ನೆರೆ ಸ್ಥಿತಿ ನಿರ್ವಹಣೆ ನಿರ್ಲಕ್ಷ್ಯಕ್ಕೆ ಆಕ್ರೋಶ

ಆಗುಂಬೆಯಿಂದ ಮೇಗರವಳ್ಳಿವರೆಗೆ ಕಾಂಗ್ರೆಸ್‌ನಿಂದ ಪಾದಯಾತ್ರೆ

Team Udayavani, Oct 26, 2019, 3:30 PM IST

26-October-13

ತೀರ್ಥಹಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತಿವೃಷ್ಟಿಯಿಂದಾಗಿ ಹಾನಿಗೆ ಒಳಗಾದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ವಿಫಲವಾಗಿವೆ. ಮಲೆನಾಡು ಭಾಗದ ರೈತರು ಕಾಡು ಪ್ರಾಣಿಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಅಡಕೆಗೆ ತಗುಲಿದ ಕೊಳೆರೋಗದ ಬಗ್ಗೆ ಸೂಕ್ತ ಪರಿಹಾರ ನೀಡದ ಸರ್ಕಾರಗಳ ವೈಫಲ್ಯ ಹಾಗೂ ಕ್ಷೇತ್ರದ ಶಾಸಕರ ನಿರ್ಲಕ್ಷ್ಯ ಖಂಡಿಸಿ ತೀರ್ಥಹಳ್ಳಿ ಕಾಂಗ್ರೆಸ್‌ ವತಿಯಿಂದ ತಾಲೂಕಿನ ಆಗುಂಬೆಯಿಂದ ಮೇಗರವಳ್ಳಿಯವರೆಗೆ 15 ಕಿಮೀಗಳ ಬೃಹತ್‌ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಆಗುಂಬೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ನೇತೃತ್ವದಲ್ಲಿ ಆರಂಭಗೊಂಡ ಈ ಪಾದಯಾತ್ರೆಗೆ ಮಾಜಿ ಶಾಸಕ ಕಡಿದಾಳ್‌ ದಿವಾಕರ್‌ ಚಾಲನೆ ನೀಡಿದರು. ಸುರಿಯುತ್ತಿದ್ದ ಮಳೆಯ ನಡುವೆಯೂ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಮೇಗರವಳ್ಳಿಯ ಅರಣ್ಯ ಇಲಾಖೆ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರನ್ನು ಸಂಪೂರ್ಣ ಕಡೆಗಣಿಸಿದೆ.

ನೆರೆ ಪರಿಹಾರ ಸಿಗದೆ ಅತಂತ್ರ ಸ್ಥಿತಿ ತಲುಪಿದ್ದಾರೆ. ಮಲೆನಾಡಿನ ರೈತರು ಇಂದು ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಇದರ ಬಗ್ಗೆ ಗಮನ ಹರಿಸದ ಎರಡೂ ಸರ್ಕಾರಗಳು ನಿಷ್ಕ್ರಿಯಗೊಂಡಿವೆ ಎಂದರು.

ಆಗುಂಬೆ ಭಾಗದಲ್ಲಿ ಹೆಚ್ಚುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ. ಕಳೆದ ಹಲವು ತಿಂಗಳಿನಿಂದ ಈ ಭಾಗದಲ್ಲಿ ಒಂಟಿ ಕಾಡಾನೆಯ ಹಾವಳಿ ವಿಪರೀತವಾಗಿದೆ. ಜೊತೆಗೆ ಮಂಗಗಳ ಹಾವಳಿಯಿಂದ ಅಡಕೆ ಬೆಳೆಗಾರರು ತಾವು ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲಾಗದೆ ಅತಂತ್ರ ಸ್ಥಿತಿ ತಲುಪಿದ್ದಾರೆ. ಆದರೆ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಸರ್ಕಾರ ಮಾತ್ರ ಕಣ್ಣುಮುಚ್ಚಿ ಕುಳಿತಿದೆ ಎಂದರು.

ಕ್ಷೇತ್ರದಲ್ಲಿರುವ ಹಲವು ಸಮಸ್ಯೆಗಳ ಬಗ್ಗೆ ಗಮನ ಹರಿಸದ ಶಾಸಕ ಜ್ಞಾನೇಂದ್ರ ನೇತೃತ್ವದ ಬಿಜೆಪಿ ದ್ವೇಷದ ರಾಜಕಾರಣದಲ್ಲಿ ತೊಡಗಿದೆ. ರೈತರ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಗಾಂಧಿ ಹೆಸರಿನಲ್ಲಿ ಸಂಕಲ್ಪಯಾತ್ರೆ ಹೊರಟಿದ್ದಾರೆ. ಬಿಜೆಪಿಯವರು ನಡೆಸುತ್ತಿರುವ ಗಾಂಧಿ  ಹೆಸರಿನ ಯಾತ್ರೆ ಕಪ್ಪೆಯಾತ್ರೆಯಾಗಿದೆ ಎಂದು ವ್ಯಂಗ್ಯವಾಡಿದರು. ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಮಾಡುವ ಬಿಜೆಪಿಯವರಿಗೆ ಅರಣ್ಯ ಮತ್ತು ಕಂದಾಯ ಇಲಾಖೆಯವರು ನೀಡುತ್ತಿರುವ ಕಿರುಕುಳದ ವಿಚಾರ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ಮಲೆನಾಡಿನ ರೈತರ ಸಮಸ್ಯೆಯ ಬಗ್ಗೆ ಮಾತನಾಡದ ಬಿಜೆಪಿಯ ಜನಪ್ರತಿನಿಧಿಗಳಿಗೆ ಮೋದಿ ಮತ್ತು ಶಾ ಅವರನ್ನು ಹೊಗಳುವ ಕೆಲಸವೇ ಹೆಚ್ಚಾಗಿದೆ. ಜೊತೆಗೆ ಮಲೆನಾಡಿನ ಪ್ರಮುಖ ಬೆಳೆ ಅಡಕೆಯ ಬೆಲೆ ನೆಲಕಚ್ಚಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಇಳಿಯಲಿದ್ದು, ಇದಕ್ಕೆ ಕಾರಣ ಕೇಂದ್ರದ ಬಿಜೆಪಿ ಸರ್ಕಾರ.

ಈ ಎರಡೂ ಸರ್ಕಾರಗಳು ಅಡಕೆ ಬೆಳೆಗಾರರ ವಿರೋ ಧಿ ಸರ್ಕಾರವಾಗಿವೆ ಎಂದರು. ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆಸ್ತೂರು ಮಂಜುನಾಥ, ಮುಡುಬಾ ರಾಘವೇಂದ್ರ, ಕೆಪಿಸಿಸಿ ಸದಸ್ಯ ಜಿ.ಎಸ್‌. ನಾರಾಯಣ ರಾವ್‌, ಮುಖಂಡರಾದ ಪಟ್ಟಮಕ್ಕಿ ಮಹಾಬಲೇಶ್‌, ಬಾಳೇಹಳ್ಳಿ ಪ್ರಭಾಕರ್‌, ಎಚ್‌. ಪದ್ಮನಾಭ, ಎಪಿಎಂಸಿ ಸದಸ್ಯರಾದ ಹಸಿರುಮನೆ ಮಹಾಬಲೇಶ್‌, ಕೇಳೂರು ಮಿತ್ರ, ಕೆಳಕೆರೆ ದಿವಾಕರ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಕೆಳಕೆರೆ ಪ್ರದೀಪ್‌, ಧರಣೇಶ್‌, ಪಡುವಳ್ಳಿ ಹರ್ಷೇನ್ದ್ರ ಕುಮಾರ್‌, ಜಯಪ್ರಕಾಶ್‌ ಶೆಟ್ಟಿ, ಅಮ್ರಪಾಲಿ ಸುರೇಶ್‌, ಬಂಡಿ ರಾಮಚಂದ್ರ, ಮಹಿಳಾ ಮುಖಂಡರಾದ ಪ್ರಭಾವತಿ ಶಾಮಣ್ಣ, ಜಿಪಂ ಸದಸ್ಯರಾದ ಕಲ್ಪನಾ ಪದ್ಮನಾಭ, ಭಾರತಿ ಪ್ರಭಾಕರ್‌, ಶ್ವೇತಾ ಬಂಡಿ, ನವಮಣಿ ರವಿಕುಮಾರ್‌,
ವೀಣಾ ಗಿರೀಶ್‌, ಶೃತಿ ವೆಂಕಟೇಶ್‌, ನಯನ ಶೆಟ್ಟಿ, ಸುಶೀಲ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.