ಪ್ರಧಾನಿ ಆದರ್ಶ ಗ್ರಾಮವಾಗಿ ಕಾಮನದುರ್ಗ ಆಯ್ಕೆ


Team Udayavani, Dec 30, 2019, 3:09 PM IST

30-December-13

ತರೀಕೆರೆ: ಗ್ರಾಪಂನ ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮವನ್ನು ಅಭಿವೃದ್ಧಿ ಕಡೆಗೆ ಪಡೆದು ಉತ್ತಮ ಗ್ರಾಮ ಪಂಚಾಯಿತಿಯಾಗಿರುವ ಕಾಮನದುರ್ಗ ಪಂಚಾಯಿತಿ ಗಾಂಧಿ  ಗ್ರಾಮ ಪುರಸ್ಕಾರ ಪಡೆದು ಈಗ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು, ಮತ್ತಷ್ಟು ಅಭಿವೃದ್ಧಿ ಹೊಂದುವ ಭಾಗ್ಯ ದೊರೆತಿದೆ.

ಕೇಂದ್ರದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎರಡನೇ ಹಂತದಲ್ಲಿ ಆಯ್ಕೆಯಾಗಿರುವ ಜಿಲ್ಲೆಯ 10 ಗ್ರಾಮಗಳಲ್ಲಿ ಕಾಮನದುರ್ಗ “ಸಂತವೇರಿ’ವೂ ಒಂದು. ಅರಳಗುಪ್ಪೆ, ಹಿರೇಕೊಳಲೆ, ಶಿರವಾಸೆ, ಎಮ್ಮೆದೊಡ್ಡಿ, ಸತ್ತಿಹಳ್ಳಿ, ಆವತಿ, ಯರದಕೆರೆ, ಮಾಗಡಿ ಹಾಗೂ ಅನೂರು ಇನ್ನಿತರ ಗ್ರಾಮಗಳು. ಆದರ್ಶ ಗ್ರಾಮವಾಗಿ ಆಯ್ಕೆಗೊಂಡಿರುವುದು ಇಲ್ಲಿನ ಗ್ರಾಮಸ್ಥರ ಸಂತಸವನ್ನು ಮುಗಿಲ್ಲೆತ್ತರಕ್ಕೆ ಮುಟ್ಟಿಸಿದೆ.

ಯೋಜನೆಗೆ ಆಯ್ಕೆಗೊಂಡಿರುವ ಗ್ರಾಮಗಳು ಅನುದಾನವನ್ನು 2 ವರ್ಷದ ಅವಧಿಯಲ್ಲಿ ಬಳಕೆ ಮಾಡಬೇಕು. ಯೋಜನೆಯ ಕ್ರಿಯಾಯೋಜನೆ ತಯಾರಿಸುವ ಸಂಪೂರ್ಣ ಹೊಣೆಗಾರಿಕೆ ಹೊತ್ತ ಗ್ರಾಪಂ ಮಟ್ಟದ ವಿಲೇಜ್‌ ಪಿಎಂಎಜಿವೈ ಕನ್ವರ್‌ಜೆನ್ಸ್‌ ಕಮಿಟಿ ಕ್ರಿಯಾಯೋಜನೆ ರೂಪಿಸುವಾಗ ಸರಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೈಗೆತ್ತಿಕೊಳ್ಳುವ ಕಾಮಗಾರಿಗಳು ಸರಕಾರಗಳ ಯೋಜನೆಗಳಲ್ಲಿ ಕೈಗೆತ್ತಿಕೊಂಡಿರಬಾರದು. ಅವುಗಳ ಹೊರತಾಗಿ ಗ್ರಾಮದಲ್ಲಿ ಸಿ.ಸಿ ರಸ್ತೆ, ಅಂಗನವಾಡಿ ಕಟ್ಟಡ, ಚರಂಡಿ, ಸ್ತ್ರೀ ಶಕ್ತಿ ಹಾಗೂ ಸ್ವಸಹಾಯ ಗುಂಪುಗಳ ಚಟುವಟಿಕೆಗೆ ಉತ್ತೇಜನ, ಜನರಲ್ಲಿರುವ ಮೂಢನಂಬಿಕೆ ಹೋಗಲಾಡಿಸುವುದು.

ಶಾಲಾ ಕಾಂಪೌಂಡ್‌ ನಿರ್ಮಾಣ, ಬೀದಿ ನಾಟಕ ಪ್ರದರ್ಶನ, ರೈತರ ಕೃಷಿಭೂಮಿಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರಿನ ಸೌಕರ್ಯ, ಸೋಲಾರ್‌ ಬೀದಿದೀಪ ಅಳವಡಿಕೆ, ವಿದ್ಯುತ್‌ ರಹಿತ ಮನೆಗಳಿಗೆ ವಿದ್ಯುತ್‌ ಸಂಪರ್ಕ, ಜನವಸತಿ ಪ್ರದೇಶಗಳಲ್ಲಿ ಸಮುದಾಯದತ್ತ ಶೌಚಾಲಯ ನಿರ್ಮಾಣ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ರೂಪಿಸಿ ಸಂಬಂಧಿತ ಏಜೆನ್ಸಿಗಳ ಮೂಲಕ ನಿರ್ವಹಣೆ ಮಾಡಿಸಬೇಕು.

ಅಭಿವೃದ್ಧಿ, ಪಾರದರ್ಶಕ ಆಡಳಿತ, ಸ್ವಚ್ಛತೆಯ ಬಗ್ಗೆ ಅಗತ್ಯ ಕಾಳಜಿ ವಹಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕಾಮನದುರ್ಗ ಗ್ರಾಪಂಗೆ ಕೇಂದ್ರ ಸರ್ಕಾರದ ನಿರ್ಮಲ ಗ್ರಾಮ, ರಾಜ್ಯ ಸರ್ಕಾರದ ಗಾಂಧಿ  ಗ್ರಾಮ, ಬಸವಜ್ಯೋತಿ, ಬಸವರತ್ನಗಳಂತಹ ಪ್ರಶಸ್ತಿ ಪಡೆದುಕೊಂಡಿದೆ. ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಿಂದ ಗ್ರಾಮಕ್ಕೆ ಹಲವಾರು ಸೌಲಭ್ಯ ದೊರಕುತ್ತಿರುವುದರಿಂದ ಗ್ರಾಮದ ಅಭಿವೃದ್ಧಿಯಾಗಲಿದೆ.

ಸೂಕ್ತ ರೀತಿಯಲ್ಲಿ ಕ್ರಿಯಾಯೋಜನೆ ರೂಪಿಸಿದಲ್ಲಿ ಕಾಮನದುರ್ಗ ಆದರ್ಶ ಗ್ರಾಮ ಯೋಜನೆಯಿಂದ ತನ್ನ ಸ್ವರೂಪವನ್ನೇ ಬದಲಾಯಿಸಿಕೊಳ್ಳಲಿದೆ. 2012ನೇ ಸಾಲಿನ ಜನಗಣತಿ ಆಧರಿಸಿ ಶೇ.85%ರಷ್ಟು ಪರಿಶಿಷ್ಟ ಜಾತಿಯವರು ಹೆಚ್ಚಾಗಿರುವ ಕಾಮನದುರ್ಗ ಗ್ರಾಮವನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯ ನೇರವಾಗಿ ಗುರುತಿಸಿ, ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಸೇರ್ಪಡೆಗೊಳಿಸಿದೆ.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಪ್ರತಿ ಗ್ರಾಮಕ್ಕೆ ಕೇಂದ್ರ ಸರ್ಕಾರ 21 ಲಕ್ಷ ರೂ. ಬಿಡುಗಡೆ ಮಾಡಲಿದೆ. ಈ ಮೊತ್ತದಲ್ಲಿ 20 ಲಕ್ಷ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತದೆ. ಇನ್ನುಳಿದ 1 ಲಕ್ಷ ರೂ. ಆಡಳಿತಾತ್ಮಕ ವೆಚ್ಚಕ್ಕಾಗಿ ಉಪಯೋಗಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದೆ.

ಕೇಂದ್ರ ಸರ್ಕಾರ ಬಿಡುಗಡೆಗೊಳಿಸುವ ಅನುದಾನಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಹಾಗೂ ಇನ್ನಿತರ ಕೇಂದ್ರ ಪುರಸ್ಕೃತ ಯೋಜನೆಗಳಡಿ 3 ರಿಂದ 4 ಪಟ್ಟು ಅನುದಾನ ಒದಗಿಸಿಕೊಂಡು ಅಲ್ಲಿನ ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಬಹುದಾಗಿದೆ ಎನ್ನುತ್ತಾರೆ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಎಂ.ಬಿ.ಭೈರಪ್ಪ.

ಉದ್ದೇಶಿತ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಯೋಜನಾ ನಿರ್ದೇಶಕರು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸಹಾಯಕರು. ಗ್ರಾಮಮಟ್ಟದಲ್ಲಿ ಗ್ರಾಪಂ ಅಧ್ಯಕ್ಷ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಾರೆ. ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿ ಹೊರಲಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ತಾಲೂಕಿನ ಕಾಮನದುರ್ಗ ಗ್ರಾಮವನ್ನು ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಳಸಿಕೊಂಡು ಇನ್ನಷ್ಟು ಪರಿಶಿಷ್ಟರು ಹೆಚ್ಚು ನೆಲೆಸಿರುವ ಗ್ರಾಮಗಳನ್ನು ಗುರುತಿಸಿ ಅಭಿವೃದ್ಧಿಗೊಳಿಸಲಾಗುವುದು.
ಡಿ.ಎಸ್‌.ಸುರೇಶ್‌,
ಶಾಸಕರು.

„ಶೇಖರ್‌.ವಿ.ಗೌಡ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.