ಅಡಕೆಗೆ ಕೊಳೆರೋಗದ ಆತಂಕ

ಅತಂತ್ರ ಸ್ಥಿತಿಯಲ್ಲಿ ಅಡಕೆ ಬೆಳೆಗಾರ •ಆಗುಂಬೆ ಭಾಗದಲ್ಲಿ ರೋಗಬಾಧೆ ಹೆಚ್ಚು

Team Udayavani, Aug 25, 2019, 12:49 PM IST

25-Agust-21

ತೀರ್ಥಹಳ್ಳಿ: ಕೊಳೆ ರೋಗಕ್ಕೆ ತುತ್ತಾದ ಅಡಕೆ ತೋಟದ ಸ್ಥಿತಿ.

ತೀರ್ಥಹಳ್ಳಿ: ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾದಾಗಲ್ಲೆಲ್ಲ ಅಡಕೆ ಬೆಳೆಗಾರರು ಆತಂಕದಲ್ಲಿ ಬದುಕುವ ಸ್ಥಿತಿ ಪ್ರತಿ ವರ್ಷವೂ ನಿರಂತರವಾಗಿದೆ. ತಾಲೂಕಿನ ಶೇ. 60ರಷ್ಟು ಅಡಕೆ ತೋಟಗಳಲ್ಲಿ ಅಡಕೆ ಮರಗಳಿಗೆ ಕೊಳೆರೋಗ ಉಲ್ಬಣಿಸಿದ್ದು ಅಡಕೆ ಬೆಳೆಗಾರರು ಅತಂತ್ರ ಸ್ಥಿತಿಯಲ್ಲಿ ಬದುಕುವಂತಾಗಿದೆ.

ಕಳೆದ 1 ತಿಂಗಳಿಂದ ತಾಲೂಕಿನಲ್ಲಿ ಎಡೆಬಿಡದೆ ಸುರಿದ ಭಾರೀ ಮಳೆಗೆ ಅಡಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಹಲವು ಅಡಕೆ ತೋಟಗಳಲ್ಲಿ ಕೊಳೆ ರೋಗ ಪೀಡಿತ ಅಡಕೆಗಳು, ಅಎಕೆ ಮರದ ಕೆಳಗಡೆ ರಾಶಿಗಟ್ಟಲೆ ಹರಡಿ ಬಿದ್ದಿರುವುದನ್ನು ಕಂಡು ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಬೀಳುವ ಆಗುಂಬೆ ಭಾಗದಲ್ಲಿ ಶೇ.85ರಷ್ಟು ಅಡಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ.

ಈಗಾಗಲೇ ತಾಲೂಕಿನ ಅಡಕೆ ಬೆಳೆಗಾರರು ಅಡಕೆಗೆ ತಗುಲಿರುವ ಕೊಳೆರೋಗ ನಿಯಂತ್ರಣಕ್ಕೆ 2 ಬಾರಿ ಔಷಧ ಸಿಂಪಡಿಸಿದ್ದರೂ ಹಲವೆಡೆ ರೋಗದ ನಿಯಂತ್ರಣವಾಗಿಲ್ಲ. ಮಳೆಯ ನಡುವೆಯೂ ಬೆಳೆಗಾರರು ಅಡಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಔಷಧ ಸಿಂಪಡಿಸುತ್ತಿದ್ದಾರೆ. ಹಲವೆಡೆ ಔಷಧ ಸಿಂಪಡಣೆಗೆ ಕೊನೆಗಾರರು ಸಿಗದೆ ರೈತರು ಚಡಪಡಿಸುವಂತಾಗಿದೆ.

ಕಳೆದ 4ವರ್ಷಗಳಿಂದ ನಿರಂತರವಾಗಿ ತಾಲೂಕಿನ ಅಡಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಇನ್ನೊಂದೆಡೆ ಈ ಬಾರಿಯ ಗಾಳಿ- ಮಳೆಗೆ ಅಡಕೆ ತೋಟಗಳಲ್ಲಿನ ಅಡಕೆ ಮರಗಳು ನೆಲಕ್ಕುರುಳಿವೆ. ಹೀಗೆ ಹಲವು ಸಮಸ್ಯೆಗಳ ನಡುವೆ ಆತಂಕದಲ್ಲಿರುವ ಅಡಕೆ ಬೆಳೆಗಾರರು ಸರ್ಕಾರ ಹಾಗೂ ಇಲಾಖೆಯಿಂದ ಸಿಗಬೇಕಾದ ವಿಶೇಷ ಅನುದಾನ ಪರಿಹಾರದ ಬಗ್ಗೆ ಕಾಯುತ್ತ ಕುಳಿತಿದ್ದಾರೆ.

ಸರ್ಕಾರ ಕೂಡಲೇ ಅಡಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಸಂಬಂಧಪಟ್ಟ ಇಲಾಖೆಯವರು ಅಡಕೆ ತೋಟಗಳ ಸ್ಥಳ ಪರಿಶೀಲಿಸಿ ಸೂಕ್ತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅಡಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ಧನ ನೀಡುವುದು ಒಳ್ಳೆಯದು. ಕೊಳೆರೋಗದಿಂದ ತಾಲೂಕಿನ ಮಧ್ಯಮ ಹಾಗೂ ಸಾಮಾನ್ಯ ಅಡಕೆ ಬೆಳೆಗಾರರು ಹೆಚ್ಚು ಚಿಂತೆಗೆ ಒಳಗಾಗಿ ಆತಂಕದಿಂದ ಬದುಕುವಂತಾಗಿದೆ.

ಕೊಳೆರೋಗದ ಲಕ್ಷಣಗಳು: ಅಡಕೆ ಕಾಯಿಗಳ ಮೇಲೆ ಕಂದುಬಣ್ಣದ ಶಿಲೀಂಧ್ರದ ಬೆಳೆವಣಿಗೆ ಕಂಡು ಬರುತ್ತದೆ. ನಂತರ ಬಿಳಿ ಶಿಲೀಂಧ್ರದ ಬೆಳವಣಿಗೆ ಕಂಡು ಬಂದು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತದೆ. ಗೊಂಚಲುಗಳಲ್ಲೆ ಕಪ್ಪಾಗಿ ಕಾಣುತ್ತದೆ. ಗಿಡದ ಬೆಳವಣಿಗೆ ಕುಂಠಿತಗೊಂಡು ಇಳುವರಿಯಲ್ಲಿ ಹೆಚ್ಚಿನ ಹಾನಿಯಾಗುತ್ತದೆ. ಜೂನ್‌ ತಿಂಗಳಿಂದ ಸೆಪ್ಟೆಂಬರ್‌ವರೆಗೆ ಮಲೆನಾಡಿನ ಭಾಗದ ಅಡಕೆ ತೋಟಗಳಲ್ಲಿ ಕೊಳೆರೋಗದ ತೀವ್ರತೆ ಹೆಚ್ಚಿರುತ್ತದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.