ಮೂವರುಕುರಿಗಾಹಿ, 300 ಕುರಿ ರಕ್ಷಣೆ
ಜಿಲ್ಲಾ ವಿಪತ್ತು ನಿರ್ವಹಣಾ ಸಿಬ್ಬಂದಿ-ಅಗ್ನಿಶಾಮಕ ದಳ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ
Team Udayavani, Nov 6, 2019, 12:17 PM IST
ತಾಳಿಕೋಟೆ: ಡೋಣಿ ನದಿ ಪ್ರವಾಹದಿಂದ ಕಾಮನಕಲ್ಲ ಪ್ರದೇಶದಲ್ಲಿ ಸಿಲುಕಿದ್ದ ಮೂವರು ಕುರಿಗಾಹಿಗಳು, 300 ಕುರಿಗಳು, 4 ನಾಯಿಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಮಧ್ಯಾಹ್ನದವರೆಗೂ ದೋಣಿ ನದಿ ದಡದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿಗಳು ಸಂಜೆ 5 ಗಂಟೆ ಸುಮಾರಿಗೆ ನದಿ ನಡುಗಡ್ಡೆಯ ಎತ್ತರ ಪ್ರದೇಶ ಕಾಮನಕಲ್ಲ ಪ್ರದೇಶದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ಪ್ರವಾಹ ಬಂದು ಕಾಮನಕಲ್ಲ ಪ್ರದೇಶ ನೀರು ಸುತ್ತುವರಿದಿದ್ದರಿಂದ ಕುರಿಗಾಹಿಗಳು ಸಿಲುಕಿದ್ದರು.
ಮಂಗಳವಾರ ಬೆಳಗ್ಗೆ 6 ಗಂಟೆ ಹೊತ್ತಿಗೆ ನದಿಯಲ್ಲಿ ನೀರು ಇಳಿಮುಖ ಗೊಂಡಿದ್ದರಿಂದ 9 ಗಂಟೆವರೆಗೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಈಜುಗಾರರ ಸಹಕಾರ-ಬೋಟ್ಗಳ ಸಹಾಯದೊಂದಿಗೆ ನಡುಗಡ್ಡೆಯಲ್ಲಿ ಸಿಲುಕಿದ್ದ ಮಿಣಜಗಿ ಗ್ರಾಮದ ಕುರಿಗಾಹಿಗಳಾದ ರಮೇಶ ಪೂಜಾರಿ, ಮಾನಪ್ಪ ರಾಠೊಡ, ಹನುಮಂತ ರಾಠೊಡ ಎಂಬುವರನ್ನು ಜಿಲ್ಲಾ ವಿಪತ್ತು ನಿರ್ವಹಣಾ ಸಿಬ್ಬಂದಿ ಮಂಗಳವಾರ ಬೆಳಗಿನ ಜಾವ 2:30ರ ವೇಳೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಹಶೀಲ್ದಾರ್ ಅನಿಲಕುಮಾರ ಢವಳಗಿ, ಪಿಎಸೈ ವಸಂತ ಬಂಡಗಾರ, ಅಗ್ನಿ ಶಾಮಕದಳ ಅಧಿಕಾರಿಗಳು ರಾತ್ರಿ ಹೊತ್ತು ವಿಪರೀತ ಮಳೆಯ ಮಧ್ಯೆಯೇ ಕಾರ್ಯಾಚರಣೆ ನಡೆಸಿದ್ದಾರೆ.ಜಿಲ್ಲಾ ವಿಪತ್ತು ನಿರ್ವಹಣಾ ತಂಡ ವಿಜಯಪುರದ ಬೇಗಂ ತಲಾಬ್ ನಲ್ಲಿರುವ ಬೋಟ್ಗಳೊಂದಿಗೆ ತೆರಳಿ ಕುರಿಗಾಹಿಗಳು, ಕುರಿಗಳು ಹಾಗೂ ನಾಯಿಗಳನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್