ಭಾವ ಪರವಶದಲ್ಲಿ ಮಿಂದೆದ್ದ ಭಕ್ತರು

ಖಾಸ್ಗತೇಶ್ವರ ಮಠದಲ್ಲಿ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮ •ಪ್ರತಿಧ್ವನಿಸಿದ ಓಂ ನಮಃ ಶಿವಾಯ ಸ್ಮರಣೆ

Team Udayavani, Jul 14, 2019, 10:28 AM IST

14-JULY-7

ತಾಳಿಕೋಟೆ: ಖಾಸ್ಗತೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮವನ್ನು ಖಾಸ್ಗತೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ನೆರವೇರಿಸಿದರು.

ತಾಳಿಕೋಟೆ: ಸ್ಥಳೀಯ ಖಾಸ್ಗತ ಮಹಾ ಶಿವಯೋಗಿಗಳ ಜಾತ್ರೆ ಹಾಗೂ ರಥೋತ್ಸವ ಅಂಗವಾಗಿ ಶನಿವಾರ ನಸುಕಿನ ಜಾವ 5:45ಕ್ಕೆ ಅಸಂಖ್ಯಾತ ಭಕ್ತ ಸಮೂಹಸಮ್ಮುಖದಲ್ಲಿ ಗೋಪಾಲ ಕಾವಲಿ (ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮ ಭಕ್ತಿ ಭಾವದೊಂದಿಗೆ ಜರುಗಿತು.

ಖಾಸ್ಗತೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಜು. 6ರಿಂದ ನಡೆಸಿಕೊಂಡು ಬರಲಾದ ಸಪ್ತ ಭಜನಾ ಕಾರ್ಯಕ್ರಮ ಮೊಸರು ಗಡಿಗೆ ಒಡೆಯುವುದರ ಮೂಲಕ ಮಂಗಲಗೊಂಡಿತು.

ಖಾಸ್ಗತೇಶ್ವರ ಮಠದ ಪಟ್ಟಾಧಿಧೀಶರಾದ ಸಿದ್ದಲಿಂಗ ಮಹಾಸ್ವಾಮಿಗಳ ಘನ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನಸುಕಿನ ಜಾವ 4 ಗಂಟೆಗೆ ಪ್ರಭಾತ ಪೇರಿಯೊಂದಿಗೆ ಧ್ವಜದ ಮೆರವಣಿಗೆ ನಡೆಯಿತಲ್ಲದೇ ಶ್ರೀ ಮಠದ ಪ್ರಾಂಗಣದಲ್ಲಿ ಕಟ್ಟಲಾದ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮವನ್ನು ಖಾಸ್ಗತೇಶ್ವರ ಮಠದ ವೇ| ಸಂಗಯ್ಯ ವಿರಕ್ತಮಠ ನೆರವೇರಿಸಿದರು.

ಈ ಬಾರಿಯೂ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ದೊರಕಿಸಿಕೊಳ್ಳಲು ಜೀವದ ಹಂಗು ತೊರೆದು ಗದ್ದಲಮಯ ವಾತಾವರಣದಲ್ಲಿಯೂ ಭಕ್ತ ಸಮೂಹ ಓಂ ನಮಃ ಶಿವಾಯ ಎಂಬ ನಾಮಾಂಕಿತದ ಭಕ್ತಿಯನ್ನು ಖಾಸ್ಗತನಿಗೆ ಅರ್ಪಿಸಿದರು.

ಈ ಹಿಂದೆ ಖಾಸ್ಗತರು ಪಂಢರಪುರದ ವಿಠ್ಠಲ ಜಾತ್ರೋತ್ಸವಕ್ಕೆ ತೆರಳಿದಾಗ ಆಷಾಢ ಏಕಾದಶಿ ದಿನದಂದು ವಿಠ್ಠಲ ದೇವಸ್ಥಾನದಲ್ಲಿ ನೆರವೇರಿಸಲಾಗುತ್ತಿರುವ ಗೋಪಾಲ ಕಾವಲಿ ಶ್ರೀ ಮಠದಲ್ಲಿಯೂ ಏರ್ಪಡಿಸಿದರೆ ಭಕ್ತಾದಿಗಳ ಜೀವನ ಪಾವನವಾಗುತ್ತದೆ ಎಂದು ಸ್ವಯಂ ಇಚ್ಛೆಯಿಂದ ಗೋಪಾಲ ಕಾವಲಿ (ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮ ಹಮ್ಮಿಕೊಂಡರೆಂದು ಹೇಳಲಾಗುತ್ತದೆ.

ಅದರಂತೆ ಈ ಹಿಂದಿನಿಂದ ನಡೆಸಿಕೊಂಡು ಬರಲಾದ ಈ ಕಾರ್ಯಕ್ರಮದಂತೆ ತಾಳಿಕೋಟೆಯ ಖಾಸ್ಗತೇಶ್ವರ ಮಠದ ಜಾತ್ರೆ ಸಮಯದಲ್ಲಿ ಈ ಕಾರ್ಯಕ್ರಮ ಈಗಲೂ ನಡೆಸಿಕೊಂಡು ಬರಲಾಗುತ್ತಿದೆ. ಈ ಹಿಂದಿನ ಸಂಪ್ರದಾಯದಂತೆ ಖಾಸ್ಗತೇಶ್ವರ ಜಾತ್ರೋತ್ಸವ ಸಮಯದಲ್ಲಿ ರಥೋತ್ಸವಕ್ಕೆ ಒಂದು ದಿನ ಮೊದಲು ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮವನ್ನು ಈಗಲೂ ಮುಂದುವರಿಸಿಕೊಂಡು ಭಕ್ತಾದಿಗಳ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಅನುವು ಮಾಡಿಕೊಡುತ್ತಿರುವುದು ವಿಶೇಷ.

ಅದರಂತೆ ಈ ಸಲವೂ ಶನಿವಾರ ನಸುಕಿನ ಜಾವ ಜರುಗಿದ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮದಲ್ಲಿ ಮುಂಬೈ, ಪುಣೆ, ಗೋವಾ, ಹೈದರಾಬಾದ್‌, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಂದಲೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಖಾಸ್ಗತೇಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಮಠದ ಉಸ್ತುವಾರಿ ಮುರುಗೇಶ ವಿರಕ್ತಮಠ, ವಿಶ್ವನಾಥ ವಿರಕ್ತಮಠ, ಶರಭಯ್ಯ ಪುರಾಣಿಕಮಠ, ಹಿರೂರ ಜಯಸಿದ್ದೇಶ್ವರ ಮಹಾಸ್ವಾಮಿಗಳು, ಶ್ರೀಧರ ಕಾಗನೂರಮಠ, ವಿಜಯಕುಮಾರ ಹಿರೇಮಠ, ಮುರಗನವರ ಶಿರೂರ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.