ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಿ

ಬಡ ಮಕ್ಕಳಿಗೆ ಶಿಕ್ಷಣ ಸಿಗಬೇಕೆಂಬ ಗುರಡ್ಡಿ ಕಂಡ ಕನಸು ನನಸಾಗಿದೆ: ಸಾಸನೂರ

Team Udayavani, Sep 5, 2019, 7:36 PM IST

5-spectember-34

ತಾಳಿಕೋಟೆ: ಜೆಎಸ್‌ಜಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪಪೂ ಕಾಲೇಜ್‌ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೆ ಜೆ.ಎಸ್‌. ಪೂಜೇರಿ ಚಾಲನೆ ನೀಡಿದರು.

ತಾಳಿಕೋಟೆ: ಮಾಜಿ ಸಂಸದ ದಿ| ಎಸ್‌.ಎಂ. ಗುರಡ್ಡಿಯವರು ತಾಳಿಕೋಟೆ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ದಾಪುಗಾಲು ಹಾಕಿ ಬಡವರ ಮಕ್ಕಳಿಗೆ ವಿದ್ಯಾಬುದ್ಧಿ ದಯ ಪಾಲಿಸಬೇಕೆಂಬ ಉದ್ದೇಶ ಹೊತ್ತಿದ್ದ ಅವರ ಕನಸನ್ನು ಇಂದು ಅವರ ಪುತ್ರ ನ್ಯಾಯವಾದಿ ಶಾಂತೇಶ ಗುರಡ್ಡಿ ನನಸು ಮಾಡಿದ್ದಾರೆಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.

ಜ್ಯೋತಿ, ಶಾಂತೇಶ ಗುರಡ್ಡಿ ಫೌಂಡೇಶನ್‌ ನೇತೃತ್ವದಲ್ಲಿ ನಡೆಸಿಕೊಂಡು ಬರಲಾಗುತ್ತಿರುವ ವಿಜ್ಞಾನ ಪಪೂ ಕಾಲೇಜ್‌ ತಾಳಿಕೋಟೆಯಲ್ಲಿ ನಡೆದ ತಾಲೂಕು ಮಟ್ಟದ ಪಪೂ ಕಾಲೇಜುಗಳ ಪ್ರಸಕ್ತ ಸಾಲಿನ ಕ್ರೀಡಾಕೂಟ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಡ ವಿದ್ಯಾರ್ಥಿಗಳಿಗೆ ಕಡಿಮೆ ಫೀ ಸ್ವೀಕರಿಸಿ ಅವರಿಗೆ ಶಿಕ್ಷಣದಲ್ಲಿ ಮುಂದುವರಿಯಲು ಇಲ್ಲಿ ಅನುವು ಮಾಡಿಕೊಡಲಾಗುತ್ತಿದೆ. ಇಂತಹ ಮಹತ್ವದ ಸಂಸ್ಥೆಗೆ ನಾನು ಸಹಾಯಹಸ್ತ ಕಲ್ಪಿಸಲು ಮುಂದಾಗುತ್ತೇನೆಂದರು.

ಕ್ರೀಡೆಯಲ್ಲಿ ಜಾತಿ ಎಂಬುದಿಲ್ಲ, ಏಕತೆ ಎಂಬ ಭಾವನೆ ಇರುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕೆಂದ ಅವರು, ವಿದ್ಯಾರ್ಥಿಗಳಲ್ಲಿ ಸರಳತೆ, ಹೃದಯವಂತಿಕೆ ಇರಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರದ ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜೆ.ಎಸ್‌. ಪೂಜೇರಿ ಮಾತನಾಡಿ, ಶತ ಶತಮಾನದ ಉನ್ನತಿಗಾಗಿ ನಾವು ನಮ್ಮ ದೇಶದಲ್ಲಿ ಯುವಕರನ್ನು ಪೋಷಿಸಬೇಕಾಗಿದೆ. ನೆರೆ ರಾಜ್ಯಗಳಲ್ಲಿ ದೈಹಿಕ ನಿರ್ದೇಶಕರ ನೇಮಕಾತಿ ಇದೆ. ಆದರೆ ಇದು ನಮ್ಮಲ್ಲಿ ಇಲ್ಲ ಎಂದರು.

ವಿಜ್ಞಾನ ಪಪೂ ಕಾಲೇಜಿನ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಮಾತನಾಡಿದರು. ಬಸವಪ್ರಭು ದೇವರು ಸಾನ್ನಿಧ್ಯ ವಹಿಸಿದ್ದರು. ಶಾಸಕ ಸೋಮನಗೌಡ ಪಾಟೀಲ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾಜ್ಯೋತಿಯನ್ನು ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಬೆಳಗಿಸಿದರು. ಹಿರಿಯ ದೈಹಿಕ ಶಿಕ್ಷಕ ಆರ್‌.ಎಲ್. ಕೊಪ್ಪದ ಪ್ರಮಾಣ ವಚನ ಬೋಧಿಸಿದರು.

ಬಿಇಒ ಎಸ್‌.ಡಿ. ಗಾಂಜಿ, ಜೆಎಸ್‌ಜಿ ಪಪೂ ಕಾಲೇಜಿನ ನಿರ್ದೇಶಕರಾದ ಬಸನಗೌಡ ಪಾಟೀಲ, ಗಿರಿರಾಜ್‌ ಕನಕಗಿರಿ, ಅಧಿಕಾರಿ ಪ್ರಕಾಶ ಗೊಂಗಡಿ, ಪ್ರಶಾಂತ ಹಾವರಗಿ, ನಿಂಗನಗೌಡ ಪಾಟೀಲ (ಗ.ಸೋಮನಾಳ) ಇದ್ದರು.

ಸುಷ್ಮಾ ಬಡಿಗೇರ ಪ್ರಾರ್ಥಿಸಿದರು. ತಾಲೂಕು ಕ್ರೀಡಾಕೂಟ ಸಮಿತಿ ಅಧ್ಯಕ್ಷ ಗಿರೀಶ ಪಿ.ಆರ್‌. ಸ್ವಾಗತಿಸಿದರು. ಶಿಕ್ಷಕರಾದ ಅಶೋಕ ಹಂಚಲಿ, ಸುಮಂಗಲಾ ಕೊಳೂರ ನಿರೂಪಿಸಿದರು. ಶಿಕ್ಷಕ ಮಹೇಶ ಹಡಪದ ವಂದಿಸಿದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.