ರೈತರಿಗೀಗ ಮೀಸಲು ಅರಣ್ಯ ಘೋಷಣೆ ಆತಂಕ!

ಮಲೆನಾಡು ಭಾಗದ ರೈತರ ಮೇಲೆ ಅರಣ್ಯ ಇಲಾಖೆಯ ತೂಗುಗತ್ತಿ ಬದುಕು ಅತಂತ್ರವಾಗುವ ಸಾಧ್ಯತೆ

Team Udayavani, Sep 29, 2019, 2:40 PM IST

29-Sepctember-12

„ರಾಂಚಂದ್ರ ಕೊಪ್ಪಲು
ತೀರ್ಥಹಳ್ಳಿ:
ಮಲೆನಾಡು ಭಾಗದ ರೈತರ ಮೇಲೆ ಅರಣ್ಯ ಇಲಾಖೆಯ ತೂಗುಕತ್ತಿ ಸದಾ ಕಾಲ ಇದ್ದು ರೈತರು ಆತಂಕದಿಂದಲೇ ಕೃಷಿ ಬದುಕು ಸಾಗಿಸುತ್ತಾ ಬಂದಿದ್ದಾರೆ. ಆದರೆ ಈಗ ಸರ್ಕಾರ ಅರಣ್ಯ ಕಾಯಿದೆ 1963ರ ಕಲಂ 41(1ಎ) ಪ್ರಕಾರ ತಾಲೂಕಿನ ಮತ್ತೂರು ಹೋಬಳಿಯ ಮಾಣಿಕೊಪ್ಪ ಹಾಗೂ ಕೊಳಿಗೆಯ ಗ್ರಾಮದ ಒಟ್ಟು 342 ಎಕರೆ 8ಗುಂಟೆ ವಿಸ್ತೀರ್ಣದ ಸರ್ಕಾರಿ ಜಮೀನುಗಳನ್ನು ಶೇಡ್ಗಾರು ಮೀಸಲು ಅರಣ್ಯ ಎಂದು ಘೋಷಿಸಿದ್ದು ಈ ಭಾಗದ ರೈತರು, ಕೃಷಿ ಕಾರ್ಮಿಕರು ಆತಂಕದಿಂದ ಬದುಕು ಸಾಗುವಂತಾಗಿದೆ.

ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವಾಲಯದವರು ಅಪಾಜಿ 38, ಎಫ್‌ಎಎಫ್‌ 2008 ಬೆಂಗಳೂರು 20-8-2019ರಂದು ಅಧಿಸೂಚನೆ ಹೊರಡಿಸಿದ್ದಾರೆ. ಮತ್ತೂರು ಹೋಬಳಿಯ ಮಾಣಿಕೊಪ್ಪ ಹಾಗೂ ಕೊಳಿಗೆ ಗ್ರಾಮದ ಗ್ರಾಮಸ್ಥರು ಹಲವು ವರ್ಷಗಳಿಂದ ಈ ಭಾಗದ ಕಾಡುಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿ ಈ ಭಾಗದಲ್ಲಿ ಕೃಷಿ ಬದುಕು ಸಾಗಿಸುತ್ತಿದ್ದಾರೆ. ಕಾಡಿನಲ್ಲಿ ಸೊಪ್ಪು ಹಾಗೂ ಉರುವಲಿಗಾಗಿ ಸೌದೆಯನ್ನು ಮಾತ್ರ ಉಪಯೋಗಿಸುತ್ತ ಆ ಭಾಗದ ಕಾಡನ್ನು ಸಂರಕ್ಷಿಸುತ್ತ ಬಂದಿದ್ದರು. ಆದರೀಗ ಏಕಾಏಕಿ ಸರ್ಕಾರ ಮೀಸಲು ಅರಣ್ಯ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈ ಭಾಗದ ಜನರು ಆತಂಕಗೊಂಡಿದ್ದಾರೆ. ಮಾಣಿಕೊಪ್ಪ ಗ್ರಾಮದ ಸರ್ವೆ ನಂ. 19ರ 164 ಎಕರೆ 8ಗುಂಟೆಯ 66/45 ಹೆಕ್ಟೇರ್‌ ಪ್ರದೇಶ ಕಾಡಿನಿಂದ ಕೂಡಿದೆ. ಕೆಲವೆಡೆ ಓಡಾಡುವ ರಸ್ತೆಗಳು ಸೇರಿವೆ.

ಮಾಣಿಕೊಪ್ಪದ ಸರ್ವೆ ನಂ. 10ರ 140 ಎಕರೆ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು, 200ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ. ಕೃಷಿ ಬದುಕನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಈ ಭಾಗದ ಮಧ್ಯಮ ವರ್ಗದ ಕೃಷಿ ಕುಟುಂಬಗಳು ಭಯದಿಂದ ಬದುಕುವಂತಾಗಿದೆ.

ಕೊಳಿಗೆ ಗ್ರಾಮದ ಸರ್ವೆ ನಂ. 33 ರ 200 ಎಕರೆ 8ಗುಂಟೆ ವಿಸ್ತೀರ್ಣ ಹಾಗೂ ಸರ್ವೆ ನಂ. 29ರ 2 ಎಕರೆ ವಿಸ್ತೀರ್ಣದಲ್ಲಿ ಹಲವು ಮನೆಗಳು, ಕೃಷಿ ಜಮೀನುಗಳು, ಸಾರ್ವಜನಿಕರು ಓಡಾಡುವ ರಸ್ತೆಗಳಿವೆ. ಆದರೀಗ ಏಕಾಏಕಿ ಸರ್ಕಾರ ಈ ಎರಡು ಗ್ರಾಮಗಳ ಪ್ರದೇಶವನ್ನು ಮೇಲೆ ಶೇಡ್ಗಾರು ಮೀಸಲು ಅರಣ್ಯ ಎಂದು ಘೋಷಿಸಿದ್ದರಿಂದ ಇಲ್ಲಿನ ಕೃಷಿ ರೈತರ ಜೀವನ ಅತಂತ್ರವಾಗಲಿದೆ.

ಒಟ್ಟಾರೆ ಮಲೆನಾಡಿನಲ್ಲಿಂದು ಬಗರ್‌ಹುಕುಂ ಸಮಸ್ಯೆ, ಅರಣ್ಯಹಕ್ಕು, ಒತ್ತುವರಿ ಸಮಸ್ಯೆ ಮುಂತಾದ ಸಮಸ್ಯೆಗಳ ನಡುವೆಯೂ ರೈತರು ಕಂಗಾಲಾಗಿ ಬದುಕುತ್ತಿರುವಾಗ ಶೇಡ್ಗಾರು ಮೀಸಲು ಅರಣ್ಯದ ಘೋಷಣೆಯಿಂದ ಈ ಭಾಗದ ರೈತರ ಬದುಕಿನ ಮೇಲೆ ಮತ್ತೆ ಬರೆ ಎಳೆದಂತಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.