ಕಾಮಗಾರಿ ಹೆಸರಲ್ಲಿ ಕೋಟಿ ಲೂಟಿ

ಹೇಮೆ ನೀರು ಹರಿಯುತ್ತಿರುವಾಗ ಕೆರೆ ಹೂಳೆತ್ತುವ ಕಾರ್ಯಕ್ಕೆ ಸೊಗಡು ಶಿವಣ್ಣ ಕಿಡಿ

Team Udayavani, Aug 15, 2019, 4:26 PM IST

15-Agust-45

ತುಮಕೂರಿನ ಸಮೀಪ ಇರುವ ಬುಗಡನಹಳ್ಳಿ ಕೆರೆಯಲ್ಲಿ ಹೂಳು ತೆಗೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಬುಧವಾರ ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ ಭೇಟಿ ನೀಡಿದ್ದರು.

ತುಮಕೂರು: ನಗರಕ್ಕೆ ಕುಡಿಯುವ ನೀರೊ ದಗಿಸುವ ಬುಗಡನಹಳ್ಳಿ ಕೆರೆಯ ಹೂಳೆತ್ತುವ ಕಾಮಗಾರಿ ಒಣಗಿದ್ದಾಗ ಮಾಡದೇ ನೀರು ಬರುತ್ತಿ ರುವಾಗ ನಡೆಸುತ್ತಿರುವುದು ಕೋಟ್ಯಾಂತರ ರೂ. ಲೂಟಿ ಮಾಡಲು ಅವಕಾಶ ನೀಡಿದಂತಾಗಿದೆ ಎಂದು ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ ಕಿಡಿಕಾರಿದರು. ನಗರದ ಸಮೀಪ ಇರುವ ಬುಗಡನಹಳ್ಳಿ ಕೆರೆಯಲ್ಲಿ ಹೂಳು ತೆಗೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದರು.

60. ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಭಿವೃದ್ಧಿ ಹೆಸರಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಟೆಂಡರ್‌ದಾರರ ವಿರುದ್ಧ ಜಿಲ್ಲೆಯ ನಾಗರಿ ಕರು ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೆಲಸ ಪೂರ್ಣಗೊಳಿಸಿಲ್ಲ: ಅಮಾನಿಕೆರೆ ಮತ್ತು ಬುಗಡನಹಳ್ಳಿ ಕೆರೆ ಅಭಿವೃದ್ಧಿಪಡಿಸಲು ಸುಮಾರು 100 ಕೋಟಿ ರೂ. ಟೆಂಡರ್‌ ಕಾಮಗಾರಿ ನಡೆ ಯುತ್ತಿದೆ. ಬುಗಡನಹಳ್ಳಿ ಕೆರೆ ಹೂಳೆತ್ತಲು ಮಂಗಳೂರಿನ ಮಾಜಿ ಶಾಸಕರಿಗೆ ಟೆಂಡರ್‌ ಆಗಿದೆ. ಆದರೆ ಬೆಂಗಳೂರಿನ ವ್ಯಕ್ತಿ ನಿರ್ವಹಿಸುತ್ತಿದ್ದಾರೆ. ಇನ್ನೂ ಕೆಲಸ ಪೂರ್ಣಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣಿಗಳು ಜಾತಿ ಹೆಸರಲ್ಲಿ ಅಭಿವೃದ್ಧಿ ಯಾದರೆ, ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಪಕ್ಷ, ಜಾತಿ ಮರೆತು ಕೆಲಸ ಮಾಡಿದಾಗ ಅಭಿವೃದ್ಧಿ ನಡೆಯುತ್ತವೆ. ಇದಕ್ಕೆ ನಾಗರಿಕರು ಒಗ್ಗಟ್ಟಾಗುವ ಅವಶ್ಯಕತೆ ಇದೆ. ಕಳೆದ ಎರಡು ತಿಂಗಳ ಹಿಂದೆಯೇ ಬುಗಡನಹಳ್ಳಿ ಕೆರೆಯಲ್ಲಿ ನೀರು ಖಾಲಿಯಾಗಿತ್ತು ಆಗ ಸಮಾರೋ ಪಾದಿಯಲ್ಲಿ ಅಭಿವೃದ್ಧಿ ಮಾಡಬೇಕಿತ್ತು. ಅದನ್ನು ಮಾಡದೆ ನೀರು ಬಿಟ್ಟಾಗ ಕೆಲಸ ಪ್ರಾರಂಭಿಸಿದ್ದಾರೆ. ಇದೆಲ್ಲಾ ಅವೈಜ್ಞಾನಿಕ ಕಾಮಗಾರಿ. ತಿಳಿವಳಿಕೆ ಇಲ್ಲದ ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಮರಳಾಗುತ್ತಿದ್ದಾರೆ ಎಂದು ಆರೋಪಿಸಿದರು.

ದುಡ್ಡು ತಿನ್ನಲು ಕಾಮಗಾರಿ: ಬುಗಡನಹಳ್ಳಿ ಕೆರೆಯಲ್ಲಿ 66 ಕೋಟಿ ರೂ. ಕಾಮಗಾರಿ ನಡೆ ಯುತ್ತಿದೆ. 3.40 ಲಕ್ಷ ಕ್ಯುಬಿಕ್‌ ಮೀಟರ್‌ ಹೂಳು ತೆಗೆಯಬೇಕಿದೆ. ಕೇವಲ 70 ಸಾವಿರ ಮೀಟರ್‌ ಅಂದರೆ ಶೇ. 20 ಹೂಳು ತೆಗೆಯಲಾಗಿದೆ. ಇನ್ನೂ 2 ಲಕ್ಷ ಕ್ಯುಬಿಕ್‌ ಮೀಟರ್‌ ಹೂಳು ತೆಗೆಯುವುದು ಬಾಕಿ ಇದೆ. ದುಡ್ಡು ತಿನ್ನಲು ಕಾಮಗಾರಿ ಆರಂಭಿಸಿದ್ದಾರೆ ಎಂದು ದೂರಿದರು.

ಬಿಜೆಪಿ ಮುಖಂಡರಾದ ಎಂ.ಬಿ. ನಂದೀಶ್‌, ಕೆ.ಪಿ. ಮಹೇಶ್‌, ಕೆ.ಆರ್‌. ಸದಾಶಿವಯ್ಯ, ರಂಗಾನಾಯ್ಕ, ಆಟೋ ನವೀನ್‌, ಬನಶಂಕರಿ ಬಾಬು ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.