ಮಲೆನಾಡು-ಕಾಡು ಜಲಾವೃತ!

ನಿರಂತರ ಮಳೆ•20ಕ್ಕೂ ಹೆಚ್ಚು ಮನೆಗಳ ಕುಸಿತ •ಅಪಾಯದ ಸ್ಥಿತಿಯಲ್ಲಿ ಹಲವು ಗ್ರಾಮಗಳು

Team Udayavani, Aug 11, 2019, 11:57 AM IST

11-Agust-18

ತೀರ್ಥಹಳ್ಳಿ: ಪಟ್ಟಣ ಸಮೀಪದ ಇಂದಾವರ ರಸ್ತೆಯ ಮೇಲೆ ನೀರು ಆವರಿಸಿದೆ

ತೀರ್ಥಹಳ್ಳಿ: ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ರುದ್ರನರ್ತನಕ್ಕೆ ಮಲೆನಾಡಿ ಗರು ಬೆಚ್ಚಿ ಬಿದ್ದಿದ್ದಾರೆ. ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಸತತ ಮೂರನೇ ದಿನವೂ ಶ್ರೀ ರಾಮಮಂಟಪದ ಮೇಲೆ 3 ಅಡಿ ನೀರು ಹರಿಯುತ್ತಿದೆ. ಆಗುಂಬೆ ಭಾಗದ ಮಾಲತಿ ನದಿ ಉಕ್ಕಿ ಅಡಕೆ ತೋಟ- ಗದ್ದೆಗಳು ಜಲಾವೃತಗೊಂಡಿವೆ. ತುಂಗಾನದಿಯಲ್ಲಿ ನೀರಿನ ಮಟ್ಟ 90 ಅಡಿ ಸಮೀಪಿಸುತ್ತಿದೆ. ತಾಲೂಕಿನಲ್ಲಿ 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಂಡಗದ್ದೆ ಸಮೀಪದ ಶಿಂಗನಬಿದರೆ, ಹೆಗಲತ್ತಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ ಅಡಕೆ ತೋಟ- ಗದ್ದೆಗಳಿಗೆ ಅಪಾರ ಹಾನಿಯಾಗಿದೆ. ತಾಲೂಕಿನ ಹಲವೆಡೆ ರಸ್ತೆಗಳು, ಸೇತುವೆಗಳು ಅಪಾಯದ ಸ್ಥಿತಿಯಲ್ಲಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್‌ ಕಂಬ ಹಾಗೂ ವಿದ್ಯುತ್‌ ತಂತಿ ನೆಲಕ್ಕೆ ಅಪ್ಪಳಿಸಿದೆ.

ತಾಲೂಕಿನ ಕನ್ನಂಗಿ ಸಮೀಪದ ಅತ್ತಿಗದ್ದೆಯ ನಿರ್ಮಲಮ್ಮ ಎಂಬುವವರ ಮನೆಯೊಂದಕ್ಕೆ ನೀರು ನುಗ್ಗಿ 8 ಜಾನುವಾರುಗಳು ಹಾಗೂ ಗೀತಾ ಎಂಬುವವರ ಮನೆಯ 5 ಜಾನುವಾರುಗಳು ಕೊಚ್ಚಿ ಹೋಗಿ ಮೃತಪಟ್ಟಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ.

ಕುಂಭದ್ರೋಣ ಮಳೆಗೆ ತೀರ್ಥಹಳ್ಳಿ ಪಟ್ಟಣದಲ್ಲಿ ಜನ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮುಂಜಾನೆ ತಾಲೂಕಿಗೆ ಬರಬೇಕಾದ ಹಾಲು, ತರಕಾರಿ, ಪತ್ರಿಕೆಗಳ ಸರಬರಾಜು ವಾಹನಗಳು ಬಾರದೇ ಪರದಾಡುತ್ತಿದ್ದಾರೆ. ತಾಲೂಕಿನಾದ್ಯಂತ ವಿದ್ಯುತ್‌ ವ್ಯತ್ಯಯದಿಂದ ಸಂಪೂರ್ಣ ಕತ್ತಲು ಆವರಿಸಿದೆ.

ಶಿವಮೊಗ್ಗ- ತೀರ್ಥಹಳ್ಳಿ- ಉಡುಪಿಯ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ಮಂಡಗದ್ದೆ- ತೂದೂರು- ಬೆಜ್ಜವಳ್ಳಿ- ಕುಡುಮಲ್ಲಿಗೆ- ತೀರ್ಥಹಳ್ಳಿ- ಶಿವರಾಜಪುರ- ರಂಜದಕಟ್ಟೆ- ಕಲ್ಮನೆ ಮುಂತಾದ ಕಡೆ ರಸ್ತೆಯ ಮೇಲೆ 3 ಅಡಿ ನೀರು ನಿಂತಿದ್ದು, ವಾಹನ ಸಂಚಾರವಿಲ್ಲದೇ ಜನ ಪರಿತಪಿಸುವತಾಗಿದೆ. ತಾಲೂಕಿನ ಹಲವು ಗ್ರಾಮಗಳು ದ್ವೀಪದಂತಾಗಿವೆ. ಅಡಕೆ ತೋಟಗಳು ಹಾಗೂ ಗದ್ದೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದೆ. ತೀರ್ಥಹಳ್ಳಿ- ಕೊಪ್ಪ ರಸ್ತೆಯಲ್ಲಿ ಸಹ ಕುಶಾವತಿಯಲ್ಲಿ ನೀರು ಆವರಿಸಿ ವಾಹನ ಸಂಚಾರ ಸ್ಥಬ್ಧವಾಗಿದೆ. ಕನ್ನಂಗಿ ಪಂಚಾಯತ್‌ನ ಅತ್ತಿಗದ್ದೆ ಸೇತುವೆ ಸಂಪೂರ್ಣ ನಾಶವಾಗಿದೆ. ಪಟ್ಟಣದ ತಾಲೂಕು ಕಚೇರಿ ಹಿಂಭಾಗದ ಗೋಡೆ ಭಾರೀ ಮಳೆಗೆ ಕುಸಿದಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.