ಧರೆಗುರುಳಿದ 200 ಅಡಕೆ, 50 ತೆಂಗಿನ ಮರ!


Team Udayavani, Mar 10, 2020, 3:00 AM IST

dharegurulida

ತುಮಕೂರು: ಒತ್ತುವರಿ ತೆರವು ನೆಪದಲ್ಲಿ ಫ‌ಲವತ್ತಾದ ತೋಟ ಧ್ವಂಸ ಮಾಡುವ ಮೂಲಕ ಬಡ ಕುಟುಂಬವನ್ನು ಬೀದಿಪಾಲು ಮಾಡಿದ ಗುಬ್ಬಿ ತಾಲೂಕು ಆಡಳಿತದ ಕ್ರಮ ಖಂಡಿಸಿ ವಾಲ್ಮೀಕಿ ನಾಯಕ ಸಮಾಜದ ಬಂಧುಗಳು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಗುಬ್ಬಿ ತಾಲೂಕಿನ ತಿಪ್ಪೂರಿನ ಕೋಡಿಕೆಂಪಮ್ಮ ದೇವಾಲಯದ ಅರ್ಚಕ ವೃತ್ತಿ ಮಾಡುವ ಕುಟುಂಬ ಇನಾಮಿ ಜಮೀನಿನಲ್ಲಿ ಬೆಳೆದಿದ್ದ 200 ಅಡಕೆ ಗಿಡ ಮತ್ತು 50 ತೆಂಗಿನ ಮರಗಳನ್ನು ಅಧಿಕಾರಿಗಳು ಮನುಷ್ಯತ್ವ ಮರೆತು ಮಾ.6ರಂದು ಧರೆಗುರುಳಿಸಿದ್ದು, ಇದರಿಂದ ಕುಟುಂಬ ಬೀದಿಗೆ ಬೀಳುವಂತಾಗಿದೆ. ತಾಲೂಕು ಆಡಳಿತ ನೇರ ಹೊಣೆ ಎಂದು ಪ್ರತಿಭಟನಾಕಾರರು ದೂರಿದರು.

ಅಮಾನವೀಯ ಕೃತ್ಯ: ತಿಪ್ಪೂರು ಗ್ರಾಮದಲ್ಲಿ ಅರ್ಚಕರ ವೃತ್ತಿ ಮಾಡಿಕೊಂಡು ಜೀವನ ಸಾಗಿಸುವ ಅರ್ಚಕ ಕುಟುಂಬದ ಸಿದ್ದಮ್ಮ ಮತ್ತು ಸಣ್ಣಕೆಂಪಯ್ಯ ಅವರಿಗೆ ಸಂಬಂಧಿಸಿದ ಜಮೀನನಲ್ಲಿ 30 ವರ್ಷದಿಂದ ಬೆಳೆದು ಫ‌ಸಲು ನೀಡುತ್ತಿದ್ದ ಅಡಕೆ ಮತ್ತು ತೆಂಗಿನ ಮರಗಳನ್ನು ಗ್ರಾಮಲೆಕ್ಕಾಧಿಕಾರಿ ಮುರಳಿ ಒತ್ತುವರಿ ತೆರವು ಆದೇಶವಿದೆ ಎಂದು ಪೊಲೀಸರ ಸಮಕ್ಷಮದಲ್ಲಿ ಕಡಿದು ಹಾಕಿಸಿದ್ದಾರೆ.

ನೊಟೀಸ್‌ ನೀಡದೆ ಮರ ಕಡಿದು ಹಾಕಿರುವುದು ಅಮಾನವೀಯ ಕೃತ್ಯ ಎಂದು ಕಿಡಿಕಾರಿದರು. ತಹಶೀಲ್ದಾರ್‌ ಎಂ.ಮಮತಾ ಗಮನಕ್ಕೂ ತಂದರೂ ಧರಣಿ ಸ್ಥಳಕ್ಕೆ ಬಾರದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಫ‌ಲವತ್ತಾದ ತೆಂಗು, ಅಡಕೆ ಮರ ಕಡಿದ ಗ್ರಾಮಲೆಕ್ಕಿಗ, ಕಂದಾಯ ನಿರೀಕ್ಷಕ ಹಾಗೂ ತಹಶೀಲ್ದಾರ್‌ ಅವರನ್ನು ಅಮಾನತು ಮಾಡಬೇಕೆಂದು ಪಟ್ಟು ಹಿಡಿದರು.

ಪೂರ್ವಪರ ತಿಳಿಯಬೇಕಿತ್ತು: ತಾಲೂಕು ವಾಲ್ಮೀಕ ನಾಯಕ ಸಮಾಜದ ಅಧ್ಯಕ್ಷ ಕೆ.ಆರ್‌.ಗುರುಸ್ವಾಮಿ ಮಾತನಾಡಿ, ಸರ್ವೆ ನಂ.113 ಮತ್ತು 114 ರಲ್ಲಿ ತೆಂಗು, ಅಡಕೆ ಮರ ಕಡಿದಿರುವ ತಾಲೂಕು ಆಡಳಿತದಲ್ಲಿನ ದೇವಾಲಯದ ಜಮೀನು ಒತ್ತುವರಿ ತೆರವು ಮಾಡಲು ಮುಂದಾದ ತಹಶೀಲ್ದಾರ್‌ ಪೂರ್ವಪರ ತಿಳಿಯಬೇಕಿತ್ತು ಎಂದು ಹೇಳಿದರು.

ವಿವಾದಿತ ಜಮೀನು ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿ ನಂತರ ಜಿಲ್ಲಾಧಿಕಾರಿ ಕೋರ್ಟ್‌ನಲ್ಲಿದ್ದು, ಯಥಾಸ್ಥಿತಿ ಮುಂದುವರಿಸುವಂತೆ ಹೇಳಿದ್ದರೂ, ಎರಡು ಕುಟುಂಬಕ್ಕೆ ಆಧಾರವಾಗಿದ್ದ ತೆಂಗು ಮತ್ತು ಅಡಕೆ ಮರ ಧರೆಗುರುಳಿಸಿದ್ದಾರೆ. ತಹಶೀಲ್ದಾರ್‌, ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಬೇಕು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ಯಾವ ಅಧಿಕಾರಿ ಆಗಮಿಸದ್ದಕ್ಕೆ ಅಸಮಾಧಾನಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯಲು ಮುಂದಾದರು. ಪೊಲೀಸರು ಧರಣಿ ನಿರತರನ್ನು ಸಮಾಧಾನ ಪಡಿಸಿದರು. ಸಂಜೆ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಅಜಯ್‌ ಮಾತನಾಡಿ, ದಾಖಲೆ ಮತ್ತು ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮುಖಂಡರಾದ ಸಾಕಸಂದ್ರ ದೇವರಾಜು, ಎ.ನರಸಿಂಹಮೂರ್ತಿ, ಎನ್‌.ಲಕ್ಷಿರಂಗಯ್ಯ, ಹೇರೂರು ನಾಗಣ್ಣ, ಜಿ.ಎನ್‌.ಎಚ್‌.ಡಿ.ಯಲ್ಲಪ್ಪ, ಕೃಷ್ಣಮೂರ್ತಿ, ಡಿ.ದೇವರಾಜು, ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಅರುಣ್‌, ವಿನಯ್‌, ರೈತಸಂಘದ ಕೆ.ಎನ್‌.ವೆಂಕಟೇಗೌಡ, ದಲಿತ ಮುಖಂಡ ಮಾರನಹಳ್ಳಿ ಶಿವಯ್ಯ ಇತರರಿದ್ದರು.

ಅಸ್ವಸ್ಥಗೊಂಡ ಮಹಿಳೆ: ಸೋಮವಾರ ಬೆಳಗ್ಗೆಯಿಂದಲೇ ಆರಂಭವಾದ ಉಪವಾಸ ಸತ್ಯಾಗ್ರಹ ಸಂಜೆ ವೇಳೆಗೆ ಆಕ್ರೋಶ ಕಟ್ಟೆ ಒಡೆಯಿತು. ಆಹಾರ ಸೇವಿಸದ ಸಂತ್ರಸ್ತ ಮಹಿಳೆ ಸಿದ್ದಮ್ಮ ತೀವ್ರ ಅಸ್ವಸ್ಥಗೊಂಡರು. ಸ್ಥಳಕ್ಕೆ ಆಗಮಿಸಿದ ವೈದ್ಯರು ತುರ್ತು ಚಿಕಿತ್ಸೆ ಆಗತ್ಯವಿದೆ, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಬೇಕೆಂದು ಹೇಳಿದ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲಾಯಿತು. ಸುಮಾರು 7 ತಾಸು ಧರಣಿ ನಡೆದರೂ ಅಹವಾಲು ಸ್ವೀಕರಿಸದೆ ಕಿಂಚಿತ್ತೂ ಕಾಳಜಿ ತೋರದ ತಹಶೀಲ್ದಾರ್‌ ಮಮತ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಮೇಲಿನ ಅಧಿಕಾರಿಗಳ ದರ್ಪ ಸರಿಯಲ್ಲ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ತೆಂಗು ಮತ್ತು ಅಡಕೆ ಮರಗಳು ಕಡಿಯಲು ಅಧಿಕಾರಿಗಳಿಗೆ ಹಕ್ಕಿಲ್ಲ. ಜಮೀನು ಒತ್ತುವರಿ ಬಗ್ಗೆ ನೊಟೀಸ್‌ ನೀಡದೆ ಏಕಾಏಕಿ ಮರ ಕಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು. ಜಿಲ್ಲಾಧಿಕಾರಿ ಆದೇಶದಂತೆ ಯಥಾಸ್ಥಿತಿ ಕಾಪಾಡಬೇಕಿತ್ತು. ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ದರ್ಪ ಮೆರೆದಿರುವುದು ರೈತರಿಗೆ ಆದ ಅನ್ಯಾಯವಾಗಿದೆ. ಮೇಲಾಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು.
-ಎ.ಗೋವಿಂದರಾಜು, ರೈತಸಂಘದ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.