ಅಕಾಲಿಕ ಮಳೆ; ಅಡಿಕೆ ಬೆಳೆಗಾರರು ಅತಂತ್ರ!

ರೈತರ ಪಾಲಿಗೆ ಕತ್ತಲು ತಂದ ದೀಪಾವಳಿಕೊನೆ ಕೊಯ್ಲಿಗೂ ಬೆಳೆಗಾರರು ಹಿಂದೇಟು ಹಾಕುವ ಸ್ಥಿತಿ

Team Udayavani, Oct 30, 2019, 12:32 PM IST

30-October-7

„ರಾಂಚಂದ್ರ ಕೊಪ್ಪಲು
ತೀರ್ಥಹಳ್ಳಿ:
ತಾಲೂಕಿನಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಅಡಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಳಕಿನ ಹಬ್ಬ ದೀಪಾವಳಿ ಮಲೆನಾಡಿನ ರೈತರ ಪಾಲಿಗೆ ಕತ್ತಲು ತರಿಸಿದೆ.

ಪ್ರತಿ ವರ್ಷ ಅಡಕೆ ಬೆಳೆಗಾರರಿಗೆ ಅಕ್ಟೋಬರ್‌ ತಿಂಗಳು ಬಂದರೆ ಸಾಕು. ಅಡಿಕೆ ಧಾರಣೆ ಕುಸಿತ, ಅಡಕೆ ನಿಷೇಧದ ವಿಚಾರ ಬೆಳೆಗಾರರನ್ನು ಆತಂಕ ಮೂಡಿಸುತ್ತಿತ್ತು. ಈ ಬಾರಿ ಕಳೆದ 1 ವಾರದಿಂದ ಸುರಿಯುತ್ತಿರುವ ಮಳೆಯಿಂದ ಅಡಕೆ ತೋಟದಲ್ಲಿ ಕೊಳೆ ರೋಗ ಮತ್ತೆ ಉಲ್ಬಣಿಸಿದೆ.

ಕಳೆದ 2 ತಿಂಗಳ ಹಿಂದೆ ಸುರಿದ ಗಾಳಿ-ಮಳೆಗೆ ಮಲೆನಾಡಿನ ಅಡಕೆ ತೋಟಗಳಲ್ಲಿ ಮರಗಳು ನೆಲಕ್ಕುರುಳಿ ಅಪಾರ ಹಾನಿಯಾಗಿತ್ತು. ಆ ಸಂದರ್ಭದಲ್ಲಿಯೂ ಕೊಳೆ ರೋಗ ಕಾಣಿಸಿಕೊಂಡು ಬೆಳೆಗಾರರು ಮಳೆಯ ನಡುವೆಯೂ ಔಷ ಧ ಸಿಂಪಡಿಸಿ ಫಸಲನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು.

ಆದರೆ ಈಗ ದೀಪಾವಳಿಯ ಆಸುಪಾಸಿನಲ್ಲಿ ತಾಲೂಕಿನಲ್ಲಿ ಅಡಕೆ ಕೊಯ್ಲು ಆರಂಭದ ಸಮಯವಾಗಿದೆ. ಹಲವು ದಿನಗಳಿಂದ ಮಳೆ ಹೆಚ್ಚಾಗಿ ಬಿಸಿಲು ಬಾರದಿದ್ದರಿಂದ ಅಡಕೆ ಕೊಯ್ಲು ಮಾಡುವ ಬಗ್ಗೆ ರೈತರು ಗೊಂದಲದಲ್ಲಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಗೆ ಅಡಕೆ ತೋಟದಲ್ಲಿ ಕೊಳೆರೋಗ ಕಾಣಿಸಿಕೊಂಡು ಅಡಕೆಗಳು ನೆಲಕ್ಕೆ ಬೀಳುತ್ತಿವೆ. ತಾಲೂಕಿನ ಬೆಳೆಗಾರರು ಶೇ. 50ರಷ್ಟು ಅಡಕೆ ಫಸಲನ್ನು ಪ್ರಕೃತಿ ವಿಕೋಪ, ಕೊಳೆರೋಗ ಹಾಗು ಮಂಗನ ಕಾಟದಿಂದ ಕಳೆದುಕೊಂಡಿದ್ದಾರೆ. ಜೊತೆಗೆ ತೋಟದಲ್ಲಿನ ಉಪ ಬೆಳೆಗಳಾದ ಕಾಳುಮೆಣಸು, ವೀಳ್ಯದೆಲೆ, ಕಾಫಿ, ಏಲಕ್ಕಿ ಹಾಗೂ ಕೋಕೋ ಫಸಲಿಗೂ ಧಕ್ಕೆಯಾಗಿದೆ.

ಕಾಡುಪ್ರಾಣಿಗಳ ಹಾವಳಿ: ಅಡಕೆ ತೋಟಗಳಲ್ಲಿ ಮಂಗಗಳ ಕಾಟ ವಿಪರೀತವಾಗಿದೆ. ಜೊತೆಗೆ ಕಾಡುಕೋಣ, ಹಂದಿಗಳ ಲೂಟಿಯಿಂದ ಬೆಳೆಗಾರರು ಬೇಸತ್ತಿದ್ದಾರೆ. ಪ್ರಾಣಿಗಳನ್ನು ಕೊಂದರೆ ಅರಣ್ಯ ಇಲಾಖೆಯ ಕಾನೂನಿನ ದೃಷ್ಟಿಯಿಂದ ರೈತ ಅಪರಾಧಿಯಾಗುತ್ತಾನೆ. ಆದರೆ ಬೆಳೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಹ ಇಕ್ಕಟ್ಟಿನ ಸ್ಥಿತಿಯಲ್ಲಿ ರೈತರು ದಿನ ಕಳೆಯುವಂತಾಗಿದೆ.

ಒಟ್ಟಾರೆ ತಾಲೂಕಿನ ಅಡಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ಗಂಭೀರ ಚಿಂತನೆ ನಡೆಸಬೇಕಾಗಿದೆ. ಬೆಳೆಗಾರರಿಗೆ ಕೊಳೆ ರೋಗ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್‌ ಪರಿಹಾರದ ಬಗ್ಗೆ ಮಲೆನಾಡು ಭಾಗದ ಎಲ್ಲಾ ಶಾಸಕರು ಹಾಗೂ ಸಂಸದರು ಗಮನಹರಿಸಬೇಕಿದೆ. ಭವಿಷ್ಯದಲ್ಲಿ ಅಡಕೆ ಬೆಳೆಗಾರರ ಬದುಕು ನಿರ್ನಾಮ ಆಗುವ ಮುನ್ನ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಎಚ್ಛೆತ್ತುಕೊಳ್ಳದಿದ್ದರೆ ಮಲೆನಾಡು ಭಾಗದ ಅಡಕೆ ಬೆಳೆಗಾರರು ಆತ್ಮಹತ್ಯೆಯ ದಾರಿ ಹಿಡಿದರೂ ಆಶ್ಚರ್ಯ ಪಡಬೇಕಾಗಿಲ್ಲ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.