ವಾರ್ಷಿಕ ಕ್ರಿಯಾಯೋಜನೆಗೆ ಅನುಮೋದನೆ
ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ನಿಗದಿ • ಜಿಪಂ ಲತಾ ರವಿಕುಮಾರ್ ಹೇಳಿಕೆ
Team Udayavani, Aug 22, 2019, 5:22 PM IST
ತುಮಕೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಲತಾ ರವಿಕುಮಾರ್ ಮಾತನಾಡಿದರು.
ತುಮಕೂರು: ಜಿಪಂ ಸಾಮಾನ್ಯ ಸಭೆಯಲ್ಲಿ 2019-20ನೇ ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ವಾರ್ಷಿಕ ಕ್ರಿಯಾಯೋಜನೆಗೆ ಸದಸ್ಯರೆಲ್ಲ ಸರ್ವಾ ನುಮತದಿಂದ ಅನುಮೋದನೆ ನೀಡಿದರು.
ಬುಧವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಷಕ್ಷೆ ಎಂ. ಲತಾ ರವಿಕುಮಾರ್ ಮಾತನಾಡಿ, ಲಿಂಕ್ ಡಾಕ್ಯುಮೆಂಟ್ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ನಿಗದಿಪಡಿಸಲಾಗಿದೆ. ಈ ಪೈಕಿ ಜಿಪಂ ಕಾರ್ಯಕ್ರಮಗಳಿಗೆ 51,972.94 ಲಕ್ಷ ರೂ., ತಾಲೂಕು ಪಂಚಾಯಿತಿ ಕಾರ್ಯಕ್ರಮ ಗಳಿಗೆ 1,04,279.62 ಲಕ್ಷ ರೂ., ಗ್ರಾಮ ಪಂಚಾಯಿತಿ ಕಾರ್ಯಕ್ರಮಗಳಿಗೆ 110 ಲಕ್ಷ ರೂ. ಅನುದಾನ ನಿಗದಿ ಪಡಿಸಲಾಗಿದೆ. ಜಿಎಸ್ಟಿಯಲ್ಲಿರುವ ತೊಡಕುಗಳ ಬಗ್ಗೆ ಸದಸ್ಯರು ಗಮನಕ್ಕೆ ತಂದರು. ಇದಕ್ಕೆ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ವಿವಿಧ ಸರಕುಗಳಿಗೆ ಜಿಎಸ್ಟಿ ನಿಗದಿ ಪಡಿಸಿ ಆದೇಶ ಹೊರಡಿಸುವುದಾಗಿ ತಿಳಿಸಿದರು.
ಮಕ್ಕಳಿಂದ ಶೌಚಗೃಹ ಸ್ವಚ್ಛತೆ!:ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ನಡಾವಳಿ ಅನು ಮೋದನೆ ಮಾಡುವ ವಿಷಯವಾಗಿ ನಡೆದ ಚರ್ಚೆಯಲ್ಲಿ ವಿವಿಧ ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛತೆ ಮಾಡಿಸುತ್ತಿರುವುದು ಕಂಡು ಬಂದಿದೆ ಎಂದು ಸದಸ್ಯರು ತಿಳಿಸಿದರು. ಈ ಕುರಿತು ಮಾತನಾಡಿದ ಉಪ ಕಾರ್ಯದರ್ಶಿ ರಮೇಶ್, ಗ್ರಾಪಂ ವ್ಯಾಪ್ತಿಯ ಪ್ರತಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸ್ಚಚ್ಛತೆಗೆ ಕ್ರಮ ವಹಿಸಲು ಸಿಇಒ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.
ಆ್ಯಂಬುಲೆನ್ಸ್ ಸೌಲಭ್ಯವಿಲ್ಲ: ಆರೋಗ್ಯ ಇಲಾಖೆ ಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ 3 ತಿಂಗಳಿಂದ ವೇತನ ಪಾವತಿಯಾಗಿರುವುದಿಲ್ಲ. ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆ್ಯಂಬುಲೆನ್ಸ್ ಸೌಲಭ್ಯವಿಲ್ಲ. ಆಶಾ ಕಾರ್ಯಕರ್ತೆಯರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿರುವ ಹೆರಿಗೆ ಸೌಲಭ್ಯ ಬಡವರಿಗೆ ತಲುಪುತ್ತಿಲ್ಲ. ಕಳೆದ 3 ಆರ್ಥಿಕ ವರ್ಷಗಳಲ್ಲಿ ಇಲಾಖೆಗೆ ಮಂಜೂರಾಗಿರುವ ಹಣದ ಮಾಹಿತಿ ನೀಡಲು ಸದಸ್ಯರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಕುಂದುಕೊರತೆ ಬಗೆ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆಯಲ್ಲಿ ಉಳಿದಿರುವ 24ಲಕ್ಷ ರೂ. ಪ್ರತಿ ತಾಲೂಕಿಗೆ 2 ಲಕ್ಷ ರೂ. ನೀಡುವ ಬಗ್ಗೆ ಚರ್ಚೆಯಾಗಿತ್ತು. ಆ ಹಣ ಇನ್ನೂ ತಲುಪಿಲ್ಲ. ಸೋಲಾರ್ ಪಾರ್ಕ್ ಮಂಜೂರಾಗಿರುವ ಜಾಗದಲ್ಲಿ 60 ಕೃಷಿ ಹೊಂಡಕ್ಕೆ ಅನುಮತಿ ನೀಡಲಾಗಿದೆ ಇದನ್ನು ಪರಿಶೀಲಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ಜಿಲ್ಲೆಯಲ್ಲಿ ಶೇ.45 ಮಳೆಯಾಗಿದೆ. ಕಡಿಮೆ ಮಳೆಯಾಗಿರುವ ಕಡೆಗಳಲ್ಲಿ ಪರ್ಯಾಯವಾಗಿ ರಾಗಿ, ಸಿರಿಧಾನ್ಯ ಹಾಗೂ ಹುರುಳಿ ಬೆಳೆಗಳ ಬಿತ್ತನೆಗೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆ ಕುರಿತು ಜನರಲ್ಲಿ ಅರಿವಿನ ಕೊರತೆ ಇದೆ. ಈ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳಿಗೆ ಸೂಚಿಸಲಾಯಿತು. ಉಪಾಧ್ಯಕ್ಷೆ ಶಾರದಾ ನರಸಿಂಹ ಮೂರ್ತಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಕಲ್ಯಾಣ್, ತಾಪಂ ಅಧ್ಯಕ್ಷರು, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ