ಕೆರೆ ಅಭಿವೃದ್ಧಿ ಮಾಡದೆ 3.16 ಲಕ್ಷ ವಂಚನೆ


Team Udayavani, Nov 28, 2019, 5:49 PM IST

tk-tdy-2

ಕುಣಿಗಲ್‌: ಕೆರೆ ಅಭಿವೃದ್ಧಿ ಕಾಮಗಾರಿ ನಡೆಸದೆ 1.70 ಲಕ್ಷ ರೂ. ಬಿಲ್‌ ಡ್ರಾ ಮಾಡಿಕೊಂಡಿರುವ ಪಿಡಿಒ ಹಾಗೂ ಅಧ್ಯಕ್ಷನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಾಲೂಕಿನ ಕೆ.ಹೊನ್ನಮಾಚನ ಹಳ್ಳಿ ವ್ಯಾಪ್ತಿಯ ಪುಟ್ಟನಪಾಳ್ಯ ಗ್ರಾಮಸ್ಥರು ಆಗ್ರಹಿಸಿದರು.

2019-20ನೆ ಸಾಲಿನಲ್ಲಿ ನರೇಗಾ ಯೋಜನೆಯಡಿ 3.20 ಲಕ್ಷ ರೂ. ವೆಚ್ಚದಲ್ಲಿ ಪುಟ್ಟನಪಾಳ್ಯ ಕೆರೆ ಅಭಿವೃದ್ಧಿ ಕೈಗೊಂಡು ಕಾಮಗಾರಿ ಮಾಡದೆ ಈಗಾಗಲೇ ಪಿಡಿಒ ಕೃಷ್ಣ ಮೂರ್ತಿ, ಗ್ರಾಪಂ ಅಧ್ಯಕ್ಷ ಉಮೇಶ್‌ ಹಾಗೂ ಎಂಜಿನಿಯರ್‌ ದೇವೇಗೌಡ 2.30ಲಕ್ಷ ರೂ. ವಂಚಿಸಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಂಡು ಕಾಮಗಾರಿ ಅನುಷ್ಠಾನಗೊಳಿಸ ಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕೆಲವರ ಹೆಸರಿಗೆ ಹಣ: ಗ್ರಾಮದ ಮುಖಂಡ ನಾಗರಾಜ್‌ ಮಾತನಾಡಿ, 2019-20ನೇ ಸಾಲಿನನರೇಗಾ ಯೋಜನೆಯಡಿ ಪುಟ್ಟನಪಾಳ್ಯ ಗ್ರಾಮದ ಕೆರೆ ಅಭಿವೃದ್ಧಿ ಯೋಜನೆಯಡಿ 3.20 ಲಕ್ಷ ರೂ. ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಿ ಈ ಪೈಕಿ 2.70 ಲಕ್ಷ ರೂ. ಕೂಲಿ ಹಣ ಹಾಗೂ 50 ಸಾವಿರ ರೂ. ಸಾಮಗ್ರಿ ಹಣ ಎಂದು ನಮೂದಿಸಿ ಕಾಮಗಾರಿಗೆ ಅನುಮೋದನೆ ಪಡೆದಿದ್ದು, ಕೆರೆಯಲ್ಲಿ ಒಂದು ಮಣ್ಣು ತೆಗೆಯದೆ ಗ್ರಾಪಂ ಅಧ್ಯಕ್ಷ, ಪಿಡಿಒ, ನರೇಗಾ ಎಂಜಿನಿಯರ್‌ ಶಾಮೀಲಾಗಿ 1.70 ಲಕ್ಷರೂ. 8ನೇ ತಿಂಗಳಲ್ಲಿ ಕೂಲಿ ಮಾಡಲಾಗಿದೆ ಎಂದು ಕೆಲವರ ಹೆಸರಿಗೆ ಹಣ ವರ್ಗಾವಣೆ ಮಾಡಿ ಕೊಂಡಿದ್ದಾರೆ ಎಂದು ದೂರಿದ್ದಾರೆ.

ಉಡಾಫೆ ಉತ್ತರ: ಅಕ್ರಮದ ಕುರಿತು ಪಿಡಿಒ ಕೃಷ್ಣಮೂರ್ತಿ ಅವರನ್ನು ಕೇಳಿದರೆ “ಅಚಾತುರ್ಯದಿಂದ ಕೂಲಿ ಹಣ ಹಾಕಲಾಗಿದೆ. ವಾಪಸ್‌ ತೆಗೆ ಸೋಣ’ ಎನ್ನುತ್ತಾರೆ. ನರೇಗಾ ಎಂಜಿನಿಯರ್‌ ದಾಸೇಗೌಡರನ್ನು ಕೇಳಿದರೆ “ಏನೋ ಅಗಿದೆ ಬಿಡ್ರಿ ಕೆಲಸ ಮಾಡಿಸೋಣ’ ಎಂಬ ಹಾರಿಕೆ ಉತ್ತರ ನೀಡುತ್ತಾರೆ. ಇದನ್ನು ಖಂಡಿಸಿ ಇಒ, ಎಸಿಬಿಗೆ ದೂರು ನೀಡಿದ್ದರಿಂದ ಗುತ್ತಿಗೆ ಪಡೆದವರು ಜೆಸಿಬಿ ಬಳಸಿ ಕೆಲಸ ಮಾಡಲು ಬಂದಿದ್ದು, ತಡೆದಿದ್ದಕ್ಕೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಿದರು.

ಮೊದಲೇ ತಾಲೂಕಿನಲ್ಲಿ ನರೇಗಾ ಅಕ್ರಮ ಸಾಕಷ್ಟಿದ್ದು, ಈಗಾಗಲೇ ರಾಜ್ಯಮಟ್ಟದ ತಂಡ ತನಿಖೆ ನಡೆಸುತ್ತಿದ್ದರೂ ಕೆಲ ಪ್ರಭಾವಿಗಳು ಹಾಗೂ ಭ್ರಷ್ಟ ಅಧಿಕಾರಿಗಳು ನಿಯಮ ಗಾಳಿಗೆ ತೂರಿ ಯಾವುದೇ ಕಾಮಗಾರಿ ಮಾಡದೆ ಹಣ ಲೂಟಿ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಮೇಲಧಿಕಾರಿಗಳು ಗಮನ ಹರಿಸಿ ಕಾಮಗಾರಿ ಮಾಡದೆ ಹಣ ಪಾವತಿ ಮಾಡಿದ ಎಲ್ಲರ ಮೇಲೂ ಪ್ರಕರಣ ದಾಖಲಿಸ ಬೇಕೆಂದು ಒತ್ತಾಯಿಸಿದ್ದಾರೆ, ಗ್ರಾಮಸ್ಥರಾದ ಹರೀಶ್‌, ಪಿಎಸ್‌ ನಾಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.