11 ವರ್ಷ ಕಳೆದ್ರೂ ಹನಿ ನೀರು ಸಿಕ್ಕಿಲ್ಲ!

ಕೋಟ್ಯಂತರ ರೂ. ಖರ್ಚಾದರೂ ಪೂರ್ಣಗೊಳ್ಳದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ

Team Udayavani, May 16, 2019, 11:15 AM IST

16-May-10

ತರೀಕೆರೆ: ಸೊಪ್ಪಿನಮಟ್ಟಿಯಲ್ಲಿ ನಿರ್ಮಾಣಗೊಂಡಿರುವ ನೀರು ಶುದ್ಧೀಕರಣ ಘಟಕ.

ತರೀಕೆರೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನೆನಗುದಿಗೆ ಬಿದ್ದಿದೆ.

ಗ್ರಾಮೀಣ ಜನರ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ರಾಜ್ಯ ಸರಕಾರ 7.36 ಲಕ್ಷ ರೂ. ವೆಚ್ಚದಲ್ಲಿ ಸೊಪ್ಪಿನಮಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಈ ಯೋಜನೆಯ ಕಾಮಗಾರಿ ಪೂರ್ಣಗೊಳ್ಳದೆ ತ್ರಿಶಂಕು ಸ್ಥಿತಿಯಲ್ಲಿದೆ.

7 ಗ್ರಾಮ ಪಂಚಾಯತ್‌ ವ್ಯಾಪ್ತಿಯ 11 ಗ್ರಾಮಗಳಿಗೆ ಭದ್ರಾ ನದಿಯಿಂದ ನೀರೊದಗಿಸುವ ಉದ್ದೇಶದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೊಳಿಸಿದ್ದು, ಯೋಜನೆ ಪ್ರಾರಂಭವಾಗಿ 11 ವರ್ಷಗಳು ಕಳೆದರೂ ಒಂದು ಲೋಟ ನೀರು ಗ್ರಾಮಸ್ಥರಿಗೆ ತಲುಪದಿರುವುದು ವಿಪರ್ಯಾಸದ ಸಂಗತಿ.

ತಾಲೂಕಿನಲ್ಲಿ ನೈಸರ್ಗಿಕವಾಗಿ ದೊರೆಯುವ ಜಲಮೂಲಗಳಿಗೆ ಕೊರತೆ ಇಲ್ಲ. ಇಲ್ಲಿ ಭದ್ರಾ ನದಿ, ಹೆಬ್ಬೆ ಜಲಪಾತ, ಕಲ್ಲತ್ತಿ ಜಲಪಾತ, ಭೀಮನಹಳ್ಳ, ಕೊಂಡೆಖಾನ್‌ಹಳ್ಳ, ಗಾಣಗಿತ್ತಿಹಳ್ಳ, ಹೋದಿರಾಯನ ಹಳ್ಳ, ಗೊಂದಿ ಅಣೆಕಟ್ಟು ಇವುಗಳ ಜೊತೆಗೆ ಲೆಕ್ಕವಿಲ್ಲದಷ್ಟು ಸಣ್ಣ ಸಣ್ಣ ತೊರೆಗಳು ಮಳೆಗಾಲದಲ್ಲಿ ತುಂಬಿ ನೀರು ವ್ಯರ್ಥವಾಗಿ ಹರಿದು ನದಿಗೆ ಸೇರುತ್ತದೆ. ಆದರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

2007-08ರಲ್ಲಿ 11 ಗ್ರಾಮಗಳಿಗೆ ಸೊಪ್ಪಿನಮಟ್ಟಿ ಬಹುಗ್ರಾಮ ಕುಡಿಯುವ ಕುಡಿಯುವ ನೀರು ಯೋಜನೆ ಜಾರಿಗೆ ಅನುಮೋದನೆ ಸಿಕ್ಕಿತ್ತು. ಯೋಜನೆಯ ಕಾಮಗಾರಿ ಆರಂಭವಾಗಿ 9 ತಿಂಗಳೊಳಗೆ ಪೂರ್ಣಗೊಳಿಸುವಂತೆ ಷರತ್ತು ವಿಧಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಯೋಜನೆ ಕುಟುಂತ್ತಾ, ತೆವಳತ್ತ ಸಾಗಿದೆ.

ಆರಂಭದಲ್ಲಿ ಈ ಯೋಜನೆಗೆ 5.14 ಕೋಟಿ ರೂ. ಮೀಸಲಿರಿಸಲಾಗಿತ್ತು. ಬಳಿಕ 5.86 ಕೋಟಿ ರೂ.ಗೆ ಟೆಂಡರ್‌ ನೀಡಲಾಯಿತು. ಇಲಾಖೆಯ ದಾಖಲೆ ಪ್ರಕಾರ ಯೋಜನೆ 2014ರಲ್ಲಿಯೇ ಪೂರ್ಣಗೊಳಿಸಲಾಗಿದೆ. ಯೋಜನೆ ಪೂರ್ಣಗೊಳಿಸಲು ಗ‌ುತ್ತಿಗೆದಾರನಿಗೆ ಸರಕಾರ ಇಲ್ಲಿಯವರೆಗೆ 7.36 ಕೋಟಿ ರೂ.ಪಾವತಿಸಿದೆ. ಆದರೆ ಈ ಯೋಜನೆಯ ವ್ಯಾಪ್ತಿಯ ಕರಕುಚ್ಚಿ, ಕೆಂಚಿಕೊಪ್ಪ, ಹಲಸೂರು, ಮುಡಗೋಡು, ಬರಗೇನಹಳ್ಳಿ, ಬಾವಿಕೆರೆ ಮತ್ತು ಸಿದ್ದರಹಳ್ಳಿ ಗ್ರಾಪಂ, ಮಾಳಿಕೊಪ್ಪ, ಯರೇಬೈಲು, ದುಗ್ಲಾಪುರ ಮತ್ತು ಗಂಜಿಗೆರೆ ಗ್ರಾಮಗಳಿಗೆ ಇನ್ನೂ ಕುಡಿಯುವ ನೀರು ಪೂರೈಕೆಯಾಗದಿರುವುದು ವಿಶೇಷ.

ಸೊಪ್ಪಿನಮಟ್ಟಿ ಗುಡ್ಡದಲ್ಲಿ ನೀರು ಶುದ್ಧೀಕರಣ ಘಟಕದ ಕಾಮಗಾರಿ ಪೂರ್ಣಗೊಂಡಿದೆ. ಇದರ ತಪ್ಪಲಿನಲ್ಲಿಯೇ ಇರುವ ಕರಕುಚ್ಚಿ ಗ್ರಾಮಕ್ಕೆ ಇಲ್ಲಿಯವರೆಗೆ ನೀರು ಪೂರೈಕೆಯಾಗಿಲ್ಲ. ಶುದ್ಧೀಕರಣ ಘಟಕದಿಂದ ನೀರು ಹರಿಸಿದ ಕೂಡಲೇ ನೀರಿನ ಒತ್ತಡ ತಾಳದೆ ಪೈಪ್‌ಲೈನ್‌ಗಳು ಒಡೆದು ಹೋಗುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಮೋಟಾರ್‌ ಪಂಪ್‌ ಅಳವಡಿಕೆ ಮತ್ತು ಟ್ಯಾಂಕ್‌ ನಿರ್ಮಾಣಕ್ಕೆ ಮುನ್ನವೇ ಪೈಪ್‌ಲೈನ್‌ ಅಳವಡಿಸಲಾಗಿದೆ. ನೀರು ಹರಿಯುವ ಪ್ರಮಾಣಕ್ಕೆ ಅನುಗುಣವಾದ ಪಿವಿಸಿ ಪೈಪ್‌ಗ್ಳು, ಅಗತ್ಯವಿರುವ ಕಡೆಗಳಲ್ಲಿ ಎರಕ ಪೈಪ್‌ ಅಳವಡಿಸದಿರುವುದು ಯೋಜನೆ ಹಳ್ಳ ಹಿಡಿಯಲು ಕಾರಣವಾಗಿದೆ. ಯೋಜನೆ ಪೂರ್ಣಗೊಂಡಿದೆ ಎಂಬ ವರದಿ ಆಧಾರದ ಮೇರೆಗೆ ಸರಕಾರ ಯೋಜನೆಯ ನಿರ್ವಹಣೆಗಾಗಿ 2 ಕೋಟಿ ರೂ. ಬಿಡುಗಡೆ ಮಾಡಲು ಸಿದ್ಧವಾಗಿತ್ತು. ಆದರೆ ಯೋಜನೆಯನ್ನು ತಜ್ಞರಿಂದ ತನಿಖೆ ಮಾಡಿಸಿ ವರದಿ ಪಡೆದುಕೊಂಡ ಸರಕಾರ ಬಿಡುಗಡೆ ಆದೇಶವನ್ನು ಹಿಂದಕ್ಕೆ ಪಡೆದಿದೆ.

ಒಟ್ಟಾರೆ ಸರಕಾರ ಕುಡಿಯುವ ನೀರಿಗಾಗಿ ಕೋಟಿಗಟ್ಟಲೇ ಹಣ ನೀಡಿದೆ. ಸರಕಾರ ನೀಡಿದ ಅನುದಾನವು ಕೂಡ ಪೂರ್ಣ ಪ್ರಮಾಣದಲ್ಲಿ ಖರ್ಚಾಗಿದೆ. ಆದರೆ ಕುಡಿಯುವ ನೀರು ಇನ್ನೂ ಯಾವ ಗ್ರಾಮಕ್ಕೂ ತಲುಪಿಲ್ಲ. ಸಾರ್ವಜನಿಕರ ಹಣ ಯಾವ ರೀತಿ ಪೋಲಾಗುತ್ತದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಜಿಲ್ಲೆಯಲ್ಲಿ ಕಳಸ, ಸಖರಾಯಪಟ್ಟಣ, ಸೊಪ್ಪಿನಮಟ್ಟಿ ಮತ್ತು ಬೇಲೇನಹಳ್ಳಿ ಹಂತ-1 ಮತ್ತು ಹಂತ -2 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ ಈ ಬಹುಗ್ರಾಮ ಕುಡಿಯುವ ಯೋಜನೆಗಳು ಪೂರ್ಣಗೊಂಡರು ನೀರು ಹರಿದು ಬರದಿರುವುದು ಜಿಲ್ಲೆಯ ಜನತೆಯ ದುರಂತವೇ ಸರಿ.

ಸೊಪ್ಪಿನಮಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸರಕಾರದ ಒಪ್ಪಿಗೆ ಪಡೆದು 11 ವರ್ಷಗಳು ಕಳೆದಿವೆ. ಈ ಯೋಜನೆ ಬಗ್ಗೆ ಜಿಪಂ ಸಭೆಗಳಲ್ಲಿ ಆಗಿರುವ ವಿಳಂಬ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ಸುದೀರ್ಘ‌ ಚರ್ಚೆ ನಡೆದಿದೆ. ತನಿಖೆಗೂ ಒತ್ತಾಯ ಮಾಡಲಾಗಿತ್ತು. ಸಿಇಒ, ಕಾರ್ಯಪಾಲಕ ಇಂಜನಿಯರ್‌, ಹಲವಾರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೋಗಿದ್ದೇ ವಿಶೇಷ. ಆದರೂ ಯೋಜನೆ ಇನ್ನೂ ಕೂಡ ಕಾರ್ಯಗತವಾಗಿಲ್ಲ.ಅಧಿಕಾರಿಗಳಿಗೆ ಯೋಜನೆ ಪೂರ್ಣಗೊಳಿಸುವ ಮನಸ್ಥಿತಿ ಇದ್ದಿದ್ದರೆ ಯೋಜನೆ ಜನರಿಗೆ ತಲುಪುತ್ತಿತ್ತು.
ಕೆ.ಪಿ.ಕುಮಾರ್‌,
ಜಿಪಂ ಮಾಜಿ ಸದಸ್ಯ, ಕರಕುಚ್ಚಿ.

ಸೊಪ್ಪಿನಮಟ್ಟಿ ಯೋಜನೆಯೇ ಅವೈಜ್ಞಾನಿಕ. 7 ಗ್ರಾಪಂಗ‌ಳಿಗೆ ನೀರೊದಗಿಸುವ ಯೋಜನೆ ಇದಾದರು,ಈ ಯೋಜನೆ ಪೂರ್ಣಗೊಳ್ಳಲು 10 ವರ್ಷ ಕಳೆದರೂ ಸಹ ಇನ್ನೂ ಪೂರ್ಣಗೊಂಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಇನ್ನೊಂದು ಉದಾಹರಣೆ ಇನ್ನೊಂದಿಲ್ಲ. ಸರಕಾರ ಗ್ರಾಪಂಗ‌ಳಿಗೆ ತಲಾ 1 ಕೋಟಿ ರೂ. ನೀಡಿದ್ದರೆ ಗ್ರಾಪಂಗಳು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತಿದ್ದವು. ನೆನಗುದಿಗೆ ಬೀಳುವ ಇಂತಹ ಯೋಜನೆಗಳಿಂದ ಯಾರಿಗೆ ತಾನೇ ಲಾಭ. ಸರಕಾರ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಗ್ರಾಮಗಳಿಗೆ ನೀರು ಹರಿಸುವ ಕೆಲಸ ಮಾಡಲಿ.
ರಾಮಪ್ಪ,
ತಾಪಂ ಸದಸ್ಯರು, ಮುಡಗೋಡು.

ಸೊಪ್ಪಿನಮಟ್ಟಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಹುತೇಕ ಪೂರ್ಣಗೊಂಡಿದೆ. ಈ ಹಿಂದೆ ಸಬ್‌ಮರ್ಸಿಬಲ್ ಪಂಪ್‌ ಅಳವಡಿಸಲಾಗಿತ್ತು. ಇದನ್ನು ಬದಲಿಸಿ ಟರ್ಬೋ ಮೋಟಾರ್‌ ಪಂಪ್‌ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಗುಜರಾತ್‌ನಿಂದ ಪಂಪಿಂಗ್‌ ಮಷಿನ್‌ ಬಂದ ಕೂಡಲೇ ಅಳವಡಿಸಿ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು.
ಬಿ.ಶಿವಕುಮಾರ್‌,ಇಇ,ಗ್ರಾನೀಸ ಇಲಾಖೆ.

ಶೇಖರ್‌ ವಿ.ಗೌಡ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.