ಜಿಲ್ಲೆಯಲ್ಲಿ 184 ನೀರಿನ ಘಟಕ ಸ್ಥಗಿತ!


Team Udayavani, Dec 22, 2019, 3:00 AM IST

jilleyalli

ಮಳೆಗಾಲ ಕಳೆದು ಚಳಿಗಾಲ ಆರಂಭವಾಗಿದ್ದು, ಜಿಲ್ಲೆಯ ವಿವಿಧೆಡೆ ಈಗಲೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿವೆ. ಈ ನಡುವೆ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ನೀಡಬೇಕೆಂದು ಸರ್ಕಾರ ಜಿಲ್ಲಾದ್ಯಂತ ವಿವಿಧ ಅನುದಾನದಡಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಲವಡೆ ನೆರವಿಗೆ ಬಂದರೂ, ಇನ್ನು ಕೆಲವು ಕಡೆ ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿವೆ. ನಿರ್ವಹಣೆ ಹೊಣೆ ಹೊತ್ತಿದ್ದ ಏಜೆನ್ಸಿಗಳೂ ಕೈಚೆಲ್ಲಿವೆ…

ತುಮಕೂರು: ಮಳೆಗಾಲ ಕಳೆದು ಚಳಿಗಾಲ ಆರಂಭವಾಗುತ್ತಿದ್ದಂತೆ ಕಲ್ಪತರು ನಾಡಿನಲ್ಲಿ ಬೇಸಗೆ ಆರಂಭವಾಗುತ್ತಲೇ ಸಹಜವಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮಳೆ ಇಲ್ಲದೇ ಅಂತರ್ಜಲ ಕೊರತೆ ಎದುರಿಸುತ್ತಿರುವ ಜಿಲ್ಲೆಯಲ್ಲಿ ಕೊಳವೆಬಾವಿಯಿಂದ ಬರುತ್ತಿರುವ ನೀರು ಫ್ಲೋರೈಡ್‌ನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಘಟಕ ಸ್ಥಾಪಿಸಿದರೂ ವಿವಿಧ ಕಡೆ ಘಟಕಗಳು ಸ್ಥಗಿತಗೊಳ್ಳುತ್ತಿವೆ.

ಮಳೆಗಾಲ ಕಳೆದು, ಚಳಿಗಾಲ ಆರಂಭವಾಗುತ್ತಲೇ ಪಾವಗಡ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸರ್ಕಾರ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಜಿಲ್ಲಾದ್ಯಂತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಭೂಸೇನಾ ನಿಗಮ, ಕೆಎಂಎಫ್, ಸಂಸದರು, ಶಾಸಕರ ಇತರೆ ಸಹಕಾರದಿಂದ ಜಿಲ್ಲೆಯಲ್ಲಿ ಒಟ್ಟು 1528 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಅನುಮತಿ ದೊರೆತಿದ್ದು, ಈವರೆಗೆ 1495 ಘಟಕ ಸ್ಥಾಪಿಸಿದ್ದು, ಇನ್ನೂ 31 ಘಟಕ ಸ್ಥಾಪಿಸಬೇಕಾಗಿದೆ. ಈಗ ಸ್ಥಾಪಿಸಲಾಗಿರುವ ಘಟಕಗಳಲ್ಲಿ 1311 ಘಟಕಗಳಷ್ಟೇ ಕಾರ್ಯನಿರ್ವಹಿಸುತ್ತಿದ್ದು, 184 ಘಟಕಗಳು ಸ್ಥಗಿತಗೊಂಡಿವೆ.

10 ಲಕ್ಷ ರೂ.ವರೆಗೆ ಖರ್ಚು: ಪಾವಗಡ, ಮಧುಗಿರಿ, ಶಿರಾ ಭಾಗಗಳಲ್ಲಿ ಫ್ಲೋರೈಡ್‌ಯುಕ್ತ ನೀರು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ. ಆದರೆ ಘಟಕಗಳು ಸೂಕ್ತ ಕಾರ್ಯನಿರ್ವಹಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಾಪನೆಯಾಗಿ 5 ವರ್ಷ ತುಂಬುತ್ತಿದೆ. ಇದರ ಗುತ್ತಿಗೆ ಪಡೆದಿರುವ ಏಜೆನ್ಸಿಗಳು 5 ವರ್ಷ ನಿರ್ವಹಣೆ ಮಾಡಬೇಕು. ನಂತರ ಸ್ಥಳೀಯ ಗ್ರಾಮ ಪಂಚಾಯಿಗಳಿಗೆ ನಿರ್ವಹಣೆಗೆ ನೀಡಬೇಕು. ಆದರೆ ಒಂದು ಘಟಕ ಸ್ಥಾಪನೆಗೆ ಸರ್ಕಾರದಿಂದ 10 ಲಕ್ಷ ರೂ.ವರೆಗೆ ಖರ್ಚು ಮಾಡಲಾಗಿದೆ. ಆದರೂ ಈ ಘಟಕಗಳು ಸಮರ್ಪಕ ಕಾರ್ಯನಿರ್ವಹಿಸದಿರುವುದರಿಂದ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ.

ಪರಿಹಾರ ಸಿಕ್ಕಿಲ್ಲ: ಹಲವಾರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆದರೂ ಸಂಬಂಧಿಸಿದ ಏಜೆನ್ಸಿಗಳ ಮೇಲೆ ಯಾವುದೇ ರೀತಿಯ ಕ್ರಮ ಆಗಿಲ್ಲ. ಈ ಬಾರಿ ಪೂರ್ವ ಮುಂಗಾರುಮಳೆ ಜಿಲ್ಲೆಯಲ್ಲಿ ಕೈಕೊಟ್ಟಿದ್ದರೂ, ಮುಂಗಾರು ಮಳೆ ಸಾಧಾರಣವಾಗಿ ಬಂದಿದೆ. ಜೊತೆಗೆ ಹೇಮಾವತಿ ನೀರು ಜಿಲ್ಲೆಗೆ ಸಮರ್ಪಕವಾಗಿ ಹರಿಯುತ್ತಿರುವುದರಿಂದ ಕೆಲವು ತಾಲೂಕುಗಳಲ್ಲಿ ಕೆರೆ, ಕಟ್ಟೆಗಳಲ್ಲಿ ನೀರು ಸಂಗ್ರಹವಾಗಿದೆ. ಪ್ರತಿ ಜಿಪಂ ಹಾಗೂ ಕೆಡಿಪಿ ಸಭೆಯಲ್ಲಿ ಶುದ್ಧ ಕುಡಿಯುವ ನೀರಿನ ವಿಷಯವಾಗಿ ಚರ್ಚೆ ನಡೆಯುತ್ತಲೇ ಇರುತ್ತದೆ. ಆದರೆ ಪರಿಹಾರ ಸಿಕ್ಕಿಲ್ಲ. ಹೆಚ್ಚಿನ ಗ್ರಾಮಗಳಲ್ಲಿ ಫ್ಲೋರೈಡ್‌ಯುಕ್ತ ನೀರೇ ಜನರು ಕುಡಿಯಬೇಕಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಗತ್ಯ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ…

ಏಜೆನ್ಸಿಗಳ ನಿರ್ಲಕ್ಷ್ಯ: ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ, ನಿರ್ವಹಣೆ ಮಾಡಲು 11 ಏಜೆನ್ಸಿಗಳಿಗೆ ಗುತ್ತಿಗೆ ನೀಡಿದ್ದು, ಇದರಲ್ಲಿ 7 ಏಜೆನ್ಸಿಗಳು ನಿರ್ವಹಣೆ ಮಾಡುತ್ತಿವೆ. 4 ಏಜೆನ್ಸಿಗಳು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ಇದರಿಂದ ವಿವಿಧೆ‌ಡೆ ಘಟಕಗಳು ಸ್ಥಗಿತಗೊಂಡಿವೆ. ಗ್ರಾಪಂಗೂ ಹಸ್ತಾಂತರಿಸದೇ, ತಾವು ನಿರ್ವಹಿಸದೆ ನಿರ್ಲಕ್ಷ್ಯ ವಹಿಸಿವೆ. ಈ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಒಂದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ 10 ಲಕ್ಷ ರೂ.ವರೆಗೆ ಖರ್ಚಾಗುತ್ತದೆ. ಒಂದು ಘಟಕದಲ್ಲಿ 20 ಲೀ. ನೀರು ಪಡೆಯಲು 2 ರೂ. ನಾಣ್ಯ ಹಾಕಿ ನೀರು ಪಡೆಯಬೇಕು. ಕೆಲವು ಕಡೆ ನಿರ್ವಹಣೆ ಉತ್ತಮವಾಗಿದೆ. ಜನರಿಗೆ ಶುದ್ಧ ನೀರು ಸಿಗುತ್ತಿದೆ. ಕೆಲವು ಕಡೆ ನಾಣ್ಯ ಹಾಕಿದರೂ ನೀರು ಬರುತ್ತಿಲ್ಲ. ವಿದ್ಯುತ್‌ ಸಮಸ್ಯೆ, ಬೋರ್‌ವೆಲ್‌ನಲ್ಲಿ ನೀರು ಬತ್ತಿರುವುದು ಸೇರಿ ಹಲವು ಸಮಸ್ಯೆಗಳೂ ಇವೆ.

ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತವಾಗಿರುವಲ್ಲಿ ಮತ್ತೆ ಆರಂಭಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಪಾವಗಡ ತಾಲೂಕಿನಲ್ಲಿ 48 ಘಟಕ ಸ್ಥಗಿತಗೊಂಡಿವೆ. ಶುದ್ಧ ಕುಡಿಯುವ ನೀರಿನ ಘಟಕದ ಮಷಿನ್‌ ಹಾಳಾಗಿದೆ. ಅದರ ಬೆಲೆ 70 ಸಾವಿರ ರೂ. ಆಗುತ್ತದೆ. ಅದನ್ನು ಗುತ್ತಿಗೆ ಪಡೆದಿರುವ ಏಜೆನ್ಸಿ ಸರಿಪಡಿಸಬೇಕು. ಆದರೆ ಈವರೆಗೆ ಆಗಿತ್ತಿಲ್ಲ, ಗ್ರಾಪಂನವರಿಗೂ ಹಸ್ತಾಂತರಿಸಿಲ್ಲ. ಕೆಲವು ಕಡೆ ನೀರು ಶುದ್ಧೀಕರಣವಾಗದೇ ಫ್ಲೋರೈಡ್‌ ನೀರನ್ನೇ ಜನ ಕುಡಿಯುವ ಸ್ಥಿತಿ ಪಾವಗಡದಲ್ಲಿದೆ.
-ಸೊಗಡು ವೆಂಕಟೇಶ್‌, ಪಾವಗಡ ತಾಪಂ ಅಧ್ಯಕ್ಷ

ವಿವಿಧ ಕಾರಣದಿಂದ ಸುಮಾರು 184 ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿವೆ. ಪಾವಗಡ, ಮಧುಗಿರಿ ಭಾಗದಲ್ಲಿಯೇ ಹೆಚ್ಚು ಘಟಕಗಳು ಸ್ಥಗಿತಗೊಂಡಿದ್ದು, ಈ ಸಂಬಂಧ ಸರ್ಕಾರಕ್ಕೂ ಮಾಹಿತಿ ತಿಳಿಸಿದ್ದೇವೆ. ಸಂಬಂಧಿಸಿದ ಏಜೆನ್ಸಿಯವರಿಗೆ ಹಲವು ಬಾರಿ ನೋಟಿಸ್‌ ನೀಡಿದ್ದರೂ ಸ್ಪಂದಿಸಿಲ್ಲ. ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ಬೇರೆಯವರಿಗೆ ಕೊಡುವ ಬಗ್ಗೆ ಚಿಂತನೆ ನಡೆದಿದೆ. ಡಿ.27ರಂದು ಸಚಿವರು ಸಭೆ ನಡೆಸಲಿದ್ದು, ಮುಂದಿನ ದಿನಗಳಲ್ಲಿ ಶುದ್ಧ ನೀರು ನೀಡಲು ಎಲ್ಲ ಕ್ರಮ ಕೈಗೊಳ್ಳುತ್ತೇವೆ.
-ಶುಭಾ ಕಲ್ಯಾಣ್‌, ಜಿಪಂ ಸಿಇಒ

ಶುದ್ಧ ಕುಡಿಯುವ ನೀರಿನ ಘಟಕ ನಿಂತು ಹಲವು ತಿಂಗಳುಗಳೇ ಕಳೆದಿದೆ. ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಫ್ಲೋರೈಡ್‌ ನೀರು ಕುಡಿದು ತೊಂದರೆ ಅನುಭವಿಸುತ್ತಿದ್ದೇವೆ. ಅಧಿಕಾರಿಗಳು ಕ್ರಮ ಕೈಗೊಳ್ಳಲಿ.
-ಶಿವಣ್ಣ, ನಾಗರಿಕ

ಶುದ್ಧ ಕುಡಿಯುವ ನೀರಿನ ಘಟಕ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾಗಿದೆ. ಕೆಲವು ಘಟಕ ಸ್ಥಗಿತಗೊಂಡಿವೆ, ಈ ಬಗ್ಗೆ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಪಂ ನಿರ್ವಹಣೆಗೆ ನೀಡುವ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಘಟಕ ಸರಿಪಡಿಸಿ ಶುದ್ಧ ಕುಡಿಯುವ ನೀರು ನೀಡಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.
-ಎಸ್‌. ಕೆ.ಪ್ರಕಾಶ್‌, ಕಾರ್ಯಪಾಲಕ ಎಂಜಿನಿಯರ್‌

ತಾಲೂಕುವಾರು ವಿವರ
ತಾಲೂಕು ಮಂಜೂರು ಘಟಕ ಸ್ಥಾಪಿತ ಘಟಕ ಚಾಲ್ತಿಘಟಕ ಸ್ಥಗಿತ ಘಟಕ
ಚಿ.ನಾ ಹಳ್ಳಿ 113 113 86 27
ಗುಬ್ಬಿ 140 139 118 21
ಕೊರಟಗೆರೆ 151 147 140 07
ಕುಣಿಗಲ್‌ 140 99 79 20
ಮಧುಗಿರಿ 227 226 206 20
ಪಾವಗಡ 270 269 238 31
ಶಿರಾ 210 210 182 28
ತಿಪಟೂರು 111 91 80 11
ತುಮಕೂರು 124 124 112 12
ತುರುವೆಕೆರೆ 78 77 70 07

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.