ತುರುವೇಕೆರೆ ಅಭಿವೃದ್ಧಿಗೆ 230 ಕೋಟಿ ಮಂಜೂರು


Team Udayavani, Jan 29, 2020, 3:00 AM IST

turuvekere

ತುರುವೇಕೆರೆ: ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಬದ್ಧರಾಗಿದ್ದು, ಈಗಾಗಲೂ ತಾಲೂಕಿನ ಅಭಿವೃದ್ಧಿಗೆ 230 ಕೋಟಿ ರೂ. ಅನುದಾನ ಮಂಜೂರುಗೊಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಸೂಕ್ತ ಚರಂಡಿ, ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಲಿವೆ ಎಂದು ಶಾಸಕ ಮಸಾಲ ಜಯರಾಮ್‌ ಭರವಸೆ ನೀಡಿದರು.

ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುನಿಯೂರು-ಕಲ್ಲೂರು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಮಸಾಲಾ ಜಯರಾಮ್‌, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್‌ ಭೂಮಿ ಪೂಜೆ ನೆರವೇರಿಸಿ, ತಾಲೂಕಿನ ಜನರ ಬಹುವರ್ಷಗಳ ಕನಸಿನ ಕಾಮಗಾರಿಗೆ ಚಾಲನೆ ನೀಡಿದರು. ಈ ಮೂಲಕ ತಾಲೂಕಿನ ಮುನಿಯೂರು ಗ್ರಾಮದಲ್ಲಿ ಮುನಿಯೂರು ಗೇಟ್‌ನಿಂದ ಶ್ರೀರಾಂಪುರದವರೆಗೆ 2.50 ಕೋಟಿ ರೂ. ವೆಚ್ಚದ 5 ಕಿಲೋ ಮೀಟರ್‌ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆಯಿತು.

ಮೂಲಸೌಕರ್ಯ ಅಭಿವೃದ್ಧಿಗೆ ಸಂಕಲ್ಪ: ಸರ್ಕಾರ, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ತಾಲೂಕಿನ ಎಲ್ಲ ಹಳ್ಳಿಗಳ ರಸ್ತೆ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧೀಗೆ ಸಂಕಲ್ಪ ಮಾಡಲಾಗಿದೆ. ಗ್ರಾಮಸ್ಥರಿಗೆ ನೀಡಿದ್ದ ಭರವಸೆಯಂತೆ ಮುನಿಯನೂರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಕಳೆದ ವರ್ಷವೇ ಚಾಲನೆ ನೀಡಬೇಕಾಗಿತ್ತು. ಆದರೆ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ತಡವಾಯಿತು.

ಹಠಬಿಡದೆ ಲೋಕೋಪಯೋಗಿ ಸಚಿವರ ಬಳಿ ಹಲವು ಬಾರಿ ತೆರಳಿ, ಈ ಹಿಂದೆ ಇದ್ದ ಅನುದಾನಕ್ಕೆ ಹೆಚ್ಚುವರಿ ಅನುದಾನ ಪಡೆದು 23ರಂದೇ ಸರ್ಕಾರದ ಮಟ್ಟದಲ್ಲಿ ಕಾಮಗಾರಿಗೆ ಅನುಮೋದನೆ ಪಡೆದುಕೊಳ್ಳಲಾಗಿದೆ. ಈಗಲೇ ತಡವಾಗಿದ್ದು, ಮತ್ತೂ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಾಲನೆ ನೀಡಿದ್ದೇನೆ. ರಸ್ತೆ ಇಕ್ಕೆಲಗಳಲ್ಲಿರುವ ಮನೆಯವರು ಸ್ವಯಂಪ್ರೇರಣೆಯಿಂದ ಜಾಗ ತೆರವು ಮಾಡಿಕೊಡಬೇಕು. 7.5 ಮೀಟರ್‌ ವಿಸ್ತಾರವಾದ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದರು.

ಮತ್ತಷ್ಟು ಅನುದಾನ ತರಲಿ: ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್‌ ಮಾತನಾಡಿ, ಹಾಲಿ ಶಾಸಕ ಮಸಾಲೆ ಜಯರಾಮ್‌ ಅವರಿಗೆ ರಾಜ್ಯದಲ್ಲಿ ಅವರದೇ ಸರ್ಕಾರವಿದೆ. ಅವರಿಗೆ 3000 ಸಾವಿರ ಕೋಟಿಗೂ ಹೆಚ್ಚು ಅನುದಾನ ತರುವ ಅವಕಾಶವಿದೆ. ಹೀಗಾಗಿ ಇನ್ನು ಹೆಚ್ಚಿನ ಅನುದಾನ ತಂದು ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಲಿ ಎಂದು ಆಶಯ ವ್ಯಕ್ತಪಡಿಸಿದರು. ನಂತರ ಇದೇ ರಸ್ತೆ ಮಾರ್ಗವಾದ ಕೊಂಡಜ್ಜಿ ಕ್ರಾಸ್‌ನಿಂದ ಚಿಕ್ಕಗೊರಾಘಟ್ಟ ಮಾರ್ಗವಾಗಿ ವರಹಾಸಂದ್ರದವರೆಗೆ 63 ಲಕ್ಷ ವೆಚ್ಚದಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಮಸಾಲೆ ಜಯರಾಮ್‌ ಚಾಲನೆ ನೀಡಿದರು.

ತುಮುಲ್‌ ಅಧ್ಯಕ್ಷ ಮಹಾಲಿಂಗಪ್ಪ, ಎಪಿಎಂಸಿ ಸದಸ್ಯ ವಿ.ಟಿ.ವೆಂಕಟರಾಮಯ್ಯ, ಎಇಇ ಗುರುಸಿದ್ದಪ್ಪ, ಸಹಾಯಕ ಎಂಜಿನಿಯರ್‌ ಕಣ್ಮಣಿ, ಮುಖಂಡರಾದ ದುಂಡಾರೇಣುಕಪ್ಪ, ಕೊಂಡಜ್ಜಿ ವಿಶ್ವನಾಥ್‌, ಮುದ್ದೇಗೌಡ, ಡಿ.ಆರ್‌.ಬಸವರಾಜ್‌, ದೊಂಬರನಹಳ್ಳಿ ಪ್ರಸಾದ್‌, ವಿ.ಬಿ.ಸುರೇಶ್‌, ಕಾಳಂಜೀಹಳ್ಳಿ ಸೋಮಣ್ಣ , ಪಪಂ ಸದಸ್ಯ ಅಂಜನ್‌ ಕುಮಾರ್‌, ನಾಗಲಾಪುರ ಮಂಜಣ್ಣ, ಮೈನ್ಸ್‌ರಾಜಣ್ಣ, ಕೀರ್ತಿ, ಪಂಚಾಯತ್‌ ಕಾವಲು ಸಮಿತಿಯ ವೆಂಕಟೇಶ್‌, ಗುತ್ತಿಗೆದಾರರುಗಳಾದ ರಾಮಲಿಂಗಯ್ಯ, ಕೊಡಗಿಹಳ್ಳಿ ಸಿದ್ದಲಿಂಗಣ್ಣ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.