ಸನ್ನಡತೆಯಿಂದ ಬದುಕಿದರೆ ಜೀವನ ಸಾರ್ಥಕ: ಸ್ವಾಮೀಜಿ

ಯುವಪೀಳಿಗೆ ಆಧುನಿಕ ಸಂಸ್ಕೃತಿಗೆ ಮಾರು ಹೋಗದೆ ಧಾರ್ಮಿಕ ವಿಚಾರದತ್ತ ಗಮನಹರಿಸಲಿ

Team Udayavani, May 16, 2019, 5:50 PM IST

16-May-38

ತರೀಕೆರೆ: ಬೇಲೇನಹಳ್ಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಶ್ರೀಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.

ತರೀಕೆರೆ: ಜೀವನ ಸುಗಮವಾಗಬೇಕಾದರೆ ಜನರು ಆಧ್ಯಾತ್ಮಿಕದತ್ತ ಗಮನ ನೀಡಬೇಕು. ದಿನನಿತ್ಯ ಜಂಜಾಟದ ನಡುವೆ ಆಧ್ಯಾತ್ಮಿಕ ಕಡೆ ಒಲವು ತೋರಿ ಜೀವನದಲ್ಲಿ ಸನ್ನಡತೆಯಿಂದ ಬದುಕಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಹುಣಸಘಟ್ಟ ಗುರು ಹಾಲುಸ್ವಾಮಿ ಮಠದ ಪಟ್ಟಾಧ್ಯಕ್ಷ ಶ್ರೀಗುರುಮೂರ್ತಿ ಶಿವಾಚಾರ್ಯರು ಹೇಳಿದರು.

ಸಮೀಪದ ಬೇಲೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಬೂದಿಬಸವೇಶ್ವರಸ್ವಾಮಿ ದೇವಾಲಯದ ಕಳಸಾರೋಹಣ ನೆರವೇರಿಸಿ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಗ್ರಾಮಸ್ಥರು ದೈವ ಬಲದ ಮೇಲೆ ನಂಬಿಕೆ ಇಟ್ಟು ಲೋಕಕಲ್ಯಾಣಾರ್ಥವಾಗಿ ನಿರ್ಮಿಸಿರುವ ಶ್ರೀಬೂದಿಬಸವೇಶ್ವರಸ್ವಾಮಿ ದೇಗುಲ ಸದ್ಭಕ್ತರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯತ್ತದೆಂಬ ನಂಬಿಕೆ ಎಲ್ಲರಲ್ಲಿಯೂ ಅಚಲವಾಗಿದೆ. ಗ್ರಾಮಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜನೆ ಗೊಳಿಸುವುದರಿಂದ ಯುವಜನತೆಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲಕರವಾಗುತ್ತದೆ ಮತ್ತು ಯುವಪೀಳಿಗೆ ಆಧುನಿಕ ಸಂಸ್ಕೃತಿಗೆ ಮಾರು ಹೋಗದೆ ಧಾರ್ಮಿಕ ವಿಚಾರದತ್ತ ಗಮನಹರಿಸಬೇಕು ಎಂದರು.

ಸಾಂಸ್ಕೃತಿಕ ಚಿಂತಕ ಡಾ| ಬಸವರಾಜ್‌ ನೆಲ್ಲಿಸರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಆಧುನಿಕ ಜೀವನ ಶೈಲಿಗೆ ಮಾರು ಹೋಗಿ ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಅವರನ್ನು ಎಚ್ಚರಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದು, ಪುಸ್ತಕ ಓದುವ ಹವ್ಯಾಸ ರೂಢಿಸಬೇಕು. ಆದರ್ಶ ವ್ಯಕ್ತಿಗಳ ಜೀವನ ಕಥನಗಳು, ವಚನ ಸಾಹಿತ್ಯಗಳಲ್ಲಿನ ಸತ್ವವನ್ನು ಓದಿ ತಿಳಿದುಕೊಂಡರೆ ಜೀವನ ಮೌಲ್ಯ ಹೆಚ್ಚುವುದಲ್ಲದೆ ಜೀವನದಲ್ಲೂ ಸಾಕಷ್ಟು ಪರಿವರ್ತನೆ ಕಾಣಲಿದೆ ಎಂದು ಹೇಳಿದರು.

ಧಾರ್ಮಿಕ ಸಭೆಯಲ್ಲಿ ಮೂಡಿಗೆರೆಯ ಮಂಜು ಮತ್ತು ಸಂಗಡಿಗರು ವಚನ ಗಾಯನ ಹಾಡಿದರು. ಬಿ.ಸೋಮಶೇಖರ್‌ ಸ್ವಾಗತಿಸಿದರು. ರಕ್ಷಿತಾ ಮತ್ತು ಹಾಲೇಶ್‌ ನಿರೂಪಿಸಿದರು. ಕಿರುತೆರೆ ನಿರ್ಮಾಪಕ, ನಿರ್ದೇಶಕ ಸಿ.ಚಂದ್ರಶೇಖರ್‌, ರಂಗಭೂಮಿ ನಟ ದಾಳೇಗೌಡ್ರು, ಗ್ರಾಪಂ ಅಧ್ಯಕ್ಷ ಟಿ.ಸಿದ್ದಪ್ಪ, ಬಿ.ಎಂ.ಬಸವರಾಜಪ್ಪ, ಪ್ರಮುಖರಾದ ಎಚ್.ಎಂ.ರುದ್ರಪ್ಪ, ಬಿ.ಎಂ.ವಿಜಯಕುಮಾರ್‌, ಮಹೇಶ್ವರಪ್ಪ, ಆರ್‌.ಬಸವರಾಜ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಬಿ.ಸುರೇಶ್‌, ಗ್ರಾಪಂ ಸದಸ್ಯ ಬಿ.ಎನ್‌.ಚಿದಾನಂದ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.