150 ಕೋಟಿ ರೂ. ಅನುದಾನ ತಂದಿದ್ದೇನೆ
ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಸತ್ಯನಾರಾಯಣ ಹೇಳಿಕೆ
Team Udayavani, Aug 21, 2019, 5:07 PM IST
ಶಿರಾ ತಾಲೂಕಿನ ಕೆ.ಕೆ.ಪಾಳ್ಯದಲ್ಲಿ 1.5 ಕೋಟಿ ರೂ. ವೆಚ್ಚದ ರಸ್ತೆ ಕಾಮ ಗಾರಿಗೆ ಶಾಸಕ ಬಿ. ಸತ್ಯನಾರಾಯಣ ಭೂಮಿ ಪೂಜೆ ನೆರವೇರಿಸಿದರು.
ಶಿರಾ: ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸೌಲಭ್ಯಕ್ಕೆ 150 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಶಾಸಕ ಬಿ.ಸತ್ಯನಾರಾಯಣ ಹೇಳಿದರು. ತಾವರೆಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆ.ಕೆ. ಪಾಳ್ಯದಲ್ಲಿ 1.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಮಾತ ನಾಡಿದರು. ಸರ್ಕಾರಿ ಶಾಲೆಗಳು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದರೂ ಆಂಗ್ಲ ಮಾಧ್ಯಮ ವ್ಯಾಮೋಹಕ್ಕೆ ಬಿದ್ದಿರುವ ಪೋಷಕರು ಲಕ್ಷಾಂತರ ರೂ. ಖರ್ಚು ಮಾಡಿ ಖಾಸಗಿ ಶಾಲೆಗೆ ಮಕ್ಕಳ ದಾಖಲಿಸುತ್ತಿದ್ದಾರೆ. ಇದರಿಂದ ಖಾಸಗಿ ಕಾನ್ವೆಂಟ್ ಮಾಲೀಕರು ಕೋಟ್ಯಾಧೀಶ ರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳ ಓದಿಸುವ ಪ್ರವೃತ್ತಿ ಬೆಳೆಸಿ ಕೊಂಡರೆ ಹಣ ವ್ಯರ್ಥವಾಗುವುದು ತಪ್ಪುತ್ತದೆ ಎಂದು ಹೇಳಿದರು.
ಕೆ.ಕೆ.ಪಾಳ್ಯಕ್ಕೆ ಇದುವರೆಗೂ ಬಸ್ ಸೌಲಭ್ಯ ಕಲ್ಪಿಸಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿರಾ ಘಟಕದಲ್ಲಿ ಬಸ್ ಕೊರತೆ ಇದ್ದು ಶೀಘ್ರವೇ ಕೆ.ಕೆ.ಪಾಳ್ಯ ಮಾರ್ಗವಾಗಿ ಬಸ್ ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗುವುದೆಂದರು.
ಎಪಿಎಂಸಿ ಅಧ್ಯಕ್ಷ ನರಸಿಂಹೇಗೌಡ, ಚಂಗಾವರ ಗ್ರಾಪಂ ಅಧ್ಯಕ್ಷೆ ಪುಟ್ಟರಂಗಮ್ಮ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ವೈ.ಕೆ. ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡ ಚಂಗಾವರ ಮಾರಣ, ಲೋಕೋಪ ಯೋಗಿ ಎಇಇ ಷಣ್ಮುಖಪ್ಪ, ಇಒ ಮೋಹನ್ ಕುಮಾರ್, ಗ್ರಾಪಂ ಉಪಾಧ್ಯಕ್ಷ ಲಿಂಗಯ್ಯ, ಗುತ್ತಿಗೆದಾರ ಪಾಂಡುರಂಗಯ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ