ನೆರೆಹಾನಿಗೆ 280 ಕೋಟಿ ಬಿಡುಗಡೆ: ಈಶ್ವರಪ್ಪ

ಕೇಂದ್ರದಿಂದ 180- ರಾಜ್ಯದಿಂದ 100 ಕೋಟಿ ಅನುದಾನ •ನೆರೆ ಪೀಡಿತರ ಸಮಸ್ಯೆಗೆ ಸರ್ಕಾರದ ಸ್ಪಂದನೆ

Team Udayavani, Aug 12, 2019, 11:48 AM IST

12-Agust-18

ತೀರ್ಥಹಳ್ಳಿ: ಶಾಸಕ ಕೆ.ಎಸ್‌. ಈಶ್ವರಪ್ಪ ತಾಲೂಕಿನ ಕನ್ನಂಗಿ ಸಮೀಪದ ನೆರೆ ಹಾವಳಿ ಪ್ರದೇಶಕ್ಕೆ ಭೇಟಿ ನೀಡಿದರು.

ತೀರ್ಥಹಳ್ಳಿ: ರಾಜ್ಯದಲ್ಲಿ ಕಳೆದ 5 ದಿನಗಳಿಂದ ಎಂದೆಂದೂ ಕಾಣದ ಜಲಪ್ರಳಯದಿಂದ ಅಪಾರ ಹಾನಿಯಾಗಿದೆ. ರೈತರು ಹಾಗೂ ನಾಗರಿಕರ ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ತಾತ್ಕಾಲಿಕ ಪರಿಹಾರಕ್ಕೆ ಕೈ ಜೋಡಿಸಿದೆ. ಕೇಂದ್ರ ಸರ್ಕಾರ 180 ಕೋಟಿ ಹಾಗೂ ರಾಜ್ಯ ಸರ್ಕಾರ 100 ಕೋಟಿ ಹಣವನ್ನು ಅತಿವೃಷ್ಟಿ ಪರಿಹಾರ ಧನ ಬಿಡುಗಡೆ ಮಾಡಿದೆ. ಶೀಘ್ರವೇ ನಮ್ಮ ತಂಡ ನಡೆಸಿದ ಎರಡೂ ಜಿಲ್ಲೆಗಳ ನೆರೆ ಹಾನಿ ಹಾಗೂ ಪರಿಹಾರದ ವರದಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದು ಶಾಸಕ, ರಾಜ್ಯ ಸರ್ಕಾರದ ನೆರೆಪೀಡಿತ ಪ್ರದೇಶಗಳ ವಿಶೇಷ ತಂಡದ ಮುಖ್ಯಸ್ಥ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಕನ್ನಂಗಿ, ಅತ್ತಿಗದ್ದೆ, ನವಿಲೇರಿ, ಬೆಜ್ಜವಳ್ಳಿ, ತೂದೂರು ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಈಗಾಗಲೇ ಸರ್ಕಾರದ ವತಿಯಿಂದ ಅತಿವೃಷ್ಟಿಯಿಂದ ಮೃತಪಟ್ಟವರಿಗೆ ರೂ.5. ಲಕ್ಷ ಪರಿಹಾರ ನೀಡಲಾಗಿದೆ. ಪ್ರತೀ ತಾಲೂಕುಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 720 ಮನೆಗಳು ಹಾನಿಯಾಗಿದ್ದು, 5 ಮಂದಿ ಮೃತ ಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ. ಮಲೆನಾಡು ಭಾಗದಲ್ಲಿ ಅಡಕೆ ಹಾಗೂ ಭತ್ತದ ಗದ್ದೆಗಳು ನೆರೆಗೆ ಸಿಲುಕಿ ಅಪಾರ ಹಾನಿಯಾಗಿದೆ. ತಾತ್ಕಾಲಿಕ ಪರಿಹಾರಕ್ಕೆ ಈಗಾಗಲೇ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಕೇಂದ್ರ ಸರ್ಕಾರಕ್ಕೆ ಈ ಕುರಿತು ಒತ್ತಾಯಿಸಿದ್ದಾರೆ ಎಂದರು.

ಮಲೆನಾಡು ಭಾಗದಲ್ಲಿ ನೆರೆ ಹಾವಳಿಯಿಂದ ಅಪಾರ ಪ್ರಮಾಣದ ಅಡಕೆ ಬೆಳೆ, ಗದ್ದೆಗಳು ನಾಶಗೊಂಡಿದ್ದು, ಹಲವು ಕೃಷಿ ಜಾಗಗಳು ಸತ್ವ ಕಳೆದುಕೊಂಡಿದ್ದು, ಈ ಭಾಗದ ರೈತರಿಗೆ ಖಾಯಂ ಪರಿಹಾರ ನೀಡಲು ಸದ್ಯದಲ್ಲೇ ರಾಜ್ಯ ಸರ್ಕಾರದಿಂದ ಸಭೆ ನಡೆಸಿ ಹೆಚ್ಚಿನ ಹಣ ಬಿಡುಗಡೆಗೆ ತೀರ್ಮಾನಿಸಲಾಗುವುದು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ನೆರೆಪೀಡಿತ ಉತ್ತರ ಕರ್ನಾಟಕದ ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯದಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ಮಾಡಲಿದ್ದಾರೆ ಎಂದರು.

ತೀರ್ಥಹಳ್ಳಿ ಕ್ಷೇತ್ರಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಪರಿಹಾರ ನೀಡುವಂತೆ ಈ ಭಾಗದ ರೈತರ ಹಾಗೂ ಸಾರ್ವಜನಿಕರ ಒತ್ತಾಯಕ್ಕೆ ಸರ್ಕಾರ ಸ್ಪಂದಿಸಲಿದೆ. ಕಳೆದ 5 ದಿನಗಳಿಂದ ನೆರೆಪೀಡಿತ ಪ್ರದೇಶಗಳಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು, ಚುನಾಯಿತ ಪ್ರತಿನಿಧಿಗಳು ಶ್ರಮ ವಹಿಸಿ ಕಾರ್ಯ ನಿರ್ವಹಿಸಿ ಹಲವೆಡೆ ಜೀವ ರಕ್ಷಣೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ತಾಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳಿಗೆ ತಕ್ಷಣ ತಾತ್ಕಾಲಿಕವಾಗಿ ಪರಿಹಾರ ನೀಡಲು ಜಿಲ್ಲಾಡಳಿತ ತಾಲೂಕು ಆಡಳಿತಕ್ಕೆ 1 ಕೋಟಿ ಹಣ ಬಿಡುಗಡೆ ಮಾಡಿದೆ. ಈಗಾಗಲೇ ತಾಲೂಕಿನಾದ್ಯಂತ ನೆರೆ ಹಾವಳಿಗೆ 75ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ. 24 ಮನೆಗಳು ಕುಸಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಳೆದ 2 ದಿನಗಳ ಹಿಂದೆ ಜಿಲ್ಲಾಧಿಕಾರಿಗಳ ತಂಡ ತಾಲೂಕಿನ ಆರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದೆ ಎಂದರು. ತಾಲೂಕಿನ ಹಲವೆಡೆ ಬಿಎಸ್ಸೆನ್ನೆಲ್ ಸೇವೆ ಸಂಪೂರ್ಣ ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಾಲೂಕು ಆಡಳಿತಕ್ಕೆ ಬಿಎಸ್ಸೆನ್ನೆಲ್ಗೆ ಡೀಸೆಲ್ ವಿತರಣೆಗಾಗಿ ಹಣ ನೀಡಲಾಗಿದೆ ಎಂದರು.

ತಾಲೂಕಿನಲ್ಲಿ ನೆರೆ ಹಾನಿಯಿಂದ ಆತಂಕಗೊಂಡಿರುವ ರೈತರು ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವ ಕೆಲಸವಾಗಬಾರದು. ಈ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯ ಗ್ರಾಪಂ ಕಚೇರಿಯಲ್ಲಿ ಅರ್ಜಿ ನೀಡಬಹುದು. ಅಡಕೆ ಕೊಳೆರೋಗಕ್ಕೆ ತುತ್ತಾಗಿ ತಾಲೂಕಿನ ಹಲವು ಅಡಕೆ ತೋಟಗಳಲ್ಲಿ ಅಪಾರ ಹಾನಿಯಾಗಿದೆ. ಶೀಘ್ರವೇ ಇಲಾಖೆಯ ಅಧಿಕಾರಿಗಳ ತಂಡದ ಸರ್ವೆ ನಡೆಸಲು ಸೂಚಿಸಿದ್ದೇವೆ. ಹಲವೆಡೆ ಕಾಲುಸಂಕಗಳು ತೇಲಿ ಹೋಗಿವೆ. ತಾಲೂಕಿನ ಕನ್ನಂಗಿ ಹಾಗೂ ತೀರ್ಥಹಳ್ಳಿಯಲ್ಲಿ ನಿರಾಶ್ರಿತರ ಕಾಳಜಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಮಾಜಿ ಸಚಿವರಾದ ಸಿ.ಟಿ. ರವಿ, ಸೋಮಣ್ಣ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯ ರುದ್ರೇಗೌಡ, ಜಿಲ್ಲಾ ಬಿಜೆಪಿ ಮುಖಂಡರಾದ ದತ್ತಾತ್ರಿ, ಅರುಣ್‌ ಡಿ.ಎಸ್‌. ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.