ರೈತರಿಗೆ ಸೂಕ್ತ ಪರಿಹಾರ ನೀಡಿ: ಶೋಭಾ

ಅಧಿಕಾರಿಗಳು, ಸಂತ್ರಸ್ತ ರೈತರ ಸಭೆ •ರೈತರಿಗೆ ಅನ್ಯಾಯವಾಗದಂತೆ ಕ್ರಮಕ್ಕೆ ಸೂಚನೆ

Team Udayavani, Sep 7, 2019, 1:16 PM IST

7-September-16

ತರೀಕೆರೆ: ತಾಪಂ ಸಭಾಂಗಣದಲ್ಲಿ ನಡೆದ ಸಂತ್ರಸ್ತ ರೈತರು, ಅಧಿಕಾರಿಗಳ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಡಿ.ಎಸ್‌.ಸುರೇಶ್‌ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ತರೀಕೆರೆ: ತಾಲೂಕಿನಲ್ಲಿ ಹಾದು ಹೋಗಲಿರುವ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್‌ ರಸ್ತೆಗೆ ಭೂಮಿ ಕಳೆದುಕೊಳ್ಳಲಿರುವ ರೈತರು ತಮ್ಮ ಭೂಮಿಗೆ ಸೂಕ್ತ ಪರಿಹಾರ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಪರಿಹಾರ ನೀಡಬೇಕು. ವಿಶ್ವಾಸದಿಂದ ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ವಿಶೇಷ ಭೂ ಸ್ವಾಧೀನಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿ ಮತ್ತು ಸಂತ್ರಸ್ತ ರೈತರ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರ ಹಿತ ಕಾಪಾಡುವುದೇ ನಮ್ಮ ಗುರಿ ಎಂದರು.

ನಗರ ವ್ಯಾಪ್ತಿಯಲ್ಲಿ ಒಂದು ರೀತಿಯ ಪರಿಹಾರ ನೀಡಲಾಗುತ್ತಿದೆ. 5 ಗುಂಟೆ ಜಮೀನು ಕಳೆದುಕೊಂಡವರಿಗೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಕಳೆದ 3 ವರ್ಷಗಳಿಂದ ರೈತರು ಭೂಮಿಯಲ್ಲಿ ಬೆಳೆ ಬೆಳೆಯುತ್ತಿಲ್ಲ. ಜಮೀನುಗಳು ಮಾರಾಟವಾಗುತ್ತಿಲ್ಲ. ಬ್ಯಾಂಕ್‌ಗಳು ಎನ್‌ಒಸಿ ನೀಡುತ್ತಿಲ್ಲ. ಇದರಿಂದಾಗಿ ರೈತರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಖಾಸಗಿ ವ್ಯಕ್ತಿಗಳ ಹಿತಾಸಕ್ತಿ ಕಾಪಾಡಲು ಅಧಿಕಾರಿಗಳು ಹೆದ್ದಾರಿ ಅಲೈನ್‌ಮೆಂಟ್ ಬದಲಾವಣೆ ಮಾಡಲಾಗಿದೆ ಎಂದು ದೂರಿದ್ದಾರೆ ಮತ್ತು ಈಗಿನ ಮಾರುಕಟ್ಟೆ ದರ ಮತ್ತು 1:6 ಅನುಪಾತದಲ್ಲಿ ಪರಿಹಾರ ನೀಡುವಂತೆ ಕೇಳುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.

ಅಧಿಕಾರಿಗಳು ಕಾರ್ಯ ನಿರ್ವಹಿಸುವಾಗ ತಪ್ಪುಗಳಾಗಿದ್ದಲ್ಲಿ ಒಪ್ಪಿಕೊಳ್ಳಬೇಕು. ತಪ್ಪುಗಳು ಮಾನವ ಸಹಜ. ಹಿಂದಿನ ಅಧಿಕಾರಿಗಳು ತಪ್ಪು ಎಸಗಿದ್ದರೆ ಅವುಗಳನ್ನು ಸರಿಪಡಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ನೀಡುವ ಪರಿಹಾರದಲ್ಲಿ ಮೋಸವಾಗಬಾರದು. ಖಾಸಗಿ ವ್ಯಕ್ತಿಗಳ ಹಿತಾಸಕ್ತಿ ಕಾಪಾಡುವ ಸಲುವಾಗಿ ರೈತರಿಗೆ ತೊಂದರೆಯಾದರೆ ಸಹಿಸುವುದಿಲ್ಲ. ಅಲೈನ್‌ಮೆಂಟ್ ನಿರ್ಧರಿಸುವ ಮೊದಲೇ ಏಕೆ ರೈತರಿಗೆ ನೋಟಿಸ್‌ ನೀಡುತ್ತಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ರೈತರಿಗೆ ಪರಿಹಾರದ ಹಣ ನೀಡುವುದು ಸರಕಾರ. ಸರ್ಕಾರದ ಮಾನದಂಡಗಳು ಮತ್ತು ಕಾನೂನಿನ ಇತಿಮಿತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು, ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ತಮ್ಮ ಜೇಬಿನಿಂದ ರೈತರಿಗೆ ಪರಿಹಾರ ನೀಡುತ್ತಿಲ್ಲ. ರೈತರ ಮನವಿ, ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಜಿಲ್ಲಾಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಭೂಸ್ವಾಧೀನ ಪ್ರಕ್ರಿಯೆ ಸಮಯದಲ್ಲಿ ಹಲವಾರು ಗೊಂದಲಗಳು ಉಂಟಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿ ಕಾಯ್ದೆಯಿಂದ ಸ್ಪಷ್ಟ ನಿರ್ಧಾರಗಳನ್ನು ಮಾಡಲಾಗುತ್ತಿಲ್ಲ. ಇಡೀ ರಾಜ್ಯಕ್ಕೆ ಏಕರೂಪ ಭೂಸ್ವಾಧೀನ ಪರಿಹಾರದ ಅಗತ್ಯವಿದೆ. ಅದು ಕಾನೂನಾಗಿ ಮಾರ್ಪಾಡಾಗಬೇಕು. ಒಂದು ಭೂ ಪ್ರದೇಶಕ್ಕೆ 80 ಸಾವಿರ ರೂ. ಪರಿಹಾರ ಇನ್ನೊಂದು ಭೂಮಿಗೆ 18ಸಾವಿರ ರೂ. ಪರಿಹಾರ ನೀಡುವುದು ಅವೈಜ್ಞಾನಿಕ ಎಂದರು.

ಮ್ಯಾಮ್‌ಕೋಸ್‌ ನಿರ್ದೇಶಕ ಆರ್‌.ದೇವಾನಂದ್‌ ಮಾತನಾಡಿ, ಹೆದ್ದಾರಿ ಅಭಿವೃದ್ಧಿ ಕಾರಣದಿಂದ ರೈತರು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸರಕಾರ ರೈತರ ಭೂಮಿಗೆ ನೀಡುವ ಪರಿಹಾರ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿದೆ. ರೈತರಿಗೆ 1:6 ಮಾರುಕಟ್ಟೆ ದರದ ಪರಿಹಾರವನ್ನು ನೀಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಶೇಷ ಭೂಸ್ವಾಧೀನಾಧಿಕಾರಿಗಳು ನೀಡುತ್ತಿರುವ ಪರಿಹಾರ ಅವೈಜ್ಞಾನಿಕವಾಗಿದೆ. ರೈತರಿಗೆ ಸಮರ್ಪಕವಾದ ಪರಿಹಾರ ಸಿಗಬೇಕು. ಇಲ್ಲವಾದಲ್ಲಿ ರೈತರು ಯಾವುದೇ ಕಾರಣಕ್ಕೂ ಭೂಮಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಕಳೆದ 3 ವರ್ಷಗಳಿಂದ ರೈತರಿಗಾಗಿರುವ ನಷ್ಟವನ್ನು ತುಂಬಿಕೊಡಬೇಕೆಂದು ಆಗ್ರಹಿಸಿದರು.

ಹೆದ್ದಾರಿ ಹೋರಾಟ ಸಮಿತಿ ಸಂಚಾಲಕ ಸ್ವಾಮಿ ಮಾತನಾಡಿ, ಹೆದ್ದಾರಿ ಕಾಯಿದೆಯಲ್ಲಿ ಸ್ಪಷ್ಟ ಆದೇಶವಿದ್ದರು ಸಹ ಅಧಿಕಾರಿಗಳು ರೈತರಿಗೆ ಸೂಕ್ತ ಪರಿಹಾರ ನೀಡವಲ್ಲಿ ಮೀನಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು.

ರೈತ ಗುರುಮೂರ್ತಿ ಮಾತನಾಡಿದರು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾಪಂ ಅಧ್ಯಕ್ಷೆ ಪದ್ಮಾವತಿ, ಜಿಪಂ ಸದಸ್ಯರಾದ ಕೆ.ಆರ್‌.ಆನಂದಪ್ಪ, ಚೈತ್ರಶ್ರೀ, ಉಪವಿಭಾಗಾಧಿಕಾರಿ ಬಿ.ಆರ್‌.ರೂಪಾ, ವಿವಿಧ ಇಲಾಖೆ ಅಧಿಕಾರಿಗಳು, ರೈತ ಮುಖಂಡರಾದ ಟಿ.ಎನ್‌.ಗೋಪಿನಾಥ್‌, ಗುರುಮೂರ್ತಿ, ಆನಂದ್‌, ಟಿ.ಎಸ್‌.ರಮೇಶ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.