೆಯನ್ನು ಡಾಂಬರೀಕರಣಗೊಳಿಸಬೇಕೆಂದು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಇಲ್ಲಿಯವರೆಗೆ ಏನು ಪ್ರಯೊಜನವಾಗಿಲ್ಲ. ಜನಪ್ರತಿನಿಧಿ ಗಳಿಗೆ ಮನವಿ ಸಲ್ಲಿಸಿದರೂ ಮಕ್ಕಳಿಗೆ ರಸ್ತೆ ಇಲ್ಲದಂತಾಗಿದೆ. ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ ವೇಳೆ ಈ ದುಸ್ಥಿತಿಯನ್ನು ಕಂಡು ಕಾಣದಂತೆ ಇದ್ದರು ಎನ್ನಲಾಗಿದೆ.

ಗ್ರಾಪಂ ನಿರ್ಲಕ್ಷ್ಯ :ಈ ಶಾಲೆ ಆವರಣದ ಅಕ್ಕ-ಪಕ್ಕ, ಮುಳ್ಳು-ಕಂಟಿ, ಸಗಣಿ ತಿಪ್ಪೆಗಳು ಇವೆ. ಮಲೀನವಾದ ನೀರು ಹೊರ ಹೋಗಲು ಚರಂಡಿಯ ವ್ಯವಸ್ಥೆ ಇದ್ದೂ ಇಲ್ಲದಂತಿದೆ. ಚರಂಡಿ ನೀರು ರಸ್ತೆಯ ಮೇಲೆ ಹರಿದಾಡಿ ಗಬ್ಬುವಾಸನೆ ಇದ್ದರೂ ಸಹಿಸಿಕೊಂಡು ಇಲ್ಲಿಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಸುಗಮವಾಗಿ ತೆರಳು ರಸ್ತೆಯೇ ಇಲ್ಲದಂತಾಗಿದೆ. ಹೀಗಾಗಿ ಶಾಲೆಗೆ ಬರುವುದೇ ಬೇಸರವಾಗಿದೆ. ಇಲ್ಲಿರುವ ಅವ್ಯವಸ್ಥೆ ಕಂಡರೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾಗಲಿ, ಜನರಿಂದ ಚುನಾಯಿತರಾದ ಜನಪ್ರತಿನಿಧಿಗಳಾಗಲಿ, ಇದಕ್ಕೆ ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನಾದರೂ ಸಂಬಂಧಿಸಿದ ಅ ಧಿಕಾರಿಗಳು ಅಥವಾ ಗ್ರಾಪಂ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮತ್ತು ಶಾಲೆ ಮುಖ್ಯಗುರು ಎ.ಆರ್‌. ದರ್ಗಾ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.