ತಾಳಿಕೋಟೆ ಪುರಸಭೆಗೆ ಚುನಾವಣೆ ನಿಗದಿ


Team Udayavani, May 3, 2019, 10:43 AM IST

3-May-6

ತಾಳಿಕೋಟೆ ಪುರಸಭೆ ಕಾರ್ಯಾಲಯ.

ತಾಳಿಕೋಟೆ: ರಾಜ್ಯದ 103 ನಗರ ಸ್ಥಳೀಯ ಸಂಸ್ಥೆಗಳ ಎರಡನೇ ಹಂತದ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ದಿನಾಂಕ ನಿಗದಿಗೊಳಿಸಿದೆ. ಇದರಲ್ಲಿ ತಾಳಿಕೋಟೆ ಪುರಸಭೆಗೂ ಮೇ 29ರಂದು ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ ಮಾರ್ಚ್‌ 2019ರಿಂದ ಜುಲೈ-2019ರ ವರೆಗೆ ಅವಧಿ ಮುಕ್ತಾಯವಾಗುವ ಒಟ್ಟು 103 ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜ್ಯದ 8 ನಗರಸಭೆಗಳು, 33 ಪುರಸಭೆಗಳು ಹಾಗೂ 22 ಪಟ್ಟಣ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ಚುನಾವಣೆ ಆಯೋಗ ನಿರ್ಧರಿಸಿದೆ. ಅದರಲ್ಲಿ ತಾಳಿಕೋಟೆ ಪುರಸಭೆ ಸೇರಿದಂತೆ ಒಟ್ಟು 33 ಪುರಸಭೆಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ ಪುರಸಭೆ ಒಳಗೊಂಡಿದ್ದು, ಚುನಾವಣೆಗೆ ಸಂಬಂಧಿಸಿದಂತೆ ವಿಧಾನಸಭಾ ಮತದಾರರ ಪಟ್ಟಿಯ ಡಾಟಾವನ್ನು ಅಳವಡಿಸಿಕೊಂಡು ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸಲು ಚುನಾವಣೆ ಆಯೋಗವು ಸೂಚನೆ ನೀಡಿದೆ.

ವೇಳಾ ಪಟ್ಟಿ: ರಾಜ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಮೇ 9ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗಪಡಿಸಲಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 20ರ‌ಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿದೆ. ಮತದಾನ ಮೇ 29ರಂದು ಬೆಳಗ್ಗೆ 7ರಿಂದ ಸಾಯಂಕಾಲ 5ರ ವರೆಗೆ ನಿಗದಿಪಡಿಸಲಾಗಿದೆ. ಮೇ 31ರಂದು ಮತ ಏಣಿಕೆ ಕಾರ್ಯ ತಾಲೂಕು ಕೇಂದ್ರದ ಸ್ಥಳಗಳಲ್ಲಿ ನಡೆಯಲಿದೆ.

ಬಿರುಸಿನ ಚಟುವಟಿಕೆ: ಪುರಸಭೆಯ ಲೋಕಲ್ ಪೈಟ್‌ಗೆ ಚುನಾವಣೆ ದಿನಾಂಕ ನಿಗದಿಗೆ ಕಾಯುತ್ತಾ ಕುಳಿತಿದ್ದ ಯುವ ಸಮೂಹ ದಿನಾಂಕ ನಿಗದಿಗೊಂಡ ಕ್ಷಣದಿಂದಲೇ ವಾರ್ಡ್‌ವಾರು ಸ್ಪರ್ಧಿಸಲು ಬಿರುಸಿನ ರಾಜಕೀಯ ಚಟುವಟಿಕೆಗಳು ಶುರುವಾಗಿವೆ. ಪುರಸಭೆಯ 23 ವಾರ್ಡ್‌ಗಳ ಪೈಕಿ ಕೆಲ ವಾರ್ಡ್‌ ಗಳಲ್ಲಿ ಅತೀ ಕಡಿಮೆ ಮತದಾರರಿದ್ದರೆ ಇನ್ನೂ ಕೆಲ ವಾರ್ಡ್‌ಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಮತದಾರರು ಹೊಂದಿದ್ದಾರೆ. ಇದರಲ್ಲಿ ಕಡಿಮೆ ಮತದಾರರು ಇದ್ದ ಸ್ಥಳಗಳಲ್ಲಿ ಜಾತಿ ಲೆಕ್ಕಾಚಾರಗಳೇ ಅತೀ ಹೆಚ್ಚು ಕಂಡುಬರುತ್ತಿದೆ.

ಈಗಾಗಲೇ ವಾರ್ಡ್‌ವಾರುಗಳ ಮೀಸಲಾತಿ ಪ್ರಕಟಗೊಂಡಿದ್ದು, ಇದರಲ್ಲಿ ಕೆಲ ವಾರ್ಡ್‌ಗಳಲ್ಲಿ ಜಾತಿ ಲೆಕ್ಕಾಚಾರದ ಮೇಲೆ ಇನ್ನೂ ಕೆಲ ವಾರ್ಡ್‌ಗಳಲ್ಲಿ ಪಕ್ಷ ಮತ್ತು ಪಕ್ಷೇತರವಾಗಿ ಸ್ಪರ್ಧಿಸಬೇಕೋ? ಎಂಬ ಲೆಕ್ಕಾಚಾರ ಆರಂಭವಾಗಿದೆ. ಇನ್ನೂ ಈ ಹಿಂದೆ ಆಯ್ಕೆಗೊಂಡು ಆಡಳಿತ ನಡೆಸಿದ ಅರ್ಧದಷ್ಟು ಸದಸ್ಯರು ಮರುಸ್ಪರ್ಧೆ ಬಯಿಸಿ ಮತದಾರರ ಓಲೈಕೆಗೆ ಮುಂದಾಗಲಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವರು ತಮ್ಮ ಮೊದಲಿನ ವಾರ್ಡ್‌ಗಳನ್ನು ಬದಲಾಯಿಸಿ ಬೇರೆ ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಆದರೆ ಮತದಾರರು ಹಿಂದಿನ ಆಡಳಿತ ವ್ಯವಸ್ಥೆ ಮೆಚ್ಚುತ್ತಾರೋ? ಅಥವಾ ಹೊಸ ಆಡಳಿತವನ್ನು ಬಯಸುತ್ತಾರೋ? ಕಾದು ನೋಡಬೇಕಿದೆ.

ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.