846 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ!

ಕಾಯಕಲ್ಪಯಾವಾಗ? , ಸ್ಮಾರ್ಟ್‌ಸಿಟಿ ನಗರದಲ್ಲಿಯೇ 86 ಅಂಗನವಾಡಿಗೆ ಸ್ವಂತ ನಿವೇಶನವಿಲ್ಲ

Team Udayavani, Nov 26, 2020, 3:51 PM IST

846 ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲ!

ಉದ್ಘಾಟನೆಗೆ ಸಿದ್ಧವಾಗಿರುವ ಅಂಗನವಾಡಿ ಹೊಸ ಕಟ್ಟಡ

ತುಮಕೂರು: ಪುಟ್ಟ ಮಕ್ಕಳ ಶೈಕ್ಷಣಿಕ ಚಟುವಟಿಕೆ ತಾಣಗಳು ಅಂಗನವಾಡಿ ಕೇಂದ್ರಗಳು, ಇಲ್ಲಿ ಮಕ್ಕಳು ಶಿಕ್ಷಣ ಕಲಿಯಲು ಉತ್ತಮ ವಾತಾವರಣ ಇರಬೇಕು, ಕಂದಗಳು ಮೊದಲು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವ ಕಲ್ಪತರು ನಾಡಿನ 846 ಅಂಗನವಾಡಿ ಕೇಂದ್ರಗಳಿಗೆ ಈವರೆಗೂ ಸ್ವಂತಕಟ್ಟಡವೇ ಇಲ್ಲ.

ಪಾಳು ಬಿದ್ದಿರುವ ಶಾಲೆಗಳಲ್ಲಿ,ಸಮುದಾಯ ಭವನಗಳಲ್ಲಿ ಹಳೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಶಿಕ್ಷಣ ಕಲಿಯುವ ಸ್ಥಿತಿ ಇಂದಿಗೂ ಜಿಲ್ಲೆಯಲ್ಲಿದ್ದು ಇದಕ್ಕೆ ಮುಕ್ತಿ ದೊರೆಯುವುದು ಯಾವಾಗ? ಜಿಲ್ಲೆಯಲ್ಲಿ ಇರುವ 4109 ಅಂಗನವಾಡಿಗಳ ಪೈಕಿ ಇಂದಿಗೂ ಬಹುತೇಕ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ, ಕೆಲವು ಕಟ್ಟಡಗಳು ಹಳೆದಾಗಿ ಶಿಥಿಲಾವಸೆœಯಲ್ಲಿದ್ದು ಮಕ್ಕಳ ಮೇಲೆ ಎಲ್ಲಿ ಬಿದ್ದು ಬಿಡುತ್ತವೆಯೋ ಎನ್ನುವ ಆತಂಕ ಮೂಡುವ ಸ್ಥಿತಿಯಲ್ಲಿರುವ ಕಟ್ಟಡದಲ್ಲಿ ಅಂಗನವಾಡಿಗಳು ನಡೆಯುತ್ತಿವೆ.

650 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ: 4109 ಅಂಗನವಾಡಿ ಕೇಂದ್ರಗಳಲ್ಲಿ 2850 ಅಂಗನವಾಡಿಗಳು ಮಾತ್ರ ಸ್ವಂತ ಕಟ್ಟಡ ಹೊಂದಿವೆ, ಇನ್ನು 152 ಅಂಗನವಾಡಿಗಳು ಸಮುದಾಯ ಭವನಗಳಲ್ಲಿ, 18ಅಂಗನವಾಡಿಗಳು ಪಂಚಾಯತ್‌ ಕಟ್ಟಡದಲ್ಲಿ, 352 ಅಂಗನವಾಡಿಗಳು ಸರ್ಕಾರಿ ಶಾಲಾ ಕಟ್ಟಡದಲ್ಲಿ ನಡೆಯುತ್ತಿವೆ. 84 ಬಾಡಿಗೆ ರಹಿತ ಕಟ್ಟಡದಲ್ಲಿ ನಡೆಯುತ್ತಿದ್ದರೆ, 650 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಇಂದಿಗೂ ನಡೆಯುತ್ತಿವೆ.

ಮೂಲಭೂತ ಸೌಲಭ್ಯದ ಕೊರತೆ: ಜಿಲ್ಲೆಯ ಅಂಗನವಾಡಿಗಳಲ್ಲಿ 1.40 ಲಕ್ಷ ಮಕ್ಕಳು ಅಂಗನವಾಡಿಗಳಲ್ಲಿ ಶಿಕ್ಷಣ ಪಡೆಯುತ್ತಿದ್ದು ಅದರಲ್ಲಿಯೂ ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚು ಮಕ್ಕಳು ಅಂಗನವಾಡಿಗಳಲ್ಲಿ ಶಿಕ್ಷಣ ಪಡೆಯುತ್ತಲಿದ್ದಾರೆ. ಕೆಲವು ಗ್ರಾಮೀಣ ಪ್ರದೇಶದ ಅಂಗನವಾಡಿಗಳಲ್ಲಿ ಮೂಲಭೂತ ಸೌಲಭ್ಯದ ಕೊರತೆ ಎದ್ದು ಕಾಣುತ್ತಿದೆ, ಕೆಲವು ಅಂಗನವಾಡಿಗಳಿಗೆ ಶೌಚಾಲಯವಿಲ್ಲ, ಕೆಲವು ಅಂಗನವಾಡಿಗಳಿಗೆ ಕುಡಿಯುವ ನೀರಿನ ಸೌಲಭ್ಯವೂ ಇಲ್ಲ, ಕೆಲವು ಅಂಗನವಾಡಿಗಳ ಕಟ್ಟಡ ಶಿಥಿಲವಾಗಿದ್ದು ಎಲ್ಲಿ ಮಕ್ಕಳ ಮೇಲೆ ಕಟ್ಟಡದ ಮೇಚ್ಛಾವಣೆ ಬೀಳುತ್ತದೆಯೋ ಎನ್ನುವ ಆತಂಕ ಪೋಷಕರಲ್ಲಿ ಇದೆ.ಇಂತಹದರ ನಡುವೆ ಜಿಲ್ಲೆಯ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಟ್ಟಬೇಕು ಎಂದು ಜಿಪಂ ಸಭೆಗಳಲ್ಲಿ ಚರ್ಚೆ ನಡೆಯುತ್ತಲೇ ಇರುತ್ತದೆ. ಆದರೆ ಇಂದಿಗೂ ಈ ಅಂಗನವಾಡಿ ಕಟ್ಟಡ ಕಟ್ಟಲು ಅಗತ್ಯ ಕ್ರಮ ಕೈಗೊಂಡಿಲ್ಲ.

650 ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರಗಳು: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಟ್ಟಲು ಜಿಪಂ ಯೋಜನೆ ರೂಪಿಸಬೇಕಾಗಿದೆ, ಆದರೆ 650 ರಲ್ಲಿ 225 ಅಂಗನವಾಡಿ ಕಟ್ಟಡಗಳಿಗೆ ನಿವೇಶನವಿದೆ. ಅಲ್ಲಿ ಅಂಗನವಾಡಿ ಕಟ್ಟಬಹುದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಟ್ಟಡ ಕಟ್ಟಲು ನಿವೇಶನದಕೊರತೆ ಎದುರಾಗಿದೆ. ತುಮಕೂರಿನ ಕೇಂದ್ರಗಳಿಗೆ ಸ್ವಂತ ಕಟ್ಟಡ: ತುಮಕೂರು ನಗರದಲ್ಲಿರುವ 179 ಅಂಗನವಾಡಿ ಕೇಂದ್ರಗಳಲ್ಲಿ 58 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿದೆ. ಉಳಿದ 13 ಕೇಂದ್ರಗಳು ಸಮುದಾಯ ಭವನದಲ್ಲಿ 11 ಸರ್ಕಾರಿ ಶಾಲಾ ಕಟ್ಟಡದಲ್ಲಿ ಇನ್ನು 97ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಕಟ್ಟಡ ಕಟ್ಟಲು 11 ಅಂಗನವಾಡಿಗಳಿಗೆ ಮಾತ್ರ ನಿವೇಶನ ಇದೆ ಇಲ್ಲಿಸ್ಮಾರ್ಟ್‌ ಸಿಟಿ ಯೋಜನೆ ಯಿಂದ ಕಟ್ಟಡಗಳ ಕಾಮಗಾರಿ ಆರಂಭವಾಗಿವೆ. ಉಳಿದ ಅಂಗನವಾಡಿ ಕೇಂದ್ರಗಳಿಗೆ ನಿವೇಶನವೇ ಇಲ್ಲ, ನಗರದಲ್ಲಿ ಸರ್ಕಾರಿಯೋಜನೆಯ ಕಟ್ಟಡ ಕಟ್ಟಲು ಪಾಲಿಕೆಯ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳೇ ಇಲ್ಲ, ನಗರದಲ್ಲಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಟ್ಟಲು ಈ ಹಿಂದಿನಿಂದ ನಗರ ಶಾಸಕರು, ಪಾಲಿಕೆ ಸದಸ್ಯರು ಹೆಚ್ಚು ಒತ್ತು ನೀಡದೇ ಇರುವುದೇ ಅಂಗನವಾಡಿ ಕಟ್ಟಡಗಳು ಇಂದಿಗೂ ಬಾಡಿಗೆಯಲ್ಲಿ ಇರಲು ಪ್ರಮುಖ ಕಾರಣವಾಗಿದೆ.

345 ಅಂಗನವಾಡಿ ಶೌಚಾಲಯಗಳು ಪೂರ್ಣ :  ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 345 ಶೌಚಾಲಯಗಳು ಪೂರ್ಣಗೊಂಡು 130 ಶೌಚಾಲಯ ಪ್ರಗತಿಯಲ್ಲಿವೆ, ಇನ್ನೂ 318 ಅಂಗನವಾಡಿಗಳಿಗೆ ಶೌಚಾಲಯ ಅಗತ್ಯವಿದೆ. ಇದರ ಜೊತೆಗೆ 653 ಅಂಗನವಾಡಿ ಕೇಂದ್ರಗಳು ಬಾಡಿಗೆಕಟ್ಟಡದಲ್ಲಿದ್ದು ಹೊಸದಾಗಿ ಅಂಗನವಾಡಿ ಕಟ್ಟಡ ನಿರ್ಮಿಸಲು 229ಕೇಂದ್ರಗಳಿಗೆ ನಿವೇಶನ ಲಭ್ಯವಿದ್ದು ಅವುಗಳಿಗೆಕಟ್ಟಡಕಟ್ಟಲು ಅನುದಾನ ಬಿಡುಗಡೆ ಮಾಡುವಂತೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಹಲವುಕಡೆ ನಿವೇಶನ ಇಲ್ಲ ಅಲ್ಲಿ ನಿವೇಶನಪಡೆದು ಅಂಗನವಾಡಿ ಕಟ್ಟಡಕಟ್ಟಲುಕ್ರಮ ಕೈಗೊಳ್ಳಲಾಗುವುದು ಎನ್ನುತ್ತಾರೆ ಅಧಿಕಾರಿಗಳು.

ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸ್ವಂತ ಕಟ್ಟಡಕಟ್ಟಲು ಜಿಪಂ ನಿಂದ ಸೂಚಿಸಿರುವುದರ ಮೇರೆಗೆ 25 ಅಂಗನವಾಡಿ ಕಟ್ಟಡಗಳು ಪೂರ್ಣಗೊಂಡು ನ.26 ರಂದು ಸಚಿವರಿಂದ ಉದ್ಘಾಟನೆಯಾಗಲಿವೆ. ಇನ್ನೂ 93 ಕಟ್ಟಡಗಳ ನಿರ್ಮಾಣ ಪ್ರಗತಿಯಲ್ಲಿವೆ. ನಟರಾಜ್‌, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.