ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ

•ಭದ್ರಾ ನದಿಯಿಂದ ಮಾನಸಿ ಕೆರೆಗೆ ನೀರು ಹರಿಸಲು ಡಿಸಿಗೆ ಪ್ರಸ್ತಾವನೆ ಸಲ್ಲಿಸಿ: ಶಾಸಕ ಸುರೇಶ್‌

Team Udayavani, Jul 3, 2019, 12:24 PM IST

3-July-15

ತರೀಕೆರೆ: ಪುರಸಭೆ ಸಭಾಂಗಣದಲ್ಲಿ ನೀರಿನ ಸಮಸ್ಯೆ ಕುರಿತು ಶಾಸಕ ಡಿ.ಎಸ್‌.ಸುರೇಶ್‌ ಅಧಿಕಾರಿಗಳ ಸಭೆ ನಡೆಸಿದರು.

ತರೀಕೆರೆ: ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮಾನಸಿ ಕೆರೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಭದ್ರಾ ನದಿಯಿಂದ ಕಡೂರು ಪಟ್ಟಣಕ್ಕೆ ಕೊಂಡೊಯ್ಯಲಾಗುತ್ತಿರುವ ಪೈಪ್‌ಲೈನ್‌ಮೂಲಕ ಕೆರೆಗೆ ನೀರು ಹರಿಸಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿ, ನೀರು ಪೂರೈಕೆಗೆಕ್ರಮ ಕೈಗೊಳ್ಳಬೇಕೆಂದು ಶಾಸಕ ಡಿ.ಎಸ್‌.ಸುರೇಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪುರಸಭೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಕಾರಣ ಜಲಾಶಯಕ್ಕೆ ನೀರು ಹರಿದು ಬಂದಿಲ್ಲ, ಜಲಾಶಯದ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌ಗಿಂತ ಕಡಿಮೆ ಇದೆ. ಇಂತಹ ಸಮಯದಲ್ಲಿ ನಾಲೆಗೆ ನೀರು ಹರಿಸಲು ಸಾಧ್ಯವಿಲ್ಲ. ಮಾನಸಿ ಕೆರೆಯಲ್ಲಿ ಈಗಿರುವ ನೀರಿನ ಸಂಗ್ರಹ ಕೆಲವು ದಿನಗಳಿಗೆ ಮಾತ್ರ ಸಾಕಾಗುತ್ತದೆ. ಆದ್ದರಿಂದ, ಕೂಡಲೇ ಮಾನಸಿ ಕೆರೆಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ತಾವು ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

2017ರಲ್ಲೂ ನೀರಿನ ಸಮಸ್ಯೆ ಉಂಟಾದಾಗ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದರು. ಮುಂಬರುವ ದಿನಗಳಲ್ಲೂ ನೀರಿನ ಸಮಸ್ಯೆ ಉದ್ಭವವಾಗಬಹುದು. ಹಾಗಾಗಿ, ಅಂತಹ ಸಮಯದಲ್ಲಿ ನೀರು ಪಡೆಯಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವ ಬದಲು, ಅಂತಹ ವಾತಾವರಣ ಸೃಷ್ಟಿಯಾದಾಗ ನೀರು ಹರಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಅನುಮತಿ ನೀಡಬೇಕು. ಕೆರೆಗೆ ನೀರು ಹರಿಸುವಾಗ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು.ನೀರು ಸರಬರಾಜಿಗೆ ತಗುಲುವ ವೆಚ್ಚದ ಜವಾಬ್ದಾರಿಯನ್ನು ಕಡೂರು ಮತ್ತು ಬೀರೂರು ಪುರಸಭೆಗೆ ನೀಡಬೇಕು ಎಂದು ಮುಖ್ಯಾಧಿಕಾರಿ ಟಿ.ಎಸ್‌.ಗಿರೀಶ್‌ ಅವರಿಗೆ ಸೂಚನೆ ನೀಡಿದರು.

ಈಗಿರುವ ವ್ಯವಸ್ಥೆಯಲ್ಲಿ 6ದಿನಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಕೊಳವೆಬಾವಿಗಳಿಂದ ನೀರು ಪೂರೈಕೆ ಮಾಡುತ್ತಿರುವುದರಿಂದ ಸಮಸ್ಯೆ ಉಲ್ಬಣ ವಾಗಿಲ್ಲ. ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ 4ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಬೇಕಾಗಿದೆ. ಮತ್ತೂಮ್ಮೆ ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾ ವನೆ ಸಲ್ಲಿಸುವಂತೆ ಸಭೆಯಲ್ಲಿದ್ದ ಜಲಮಂಡಳಿ ಎಇಇ ಮಾರುತಿ ಅವರಿಗೆ ತಿಳಿಸಿದರು.

ಆಡಳಿತಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಬಿ.ಆರ್‌.ರೂಪಾ ಮಾತನಾಡಿ, ಕಿರು ನೀರು ಸರಬರಾಜು ಘಟಕದಿಂದ ನೀರು ವ್ಯರ್ಥವಾಗಿ ಚರಂಡಿಗೆ ಹರಿದು ಹೋಗುತ್ತಿದೆ. ಘಟಕಗಳಿಗೆ ಅಗತ್ಯವಿದ್ದಷ್ಟು ಮಾತ್ರ ನೀರು ತುಂಬಿಸಬೇಕು. ನೀರನ್ನು ವ್ಯರ್ಥ ಮಾಡಬಾರದು. ಅಗತ್ಯವಿರುವ ಕಡೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಬೇಕೆಂದು ಇಂಜಿನಿಯರ್‌ ಬಿಂದು ಅವರಿಗೆ ಸೂಚನೆ ನೀಡಿದರು.

ಬಾಪೂಜಿ ನಗರದಲ್ಲಿ 12ವರ್ಷಗಳ ಹಿಂದೆ ಡಾ.ಬಾಬುಜಗಜೀವನರಾಮ್‌ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ, ಕಟ್ಟಡಕ್ಕೆ ತಳಪಾಯ ಮತ್ತು ಪಿಲ್ಲರ್‌ಗಳನ್ನು ಹಾಕಲಾಗಿದೆ. ನಂತರ ಕಾಮಗಾರಿ ಕುಂಠಿತವಾಗಿದ್ದು ಏಕೆ? ಇದಕ್ಕೆ ಸಂಬಂಧಿಸಿದ ಕಡತಗಳು ಎಲ್ಲಿವೇ? ಅನುದಾನವನ್ನು ಕ್ರೋಢೀಕರಿಸದೇ ಏಕೆ ಕಟ್ಟಡ ಕಟ್ಟಲು ಅನುಮತಿ ನೀಡಿದಿರಿ ಎಂದು ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಟ್ಟಡವನ್ನು ಪುರಸಭೆ ಆರಂಭಸಿದೆ. ಪ್ರತಿವರ್ಷ ಅನುದಾನ ನೀಡಿದ್ದರೆ ಕಟ್ಟಡ ಪೂರ್ಣಗೊಳ್ಳುತ್ತಿತ್ತು. ಪುರಸಭೆಯ ಅನುದಾನದಿಂದ ಕಟ್ಟಡ ಕಟ್ಟಿಸಬೇಕೆಂದು ಸೂಚನೆ ನೀಡಿದರು.

ಜನರ ಸಮಸ್ಯೆ ಅರಿಯಲು ಪಟ್ಟಣದ ವಾರ್ಡ್‌ಗಳಲ್ಲಿ ಅಧಿಕಾರಿಗಳ ಸಮಕ್ಷಮದಲ್ಲಿ ಸಭೆ ನಡೆಸಲಾಗುವುದು. ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ವಾರ್ಡ್‌ ಸಭೆ ನಡೆಸಲು ದಿನಾಂಕ ನಿಗದಿಪಡಿಸಿ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ದೇವರಾಜ್‌, ನೀರು ಸರಬರಾಜು ಮಂಡಳಿ ಎಇಇ ಭಾಸ್ಕರ್‌, ಪುರಸಭೆ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.