ಅಂಚೆ ಕಚೇರಿಗೀಗ ಇಂಟರ್‌ನೆಟ್ ಸಮಸ್ಯೆ

ಆರ್‌ಟಿಸಿ ಯಂತ್ರದ ದುರವಸ್ಥೆ •ಡಿಜಿಟಲ್ ಇಂಡಿಯಾ ಯತ್ನಕ್ಕೆ ಹಿನ್ನಡೆ

Team Udayavani, Jul 10, 2019, 12:31 PM IST

1–July-19

ತೀರ್ಥಹಳ್ಳಿ: ಆರ್‌ಐಸಿಟಿ ಯಂತ್ರ

ರಾಂಚಂದ್ರ ಕೊಪ್ಪಲು
ತೀರ್ಥಹಳ್ಳಿ:
ಕೇಂದ್ರ ಸರ್ಕಾರ ಅಂಚೆ ಇಲಾಖೆಯಲ್ಲಿ ವಿಭಿನ್ನ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಡಿಜಿಟಲ್ ಇಂಡಿಯಾ ಮೂಲಕ ಹೊಸ ಪ್ರಯತ್ನಗಳನ್ನು ಮಾಡಿದೆ. ಆದರೆ ಜಿಲ್ಲೆಯ ಹಾಗೂ ತೀರ್ಥಹಳ್ಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಅಂಚೆ ಕಚೇರಿಗಳಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ರೂಪಿಸಿರುವ ಆರ್‌ಐಸಿಟಿ ಯಂತ್ರವು ಇಂಟರ್‌ನೆಟ್ ಸಮಸ್ಯೆಗೆ ಸಿಲುಕಿ ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ತೊಂದರೆ ಉಂಟು ಮಾಡಿದೆ.

ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿನ ಅಂಚೆ ಕಚೇರಿಗಳಲ್ಲಿ ಇಲಾಖೆ ನೀಡಿರುವ ಆರ್‌ಐಸಿಟಿ ಯಂತ್ರ ಇಂಟರ್‌ನೆಟ್ ಸಮಸ್ಯೆಯಿಂದ ಸದಾ ಕಾಲ ಕಾರ್ಯ ನಿರ್ವಹಿಸದೆ ಅಂಚೆ ಇಲಾಖೆಯ ನೌಕರರು ಗ್ರಾಹಕರ ಶಾಪಕ್ಕೆ ಗುರಿಯಾಗಿದ್ದಾರೆ. ತಾಲೂಕಿನ ಶೇ.85 ರಷ್ಟು ಅಂಚೆ ಕಚೇರಿಗಳಲ್ಲಿ ಈ ಸಮಸ್ಯೆ ಕಂಡುಬಂದಿದೆ.

ಹಿಂದೆ ಅಂಚೆ ಕಚೇರಿಗಳಲ್ಲಿನ ಪೋಸ್ಟ್‌ ಮಾಸ್ಟರ್‌ಗಳು ಕೆಲಸದ ಒತ್ತಡ ಹೆಚ್ಚಾದ ‌ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಕಳೆದ 6 ತಿಂಗಳಿಂದ ಪ್ರತಿ ಅಂಚೆ ಕಚೇರಿಗಳಿಗೂ ಆರ್‌ಐಸಿಟಿ ಯಂತ್ರ ನೀಡಲಾಗಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಚಿಂತಿ‌ಸಲಾಗಿತ್ತು. ಈ ಯಂತ್ರದ ಮೂಲಕ ಗ್ರಾಹಕರ ಹಾಗೂ ಅಂಚೆ ಕಚೇರಿ ನಡುವಿನ ವ್ಯವಹಾರಕ್ಕೆ ಸುಲಭವಾಗುತ್ತಿತ್ತು. ಅಂಚೆ ಕಚೇರಿಯಲ್ಲಿನ ಮನಿಯಾರ್ಡರ್‌, ರಿಜಿಸ್ಟರ್‌ ಪೋಸ್ಟ್‌, ವೃದ್ಧಾಪ್ಯ ವೇತನ, ವಿಧವಾ ವೇತನ ಮುಂತಾದ ಸೇವೆಯನ್ನು ಗ್ರಾಹಕರಿಗೆ ಸೂಕ್ತ ಸಮಯದಲ್ಲಿ ನೀಡಲಾಗುತ್ತಿಲ್ಲ. ಪ್ರತಿ ನಿತ್ಯ ಅಂಚೆ ಕಚೇರಿಗೆ ಪೋಸ್ಟ್‌ಬ್ಯಾಗ್‌ ಬಂದಾಗಲೂ ಈ ಯಂತ್ರದ ಮೂಲಕವೇ ಕಾರ್ಯ ನಿರ್ವಹಿಸಬೇಕು, ಆದರೆ ಕೆಲವು ದಿನ ಅಂಚೆ ಕಚೇರಿಯ ಕೆಲಸದ ಸಮಯದ ನಂತರವೇ ಇಂಟರ್‌ನೆಟ್ ಕಾರ್ಯ ನಿರ್ವಹಿಸುತ್ತದೆ. ಅಲ್ಲಿಯ ತನಕ ಗ್ರಾಹಕರು ಕಾಯುವಂತಾಗಿದೆ. ಗ್ರಾಮೀಣ ಪ್ರದೇಶದ ಮುಗ್ಧ ಜನಸಾಮಾನ್ಯರಿಗೆ ಈ ಯಂತ್ರದ ಸಮಸ್ಯೆ ವಿವರಿಸಿದರೆ ಅರ್ಥವಾಗುತ್ತಿಲ್ಲ. ಕಾದು-ಕಾದು ಸುಸ್ತದ ಗ್ರಾಹಕರು ಶಾಪ ಹಾಕಿ ವಾಪಸಾಗುತ್ತಿದ್ದಾರೆ.

ಪ್ರಸ್ತುತ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲದ ಸಮಸ್ಯೆಯಿಂದ ಯಂತ್ರವು ಕಾರ್ಯ ನಿರ್ವಹಿಸುತ್ತಿಲ್ಲ. ಈ ಯಂತ್ರದ ಸರ್ವರ್‌ ಸಮಸ್ಯೆಯಿಂದ ಪೋಸ್ಟ್‌ ಮಾಸ್ಟರ್‌ಗಳು ಸೂಕ್ತ ಕೆಲಸವಾಗದೆ ಗೊಂದಲಕ್ಕೀಡಾಗಿದ್ದಾರೆ. ಕೆಲವೆಡೆ ಗ್ರಾಮೀಣ ಪ್ರದೇಶದಲ್ಲಿ ಪೋಸ್ಟ್‌ ಮಾಸ್ಟರ್‌ಗಳು ಯಂತ್ರವನ್ನು ಹಿಡಿದುಕೊಂಡು ಇಂಟರ್‌ನೆಟ್‌ನ ನೆಟ್ವರ್ಕ್‌ಗಾಗಿ ಗುಡ್ಡಬೆಟ್ಟ ಹತ್ತುವಂತಾಗಿದೆ.

ಈಗಾಗಲೇ ಮಲೆನಾಡು ಪ್ರದೇಶದಲ್ಲಿ ಬಿಎಸ್‌ಎನ್‌ಎಲ್ ದೂರಸಂಪರ್ಕ ಸೂಕ್ತವಾಗಿ ಕಾರ್ಯ ನಿರ್ವಹಿಸದೆ ಜನರ ಆಕ್ರೋಶಕ್ಕೆ ಒಳಗಾಗಿದೆ. ಮತ್ತೆ ಈಗ ಅಂಚೆ ಕಚೇರಿಯ ಈ ಯಂತ್ರದ ಸಮಸ್ಯೆ ಗ್ರಾಹಕರಿಗೆ ಕಾಡುವಂತಾಗಿದೆ. ಈಗಾಗಲೆ ಅಂಚೆ ಇಲಾಖೆ ನೌಕರರ ಸಂಘದವರು (ಎಐಜಿಡಿಯು) ಕೇಂದ್ರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನಾದರೂ ಕೇಂದ್ರ ಸರ್ಕಾರದ ಈ ಅಂಗ ಸಂಸ್ಥೆಯಾದ ಅಂಚೆ ಕಚೇರಿಯ ಯಂತ್ರದ ಸಮಸ್ಯೆಯನ್ನು ಇಲಾಖೆ ಗಮನಹರಿಸುವಂತಾಗಲಿ ಎಂಬುದು ಸಾರ್ವಜನಿಕರ ಆಶಯ.

ಮಲೆನಾಡು ಪ್ರದೇಶಗಳಲ್ಲಿನ ಅಂಚೆ ಕಚೇರಿಯ ಯಂತ್ರಗಳ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಇದೊಂದು ದೇಶವ್ಯಾಪಿ ಯೋಜನೆಯಾಗಿದ್ದು ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಇಂಟರ್‌ನೆಟ್ ಸಮಸ್ಯೆ ಇರುವುದರಿಂದ ಈ ಸಮಸ್ಯೆ ಉಲ್ಬಣಗೊಂಡಿದೆ.
ನವೀನ್‌ ಚಂದನ್‌,
ಶಿವಮೊಗ್ಗ ಮುಖ್ಯ ಅಂಚೆ ಕಚೇರಿಯ ಸೂಪರಿಡೆಂಟ್

ಅಂಚೆ ಇಲಾಖೆಯ ಈ ಯಂತ್ರದ ಸಮಸ್ಯೆ ಏನು ನಮಗೆ ಗೊತ್ತಿಲ್ಲ, ಅಂಚೆ ಕಚೇರಿಗೆ ಬಂದಾಗಲೆಲ್ಲ ಮಿಷನ್‌ ಸರಿಯಿಲ್ಲ ಅಂತಾರೆ. ಬೆಂಗಳೂರಿನಲ್ಲಿರುವ ಮಗ ಕಳಿಸುವ ತಿಂಗಳ ಹಣಕ್ಕೆ ಪ್ರತಿ ತಿಂಗಳು ಅಂಚೆ ಕಚೇರಿಗೆ 3-4 ಸಲ ಬರಬೇಕಾಗಿದೆ. ನನ್ನ ಸಮಸ್ಯೆ ಯಾರ ಹತ್ತಿರ ಹೇಳಿಕೊಳ್ಳಲಿ.
ಕೃಷ್ಣಪ್ಪ, ಗ್ರಾಮೀಣ ಪ್ರದೇಶದ ಗ್ರಾಹಕ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.