![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸಾಮಾಜಿಕ ನ್ಯಾಯಕ್ಕೆ ಐಕ್ಯ ಹೋರಾಟ: ಸೈಯದ್ ಮುಜೀಬ್
Team Udayavani, Oct 4, 2020, 3:27 PM IST
![ಸಾಮಾಜಿಕ ನ್ಯಾಯಕ್ಕೆ ಐಕ್ಯ ಹೋರಾಟ: ಸೈಯದ್ ಮುಜೀಬ್](https://www.udayavani.com/wp-content/uploads/2020/10/TK-TDY-1-2-620x372.jpg)
ತುಮಕೂರು: ಜಗತ್ತಿನಾದ್ಯಂತ ಬೆಳೆಯುತ್ತಿರುವ ಅಸಮಾನತೆ, ಶೋಷಣೆ, ಬಡತನ, ಫ್ಯಾಸಿಸಂ, ಯುದ್ಧಗಳಿಂದಾಗಿ ಸಮಾಜದಲ್ಲಿ ತೀವ್ರತರ ಅಸಮಾನತೆ ಹೆಚ್ಚುತ್ತಿದ್ದು ಇದಕ್ಕೆ ಪ್ರತಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ದುಡಿಯುವವರು, ಜನರು ಐಕ್ಯತೆಯಿಂದ ಚಳವಳಿಯಲ್ಲಿ ಮುಂದೆ ಸಾಗಬೇಕಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.
ಡಬ್ಲ್ಯೂಎಫ್ಟಿಯುನ 75ನೇ ವರ್ಷಾಚರಣೆ ಭಾಗವಾಗಿ ಶನಿವಾರ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಆಯೋಜಿಸಿದ್ದ ಕಾರ್ಮಿಕರ ಪ್ರದರ್ಶನಗಳನ್ನು ಉದ್ದೇಶಿಸಿ ಮಾತನಾಡಿದರು. ಸಾಮ್ರಾಜ್ಯಶಾಹಿ ಶಕ್ತಿಗಳು ಇಂದು ತಾವು ಹರಿಯಬಿಟ್ಟಿರುವ ಬಹುರಾಷ್ಟ್ರೀಯ ಕಂಪನಿಗಳ ಮೂಲಕ ಮಾರುಕಟ್ಟೆಯಲ್ಲಿ ಏಕಸ್ವಾಮ್ಯತೆ ಪಡೆಯುವ ಮೂಲಕ ಎಲ್ಲವೂ ತಮ್ಮ ಅಧೀನಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಬಗ್ಗೆ ಎಚ್ಚರಿಕೆಯಿಂದ ಇದ್ದು ಹೋರಾಟಕ್ಕೆ ಮುಂದಾಗಬೇಕು ಎಂದರು.
ಶೋಷಣೆ:ತುಮಕೂರು ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದ ಜೇಮ್ ಪ್ರಾಪರ್ಟಿ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಫಿಟ್ವೆಲ್ ಟೂಲ್ಸ್ ಅಂಡ್ ಫೋರ್ಜಿಂಗ್ ಕಾರ್ಮಿಕರ ಸಂಘದ ಸುಜಿತ್ ನಾಯಕ್ ಮಾತನಾಡಿ, ಕೋವಿಡ್ ನೆಪದಲ್ಲಿ ಬಂಡವಾಳಗಾರರು ಕಾರ್ಮಿಕರ ಶೋಷಣೆಯಲ್ಲಿ ತೊಡಗಿದ್ದಾರೆಂದರು. ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಕರನ್ ಲಿಬರರ್ಸ್ ಕಾರ್ಖಾನೆ ಮುಂಭಾಗದಲ್ಲಿ ನಡೆದ ಪ್ರದರ್ಶನದಲ್ಲಿ ಮಾತನಾಡಿದ ಸಿಐಟಿಯು ತಾಲೂಕು ಕಾರ್ಯದರ್ಶಿ ರಂಗಧಾಮಯ್ಯ, ಕೇಂದ್ರ ಸರ್ಕಾರ ತರಾತುರಿಯಲ್ಲಿ ರೈತ-ಕಾರ್ಮಿಕ ವಿರೋಧಿ ಶಾಸನಗಳನ್ನು ಜಾರಿಗೆ ತರುತ್ತಿರುವುದು ಕಾರ್ಪೊàರೆಟ್ ಹಿತವಲ್ಲವೇ ಎಂದು ಪ್ರಶ್ನಿಸಿದರು.
ಎಂಎಚ್ಐಎನ್ ಕಾರ್ಖಾನೆ ಮುಂಭಾಗ ನಡೆದ ಪ್ರದರ್ಶನವನ್ನು ಉದ್ದೇಶಿಸಿ ಸಿಐಟಿಯು ಮುಖಂಡ ರಘುನಾಥ ಮಾತನಾಡಿದರು. ವಸಂತನರಸಾಪುರ ಕೈಗಾರಿಕಾ ಪ್ರದೇಶದ ಟಿಮೆಕ್ ಇಂಡಿಯಾ ಪ್ರವೇಟ್ಲಿಮಿಟೆಡ್ ಕಾರ್ಮಿಕರ ಸಂಘದ ವತಿಯಿಂದ ನಡೆದ ಪ್ರದರ್ಶನದಲ್ಲಿ ಸಂಘದ ಅಧ್ಯಕ್ಷ ದೀಪಕ್ ಜೆ., ಪ್ರಧಾನ ಕಾರ್ಯದರ್ಶಿ ದೀಪಕ್ ಪೂಜಾರಿ, ಬಿ.ಎಸ್. ಕಾಂತರಾಜು ಮಾತನಾಡಿದರು.
ಡಬ್ಲ್ಯೂಎಫ್ಟಿಯು 75ನೇ ವರ್ಷಾಚರಣೆ ಭಾಗವಾಗಿ ಜಿಲ್ಲೆಯ ಕುಣಿಗಲ್ ಕುದುರೆ ಫಾರಂ ಮುಂಭಾಗದಲ್ಲಿ ಪ್ರತಿಭಟನಾ ಪ್ರದರ್ಶನ ಏರ್ಪಡಿಸಲಾಗಿತ್ತು. ಸಿಐಟಿಯು ತಾಲೂಕು ಕಾರ್ಯದರ್ಶಿ ಅಬ್ದುಲ್ ಮುನಾಫ್,ಅಮೃತೂರುಸ್ಕೀಂನೌಕರರಾದಅಂಗನವಾಡಿ, ಆಶಾ ಬಿಸಿಯೂಟ ನೌಕರರು ಪ್ರದರ್ಶನ ಏರ್ಪಡಿಸಿದ್ದರು. ಭಾರತದಲ್ಲಿ ಸ್ಕೀಂಗಳಲ್ಲಿ ದುಡಿಯುತ್ತಿರುವ ಲಕ್ಷಗಟ್ಟಲೆಜನರಿಗೆ ಗೌರವ, ಘನತೆಯಿಂದ ಬದುಕು ನಡೆಸಲುಕನಿಷ್ಠ ಕೂಲಿ ಹಾಗೂ ಕಾರ್ಮಿಕ ಕಾನೂನು ಜಾರಿ ಮಾಡುವಂತೆ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಹೇಳಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.