ಆಶ್ರಯ ಫ್ಲ್ಯಾಟ್ ಒತ್ತುವರಿ ವಿರುದ್ಧ ಕ್ರಮಕ್ಕೆಆಗ್ರಹ


Team Udayavani, Nov 1, 2019, 2:20 PM IST

1-November-29

ತಾಳಿಕೋಟೆ: ತಾಲೂಕಿನ ಅಸ್ಕಿ ಗ್ರಾಪಂ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ 2000/2001ನೇ ಸಾಲಿನಲ್ಲಿ ಸುಮಾರು 35 ಜನರಿಗೆ ಆಶ್ರಯ ಪ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಸದರಿ ಜಾಗೆಯನ್ನು ಗ್ರಾಮದ ಪ್ರಭಾವಿ ವ್ಯಕ್ತಿಗಳು ಕಬಳಿಕೆ ಮಾಡುವುದರೊಂದಿಗೆ ಜಾಗೆಗಳನ್ನು ಮಾರಾಟ ಮಾಡುತ್ತಾ ಸಾಗಿದ್ದಾರೆ. ಕೂಡಲೇ ಕ್ರಮಕೈಗೊಂಡು ದಲಿತ ಜನಾಂಗದವರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನೀರಲಗಿ ಗ್ರಾಮದಿಂದ ಅಸ್ಕಿ ಗ್ರಾಮದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಜಮಖಂಡಿ ಮಾತನಾಡಿ, ಸರ್ವೇ ನಂ.186ರ 3.20 ಗುಂಟೆ ರಾಜ್ಯಪಾಲರ ಹೆಸರಿನಲ್ಲಿರುವ ಈ ಜಾಗೆಯಲ್ಲಿ 2000/01ರಲ್ಲಿ ಜಾಗೆ ಇಲ್ಲದ ದಲಿತ ಜನಾಂಗದ 7 ಜನರನ್ನು ಸೇರಿಸಿ ಒಟ್ಟು 35 ಪ್ಲಾಟ್‌ ಗಳನ್ನು ಹಂಚಿಕೆ ಮಾಡಲಾಗಿದೆ. ಸದರಿ ಹಂಚಿಕೆ ಮಾಡಲಾದ ಪ್ಲಾಟ್‌ಗಳಿಗೆ ಸಂಬಂಧಿಸಿದ ಹಕ್ಕು ಪತ್ರಗಳನ್ನೂ ಸಹ ನೀಡಲಾಗಿದೆ. ಹಕ್ಕು ಪತ್ರದಲ್ಲಿ ಚೆಕ್ಕಬಂದಿ ಹಾಕದಿರುವುದರಿಂದ ಮನೆಗಳನ್ನು ಕಟ್ಟಿಸಿಕೊಳ್ಳಲು ಆಗಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ತಾಪಂ ಇಒ, ಪಿಡಿಒಗಳಿಗೆ ಪ್ಲಾಟ್‌ ಗುರುತಿಸಿ ಚೆಕ್ಕಬಂದಿ ನಿರ್ಮಿಸಿ ಮನೆ ಕಟ್ಟಿಸಿಕೊಳ್ಳಲು ಉತ್ತಾರೆ ನೀಡಬೇಕೆಂದು ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಡಿಎಸ್‌ಎಸ್‌ ಉತ್ತರ ಕರ್ನಾಟಕ ಅಧ್ಯಕ್ಷ ಅಶೋಕ ಸುಲ್ಪಿ ಮಾತನಾಡಿ, ಅಸ್ಕಿ ಗ್ರಾಪಂ ವ್ಯಾಪ್ತಿಯ ನೀರಲಗಿ ಗ್ರಾಮದ ಪ್ರಭಾವಿ ವ್ಯಕ್ತಿಗಳು ತಮ್ಮ ರಾಜಕೀಯ ಒತ್ತಡದಿಂದ ಹಂಚಿಕೆ ಮಾಡಲಾದ ಪ್ಲಾಟ್‌ಗಳು ತಮ್ಮದೇ ಎಂದು ಮಾರಾಟ ಮಾಡುತ್ತಾ ಸಾಗಿದ್ದಾರೆ. ಆದರೆ ಸದರಿ ಪ್ಲಾಟ್‌ಗಳಿಗೆ ಸಂಬಂಧಿಸಿ ಹಕ್ಕುಪತ್ರದೊಂದಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ
ಇಲ್ಲದ ಸಬೂಬ ಹೇಳುತ್ತಾರೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ ದಲಿತ ಜನಾಂಗದವರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು.

ಡಿಎಸ್‌ಎಸ್‌ ತಾಲೂಕು ಸಂಘಟನಾ ಸಂಚಾಲಕ ಚಂದ್ರಶೇಖರ ದೊಡಮನಿ, ತಾಳಿಕೋಟೆ ತಾಲೂಕು ಸಂಚಾಲಕ ಯಮನೂರಿ ಬೇಕಿನಾಳ ಮಾತನಾಡಿದರು. ನಂತರ ಉಪತಹಶೀಲ್ದಾರ್‌ ಅಶೋಕ ಶರ್ಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಮುಖಂಡರಾದ ಅಶೋಕ ಶುಲ್ಪಿ, ಸಂಗಮೇಶ ನಡುವಿನಕೇರಿ, ಬಾಬು ಕೆಳಗಿನಮನಿ, ತಿಪ್ಪಣ್ಣ ಮಾದರ, ಅನಿಲ ಬಡಿಗೇರ, ಪ್ರಕಾಶ ಮಲ್ಲಾರಿ, ಜಾನು ಗುಡಿಮನಿ, ಪರಶುರಾಮ ಬ್ಯಾಕೋಡ, ಹಣಮಂತ ವಡ್ಡರ, ಗುರುಪ್ರಸಾದ ಬಿ.ಜಿ., ಸಿದ್ರಾಮ ಮೇಲಿನಮನಿ, ಸೋಮಪ್ಪ ನಡುವಿನಮನಿ, ಸಾಯಬಣ್ಣ ನಡುವಿನಮನಿ, ಪರಶುರಾಮ ಜಾಲಹಳ್ಳಿ, ಬಾಬಾಸಾಹೇಬ ಮುಜಾವರ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.