ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಿ

ಯುವವಿಜ್ಞಾನಿ ಸ್ಪರ್ಧೆ ಪ್ರಶಸ್ತಿ ಪ್ರದಾನ • ಶಿಕ್ಷಕರಿಗೆ ಸಲಹೆ ನೀಡಿದ ಕಾಮಾಕ್ಷಿ

Team Udayavani, Aug 12, 2019, 4:08 PM IST

12-Agust-43

ತುಮಕೂರಿನ ಆರ್ಯನ್‌ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಯುವ ವಿಜ್ಞಾನಿ ಸ್ಪರ್ಧೆಯ ವಿಜೇತರು ಗಣ್ಯರೊಂದಿಗೆ ಇರುವುದು.

ತುಮಕೂರು: ಪಾಠ ಪ್ರವಚನದ ಜೊತೆಗೆ ಮಕ್ಕಳಲ್ಲಿ ಸಂವಹನಾ ಕೌಶಲ್ಯ, ತಾರ್ಕಿಕ ಚಿಂತನೆ ಹಾಗೂ ಸಂಶೋಧನಾತ್ಮಕ ಪ್ರವೃತ್ತಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್‌.ಕಾಮಾಕ್ಷಿ ಅಭಿಪ್ರಾಯಪಟ್ಟರು.

ನಗರದ ಆರ್ಯನ್‌ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು ಅವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಯುವವಿಜ್ಞಾನಿ ಸ್ಪರ್ಧೆ ಕಾರ್ಯಕ್ರಮದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಾಗಿ ಭಾಗವಹಿಸಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಮುಂದುವರಿದಂತೆ ಮನುಷ್ಯನ ಅಗತ್ಯತೆಗಳು ಹೆಚ್ಚಿವೆ. ಮನುಷ್ಯನ ಅಗತ್ಯತೆಗಳಿಂದ ಉಂಟಾಗುವ ಸಮಸ್ಯೆ ಪರಿಹರಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ. ಇದು ಶಿಕ್ಷಕರಿಂದ ಮಾತ್ರ ಸಾಧ್ಯವಿದ್ದು ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.

ಶಿಕ್ಷಣ ನಮ್ಮ ಜವಾಬ್ದಾರಿ: ಜಗತ್ತಿನ ಮೂಲೆ ಮೂಲೆಗಳಲ್ಲಿ ನಡೆಯಲಿರುವ ಘಟನೆಗಳನ್ನು ನಾವು ಮನೆಯಲ್ಲಿಯೇ ಕುಳಿತು ಟೀವಿ, ಮೊಬೈಲ್ಗಳಲ್ಲಿ ನೋಡುವಂತಹ, ತಿಳಿದುಕೊಳ್ಳುವಂತಹ ತಂತ್ರಜ್ಞಾನ ಇದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಲೋಚಿಸುವಂತೆ ಮಾಡುವ ಶಿಕ್ಷಣ ನೀಡುವುದು ನಮ್ಮ ಜವಾಬ್ದಾರಿ ಎಂದು ನುಡಿದರು.

ಸಾಧಿಸುವ ಛಲವಿರಲಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾಕುಮಾರಿ ಮಾತನಾಡಿ, ಮಕ್ಕಳ ಸಾಧನೆಗಳನ್ನು ತಿಳಿಸುತ್ತಾ ಮಕ್ಕಳು ವೈಚಾರಿಕತೆಯನ್ನು ಬೆಳೆಸಿಕೊಂಡು ಸಾಧಿಸುವ ಛಲವನ್ನು ಹೊಂದಬೇಕು ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಇಲಾಖೆ ಸಹಕಾರ ನೀಡಲಿ: ಅಧ್ಯಕ್ಷತೆ ವಹಿಸಿದ್ದ ಕರಾವಿಪ ಜಿಲ್ಲಾ ಅಧ್ಯಕ್ಷ ಕ್ಯಾಲೆಂಡರ್‌ ಶಿವಕುಮಾರ್‌ ಮಾತನಾಡಿ, ಶಾಲಾ ಹಂತದಿಂದಲೇ ವಿದ್ಯಾರ್ಥಿಗಳು ಚಿಂತನಾಶೀಲತೆ ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಕರಾವಿಪ ಹಮ್ಮಿಕೊಳ್ಳುತ್ತದೆ. ಶಿಕ್ಷಣ ಇಲಾಖೆ ಇದೇ ರೀತಿ ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕಚೇರಿ ವಿಜ್ಞಾನ ವಿಷಯ ಪರಿವೀಕ್ಷಕಿ ಪ್ರತಿಭಾ, ಆರ್ಯನ್‌ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ್, ಕರಾವಿಪ ಜಿಲ್ಲಾ ಖಜಾಂಚಿ ಸಿದ್ದಪ್ಪ, ಜಿಲ್ಲಾ ಕಾರ್ಯದರ್ಶಿ ವಸಂತ ಕುಮಾರ್‌, ಶಿಕ್ಷಕರಾದ ನಾಗೇಶ್‌, ಪರಮೇಶ್ವರಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.