ಒಮಿಕ್ರಾನ್‌: ಮೈಮರೆತು ಓಡಾಡುತ್ತಿರುವ ಜನ


Team Udayavani, Dec 24, 2021, 1:31 PM IST

omicron

Representative Image used

ತುಮಕೂರು: ಕಲ್ಪತರು ನಾಡಿನಲ್ಲಿ ಹಂತ-ಹಂತವಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಮಿಕ್ರಾನ್‌ ಸೋಂಕಿತರು ಕಂಡು ಬಂದಿದ್ದು, ಸದ್ಯ ಇನ್ನು ಜಿಲ್ಲೆಗೆ ಈ ಸೋಂಕು ವ್ಯಾಪಿಸಿಲ್ಲ. ಆದರೆ, ಜಿಲ್ಲೆಯ ಜನ ಕೊರೊನಾ ಮರೆತು ಎಂದಿನಂತೆ ಅಡ್ಡಾಡು ತ್ತಿರುವುದು ಮತ್ತೆ ಎಲ್ಲಿ ಕೊರೊನಾ ಒಕ್ಕರಿಸುತ್ತೋ ಎನ್ನುವ ಭೀತಿ ಉಂಟಾಗಿದೆ.

ಕೊರೊನಾ ವೈರಸ್‌ ನಿಯಂತ್ರಣ ಆಗಬೇಕಾದರೆ 18 ವರ್ಷ ಮೇಲ್ಪಟ್ಟವರಿಂದ ಎಲ್ಲರಿಗೂ ಲಸಿಕೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಜನ ಕೊರೊನಾ ನಿಯಂತ್ರಣ ಮಾಡಲು ಶೇ.95ರಷ್ಟು ಮೊದಲ ಡೋಸ್‌ ಲಸಿಕೆ ಪಡೆದು ಕೊಂಡಿದ್ದಾರೆ. ಆದರೆ, ಎರಡನೇ ಡೋಸ್‌ ಇನ್ನು ಶೇ.71ರಷ್ಟು ಜನ ಪಡೆದಿದ್ದು, ಕೊರೊನಾ, ಒಮಿಕ್ರಾನ್‌ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವುದು ಅತೀ ಮುಖ್ಯವಾಗಿದೆ.

ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಮನವಿ: ಕೆಲವು ಜನರು ಇನ್ನು ಮೂಢನಂಬಿಕೆಗೆ ಕಟ್ಟು ಬಿದ್ದಿದ್ದು, ಎಷ್ಟೇ ಪ್ರಚಾರ ಮಾಡಿದರೂ ಜನ ಲಸಿಕೆ ಪಡೆಯಲು ಬರಲಿಲ್ಲ, ಲಸಿಕಾ ಅಭಿಯಾನದ ಮೂಲಕ ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಜನರಿಗೆ ಲಸಿಕೆ ನೀಡುತ್ತಿದೆ. ಪ್ರಾರಂಭದಿಂದಲೂ ಜನರಿಗೆ ಕೊರೊನಾ ಲಸಿಕೆಯನ್ನು ನೀಡುತ್ತಲೇ ಬಂದಿದ್ದು, ಈಗ ಸಾಕಷ್ಟು ಲಸಿಕೆ ಇರುವುದರಿಂದ ಜನರು ಲಸಿಕೆ ಹಾಕಿಸಿಕೊಳ್ಳಲು ಎಲ್ಲಿಯೂ ಕಾಯುವ ಅಗತ್ಯವಿಲ್ಲ.

ಲಸಿಕಾ ಕೇಂದ್ರಕ್ಕೆ ಹೋದ ತಕ್ಷಣ ಲಸಿಕೆ ಹಾಕುತ್ತಿದ್ದು, ಮೊದಲನೇ ಡೋಸ್‌ ಪಡೆಯದಿದ್ದರೆ ಅವರೂ ಮತ್ತು ಎರಡನೇ ಡೋಸ್‌ ಲಸಿಕೆ ಪಡೆಯಬೇಕಾದವರು ಕೊರೊನಾ ಲಸಿಕೆ ಪಡೆದು ರೋಗ ಹರಡದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ಮನವಿ ಮಾಡಿದ್ದಾರೆ.

33.24 ಲಕ್ಷ ಜನರಿಗೆ ಲಸಿಕೆ: ಜಿಲ್ಲೆಯಲ್ಲಿ ಡಿ. 21ಕ್ಕೆ ಮೊದಲ ಮತ್ತು ಎರಡನೇ ಡೋಸ್‌ ಕೊರೊನಾ ಲಸಿಕೆ ಸೇರಿ 33,24, 420 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 10 ತಾಲೂಕುಗಳಲ್ಲೂ ಜನರಿಗೆ ತಕ್ಷಣ ಲಸಿಕೆ ಸಿಗುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಕಡೆ ಮೊದಲ ಡೋಸ್‌ ಲಸಿಕೆ ಶೇ. 95ಕ್ಕೂ ಹೆಚ್ಚು ಪ್ರಗತಿ ಆಗಿದೆ.

ಯಾವುದೇ ಅಡ್ಡ ಪರಿಣಾಮ ವಿಲ್ಲದ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ಕೊರೊನಾ ಸೋಂಕು ಬಂದರೂ ಗುಣಮುಖರಾಗುತ್ತಿರುವುದನ್ನು ಗಮನಿಸಿದ ಜನರು, ಈಗ ಕೋವಿಡ್‌ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯಲು ಮುಂದಾಗ ಬೇಕಾಗಿದೆ. ಮೊದಲ ಡೋಸ್‌ 19.04 ಲಕ್ಷ ಜನರು ಪಡೆದಿದ್ದು, ಶೇ. 95ರಷ್ಟು ಎರಡನೇ ಡೋಸ್‌ 14.20 ಲಕ್ಷ ಜನರು ಪಡೆದು ಶೇ. 71ರಷ್ಟು ಪ್ರಗತಿ ಸಾಧಿಸಲಾಗಿದೆ. ಎರಡೂ ಡೋಸ್‌ ಪಡೆಯಬೇಕಾದ್ದು ನಾಗರಿಕರ ಕರ್ತವ್ಯವಾಗಿದ್ದು, ಮೊದಲನೇ ಲಸಿಕೆ ಪಡೆದಿರುವ ಅನೇಕರು ಇನ್ನು ಎರಡನೇ ಡೋಸ್‌ ಪಡೆದಿಲ್ಲ.

ಲಸಿಕೆ ತಪ್ಪದೇ ಪಡೆಯಿರಿ: ಜಿಲ್ಲೆಯ ತುಮಕೂರು, ತುರುವೇಕೆರೆ ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್‌, ಮಧುಗಿರಿ, ಗುಬ್ಬಿ ಭಾಗಗಳಲ್ಲಿ ಲಸಿಕೆ ಪಡೆಯುವಲ್ಲಿ ಉತ್ತಮ ಸಾಧನೆ ಆಗುತ್ತಿದೆ. ಆದರೆ, ಪಾವಗಡ ತಾಲೂಕಿನಲ್ಲಿ ಜನ ಲಸಿಕೆ ಪಡೆಯಲು ಹೆದರುತ್ತಿದ್ದು, ಅಲ್ಲಿ ಅತೀ ಕಡಿಮೆ ಶೇ. 85ರಷ್ಟು ಪ್ರಗತಿ ಸಾಧಿಸಲಾಗಿದೆ.

ಶಿರಾ ತಾಲೂಕಿನಲ್ಲಿ ಉತ್ತಮ ಸ್ಪಂದನೆ ದೊರೆತ್ತಿದೆ. ಎರಡೂ ಡೋಸ್‌ ಸೇರಿ ಶೇ. 99ರಷ್ಟು ಪ್ರಗತಿ ಸಾಧಿಸಲಾಗಿದೆ. ನಮ್ಮ ನಿರೀಕ್ಷೆ ಯಷ್ಟು ಲಸಿಕೆ ಬರುತ್ತಿದೆ. ಜನರು ಲಸಿಕಾ ಕೇಂದ್ರಕ್ಕೆ ಬಂದು ತಪ್ಪದೇ ಎರಡೂ ಡೋಸ್‌ ಲಸಿಕೆ ತಪ್ಪದೇ ಪಡೆಯಿರಿ ಎಂದು ಲಸಿಕೆ ವಿತರಣೆ ನಿರ್ವಹಣಾಧಿಕಾರಿ ಡಾ.ಕೇಶವರಾಜ್‌ ಮನವಿ ಮಾಡಿದ್ದಾರೆ.

“ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈಗ ಕೊರೊನಾ ನಿಯಂತ್ರಣದಲ್ಲಿದೆ. ಆದರೆ, ಬೇರೆ ಬೇರೆ ಕಡೆ ಕೊರೊನಾ ಜೊತೆಗೆ ಒಮಿಕ್ರಾನ್‌ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಅದಕ್ಕೆ ಬೇಕಾದ ಸೂಕ್ತ ಕ್ರಮವನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ.” ವೈ.ಎಸ್‌. ಪಾಟೀಲ್‌, ಜಿಲ್ಲಾಧಿಕಾರಿ.

“ಒಮಿಕ್ರಾನ್‌ ಈಗ ಎಲ್ಲ ಕಡೆ ಹರಡುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಸೋಂಕು ಹರಡದಂತೆ ಕಾಪಾಡಲು ಪ್ರತಿ ಯೊಬ್ಬರೂ ಕೊರೊನಾ ಲಸಿಕೆ ಪಡೆಯ ಬೇಕು. ಮೊದಲನೇ ಕೊರೊನಾ ಲಸಿಕೆ ಪಡೆದವರು ತಪ್ಪದೇ ಎರಡನೇ ಲಸಿಕೆ ಪಡೆಯಬೇಕು. ಜಿಲ್ಲೆಯ ಕೊರೊನಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗು ತ್ತಿದೆ. ಜಿಲ್ಲೆಯಲ್ಲಿ ಶೇ.95ರಷ್ಟು ಜನರು ಲಸಿಕೆ ಪಡೆದಿದ್ದಾರೆ.” ಡಾ. ಕೇಶವರಾಜ್‌, ಕೊರೊನಾ ಲಸಿಕಾ ವಿತರಣಾ ಅಧಿಕಾರಿ.

– ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.