ಕಾಡಾನೆ ದಾಳಿ: ಬಾಳೆ ಬೆಳೆ ನಾಶ

ವನ್ಯಜೀವಿಗಳಿಂದ ಆಗುತ್ತಿರುವ ತೊಂದರೆ ನಿವಾರಿಸಲು ರೈತರ ಆಗ್ರಹ

Team Udayavani, Jun 16, 2019, 11:51 AM IST

16-June-16

ತರೀಕೆರೆ: ತಾಲೂಕಿನ ಲಿಂಗದಹಳ್ಳಿ ಹೋಬಳಿ ಜೈಪುರ ಗ್ರಾಮದ ತಿಗಡದ ಬಳಿ ಬೆಳೆದಿದ್ದ ಬಾಳೆ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದು.

ತರೀಕೆರೆ: ತಾಲೂಕಿನ ಲಿಂಗದಹಳ್ಳಿ ಹೋಬಳಿ ತಣಿಗೆಬೈಲು, ಹುಣಸೆಬೈಲು, ಜೈಪುರ, ತಿಮ್ಮನಬೈಲು ಗ್ರಾಮಗಳಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ರೈತರ ಜಮೀನಿನಲ್ಲಿ ಬೆಳೆದು ನಿಂತಿರುವ ಲಕ್ಷಾಂತರ ರೂ.ಮೌಲ್ಯದ ಫಸಲು ನಾಶ ಮಾಡುತ್ತಿವೆ.

ಕಾಡಾನೆ ಜೊತೆಗೆ ಇನ್ನಿತರ ಕಾಡು ಪ್ರಾಣಿಗಳ ಹಾವಳಿಯೂ ಹೆಚ್ಚಾಗಿರುವುದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿಗಳಿಂದ ಉಂಟಾಗುತ್ತಿರುವ ತೊಂದರೆ ನಿವಾರಿಸಿ ರಕ್ಷಣೆ ಒದಗಿಸಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಲಕ್ಷಾಂತರ ರೂ. ಬೆಳೆ ನಾಶ: ಈ ಭಾಗದಲ್ಲಿ ರೈತರು ಭತ್ತ, ಜೋಳ, ರಾಗಿ, ಆಲೂಗಡ್ಡೆ ಮತ್ತು ಬಟಾಣಿ ಬೆಳೆಯುತ್ತಾರೆ. ಕೆಲವರು ಸಹಕಾರ ಸಂಘ ಮತ್ತು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದು ಜಮೀನುಗಳಲ್ಲಿ ಬಾಳೆ, ಅಡಕೆ, ತೆಂಗು, ಮಾವು, ಸಪೋಟ, ಹಲಸು, ಮೆಣಸು ಸಹಿತ ಅನೇಕ ತೋಟದ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಕೆಲ ದಿನಗಳಿಂದ ರೈತರು ಬೆಳೆದ ತೋಟಗಳಿಗೆ ಕಾಡಾನೆಗಳು ರಾತ್ರಿ ವೇಳೆ ಪ್ರತಿನಿತ್ಯ ದಾಳಿ ಮಾಡಿ, ತೋಟದಲ್ಲಿ ಬೆಳೆದು ಫಸಲಿಗೆ ಬಂದಿರುವ ಬಾಳೆ, ತೆಂಗು, ಅಡಕೆ, ಮಾವು, ಹಲಸು ಬೆಳೆಗಳನ್ನು ತಿಂದು, ತುಳಿದು ನಾಶಪಡಿಸುತ್ತಿವೆ.

ರೈತರ ಅಳಲು: ಕಾಡಾನೆ ಉಪಟಳದಿಂದಾಗಿ ತಾವು ಸಾಲ ಮಾಡಿ ಬೆಳೆದ ಹಾಗೂ ಕಟಾವಿಗೆ ಬಂದ ಲಕ್ಷಾಂತರ ರೂ. ಬೆಲೆ ಬಾಳುವ ಬೆಳೆಗಳು ನೆಲದ ಪಾಲಾಗಿವೆ ಎಂದು ರೈತರಾದ ಮಲ್ಲೇನಹಳ್ಳಿ ರಾಮಪ್ಪ ಹಾಗೂ ಜೈಪುರ ಗ್ರಾಮದ ಪಾಪಣ್ಣ ಮುಂತಾದವರು ಅಳಲು ತೋಡಿಕೊಂಡಿದ್ದಾರೆ.

ಸಾಲ ತೀರಿಸುವುದಾದರೂ ಹೇಗೆ?: ಲಿಂಗದಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರೂ ಆಗಿರುವ ಮಲ್ಲೇನಹಳ್ಳಿ ರಾಮಪ್ಪ ಮಾತನಾಡಿ, ಸಹಕಾರ ಸಂಘದಲ್ಲಿ ಸಾಲ ಪಡೆದು ಒಂದು ವರ್ಷದ ಹಿಂದೆ ತಿಗಡ ಸರ್ವೆ ನಂಬರ್‌ 85 ಮತ್ತು 86ರಲ್ಲಿರುವ 6.20ಎಕರೆ ಜಮೀನಿನಲ್ಲಿ ಪುಟ್ಟ ಬಾಳೆ ಸಸಿಗಳನ್ನು ನೆಟ್ಟು ಬೆಳೆಸಿದ್ದೆವು. ಈ ಬೆಳೆ ಮುಂದಿನ ಒಂದೆರಡು ತಿಂಗಳಲ್ಲಿ ತಮ್ಮ ಕೈಸೇರಿದ ನಂತರ, ತಾವು ಸ್ವ ಸಹಾಯ ಸಂಘದಿಂದ ಪಡೆದಿರುವ ಸಾಲದ ಹಣವನ್ನು ಮಾರುಪಾವತಿ ಮಾಡಲು ತೀರ್ಮಾನಿಸಿದ್ದೆವು. ಆದರೆ, ಈಗ ಕಾಡಾನೆಗಳ ದಾಳಿಯಿಂದಾಗಿ ಸಂಪೂರ್ಣ ಬಾಳೆ ಬೆಳೆ ನಾಶವಾಗಿದೆ. ಸಾಲ ತೀರಿಸುವುದು ಹೇಗೆ ಎಂಬ ಸಮಸ್ಯೆ ಸುಳಿಗೆ ಸಿಲುಕಿದ್ದೇವೆ ಎಂದು ನೊಂದು ಹೇಳಿದರು.

ಲಿಂಗದಹಳ್ಳಿ ಹೋಬಳಿಯಲ್ಲಿ ಕಳೆದ 3-4 ವರ್ಷಗಳಿಂದ ಸರಿಯಾಗಿ ಮಳೆ ಬಾರದ ಕಾರಣ ಟ್ಯಾಂಕರ್‌ ಮೂಲಕ ನೀರು ತಂದು ಬಾಳೆ ಬೆಳೆ ಬೆಳೆಯುತ್ತಿದ್ದೇವೆ. ಲಕ್ಷಾಂತರ ರೂ. ಬೆಲೆ ಬಾಳುವ ಬಾಳೆ ಗೊನೆಗಳು ನೆಲದ ಪಾಲಾಗಿದ್ದು, ವ್ಯವಸಾಯ ಸೇವಾ ಸಹಕಾರ ಸಂಘದಿಂದ ಹಣ ತಂದು ಬೆಳೆದ ಬೆಳೆ ಕೈ ತಪ್ಪುತ್ತಿದೆ. ಇದರಿಂದ, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಕಾಡಾನೆ ಇನ್ನಿತರ ವನ್ಯ ಪ್ರಾಣಿಗಳ ಉಪಟಳದ ಬಗ್ಗೆ ತಣಿಗೆಬೈಲು ಅರಣ್ಯಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸೂಕ್ತ ಪರಿಹಾರದ ನಿರೀಕ್ಷೆಯಲ್ಲಿದ್ದೇವೆ.
•ರಾಮಪ್ಪ, ಅಧ್ಯಕ್ಷರು,
ವಿಎಸ್‌ಎಸ್‌ಎನ್‌, ಲಿಂಗದಹಳ್ಳಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.