ಪಾವಗಡದಲ್ಲಿ ಶೇ.80 ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ


Team Udayavani, Oct 21, 2019, 5:19 PM IST

tk-tdy-2

ಪಾವಗಡ: ಪ್ಲಾಸ್ಟಿಕ್‌ ಬಳಕೆ ನಿಷೇಧ ತಾಲೂಕಿನಲ್ಲಿ ಜಾರಿಯಾಲ್ಲಿದ್ದರೂ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿಲ್ಲ. ದಂಡ, ಎಚ್ಚರಿಕೆ ನಡುವೆಯೂ ಪಟ್ಟಣ ಹೊರತುಪಡಿಸಿ ಉಳಿದೆಡೆ ಪ್ಲಾಸ್ಟಿಕ್‌ ಮಾರಾಟ, ಬಳಕೆ ಮಾಮೂಲಿಯಂತಿದೆ.

2016ರಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿಗೆ ತರಲಾಯಿ ತಾದರೂ ಸಮರ್ಪಕವಾಗಿ ಜಾಗೃತಿ ಮೂಡಿಸುವಲ್ಲಿ ಸರ್ಕಾರ ವಿಫ‌ಲ ವಾಯಿತು. ಪ್ರಧಾನಿ ನರೇಂದ್ರ ಮೋದಿ ಸ್ವತ್ಛಭಾರತ್‌ಗೆ ಚಾಲನೆ ನೀಡಿದ ಬಳಿಕ ಬದಲಾವಣೆ ನಿರೀಕ್ಷೆ ಮೂಡಿದ್ದರೂ ಸಾಧ್ಯವಾಗಲಿಲ್ಲ. ಅಲ್ಲದೇ ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾ ಚರಣೆ ಪ್ರಯುಕ್ತ ಪ್ಲಾಸ್ಟಿಕ್‌ ನಿಷೇಧ ಪರಿಣಾಮಕಾರಿ ಯಾಗಿಅನುಷ್ಠಾನ ಗೊಳಿಸಲು ಸರ್ಕಾರ ಮುಂದಾಗಿದೆ.

ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳ ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸದೇ ಏಕಾಏಕಿ ನಿಷೇಧ ಸರಿಯಲ್ಲ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಪ್ಲಾಸ್ಟಿಕ್‌ ಕವರ್‌ಗಿಂತ ಬಟ್ಟೆ ಬ್ಯಾಗ್‌ಗೆ ಹೆಚ್ಚಿನ ದರವಿರು ವುದರಿಂದ ಜನರು ಪ್ಲಾಸ್ಟಿಕ್‌ ಬಳಕೆ ಬಿಟ್ಟಿಲ್ಲ. ಹಳ್ಳಿ ಜನರು ದಂಡಕ್ಕೆ ಹೆದರಿ ಬಟ್ಟೆ ಬ್ಯಾಗ್‌ ತರುತ್ತಾರೆ. ಅದರೆ ವಿದ್ಯಾವಂತರು ಬಟ್ಟೆ ಬ್ಯಾಗ್‌ ಹೊರೆ ಯಾಗುತ್ತದೆ ಎಂದು ಪ್ಲಾಸ್ಟಿಕ್‌ ಬಳಸುತ್ತಾರೆ. ಸಣ್ಣ ವಸ್ತು ಖರೀದಿಸಿದರೂ ಪ್ಲಾಸ್ಟಿಕ್‌ ಕವರ್‌ನಲ್ಲಿ ಹಾಕಿಸಿಕೊಂಡು ಬರುತ್ತಾರೆ.

ಪುರಸಭೆಯಿಂದ ಕಾರ್ಯಕ್ರಮ:ಪ್ಲಾಸ್ಟಿಕ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಪುರಸಭೆ ಇತ್ತೀಚೆಗೆ ಅರಿವು ಕಾರ್ಯಕ್ರಮ ನಡೆಸಿತ್ತು. ಜೊತೆಗೆ ಪ್ಲಾಸ್ಟಿಕ್‌ ಮಾರಾಟ ಮಾಡುತ್ತಿದ್ದ ಅಂಗಡಿ-ಮಳಿಗೆಗಳ ಮೇಲೆ ದಾಳಿ ನಡೆಸಿ ದಂಡ, ಎಚ್ಚರಿಕೆ ನೀಡಲಾಯಿತು. ವರ್ತಕರು ವಿರೋಧ ವ್ಯಕ್ತಪಡಿಸಿದರೂ ಪುರಸಭೆ ಅಧಿಕಾರಿಗಳು ಕೇರ್‌ ಮಾಡಿರಲಿಲ್ಲ. ಅಲ್ಲದೇ ಪ್ಲಾಸ್ಟಿಕ್‌ ಕೊಂಡೊಯ್ಯುವ ಸಾರ್ವಜನಿಕರ ವಿರುದ್ಧವೂ ದಂಡ ವಿಧಿಸಲಾಯಿತು. ಸಂಘ-ಸಂಸ್ಥೆಗಳ ಸಹಾಯದಿಂದ ಅರಿವು ಕಾರ್ಯಕ್ರಮ ನಡೆಸಲಾಯಿತು.

ಪ್ರತಿ ಯೊಂದು ಶಾಲಾ-ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿ ಗಳಿಗೆ ತಿಳಿವಳಿಕೆ ಮೂಡಿಸಲಾಗಿದೆ. ಇತ್ತೀಚೆಗೆ ಪಟ್ಟಣದಲ್ಲಿ ಪುರಸಭೆಯಿಂದ ಪ್ಲಾಸ್ಟಿಕ್‌ ಅಂತಿಮ ಶವಯಾತ್ರೆ ನಡೆಯಿತು. ಶಾಸಕ ವೆಂಕಟ ರಮಣಪ್ಪ, ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಇದ್ದರು. ಶವಯಾತ್ರೆ ನಡೆದ 7ನೇ ದಿನಕ್ಕೆ ಪ್ಲಾಸ್ಟಿಕ್‌ ತಿಥಿ ಊಟ ಏರ್ಪಡಿಸಿ 300ಕ್ಕೂ ಹೆಚ್ಚು ಜನರಿಗೆ ಬಾಡೂಟ ಬಡಿಸಲಾಯಿತು. ಪಾವಗಡ ಪಟ್ಟಣದಲ್ಲಷ್ಟೇ ಕಟ್ಟುನಿಟ್ಟಿನ ಕ್ರಮದಿಂದ ಶೇ.80ರಷ್ಟು ಪ್ಲಾಸ್ಟಿಕ್‌ ಬಳಕೆ ಕಡಿಮೆಯಾಗಿದೆ. ಉಳಿದೆಡೆಯೂ ಈ ಬದಲಾವಣೆ ಆಗಬೇಕಿದೆ. ಪರಿಸರ ರಕ್ಷಣೆ ಮತ್ತು ಸ್ವತ್ಛತೆ ಯಶಸ್ವಿ ಯಾಗಲು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ಕಡಿಮೆ ಯಾಗಬೇಕು. ಪ್ಲಾಸ್ಟಿಕ್‌ ಮಣ್ಣಿನಲ್ಲಿ ಕರಗದ ವಸ್ತು ವಾಗಿದ್ದು, ಮಾರಾಣಾಂತಿಕ ಕಾಯಿಲೆಗಳಿಗೆ ಕಾರಣ ವಾಗಿದೆ. ಇದನ್ನು ಅರಿತು ಜನರು ಮನೆ ಯಿಂದಲೇ

ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಬೇಕು. ವಸ್ತು ಖರೀದಿಸಲು ಮನೆಯಿಂದಲೇ ಬಟ್ಟೆ ಬ್ಯಾಗ್‌ ತೆಗೆದುಕೊಂಡು ಹೋಗಬೇಕು. ಇದರಿಂದ ಪರಿಸರ ಉಳಿವು ಸಾಧ್ಯ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.