ಹದಗೆಟ್ಟಿರುವ ಪ್ರಥಮ ದರ್ಜೆ ಕಾಲೇಜು ವ್ಯವಸ್ಥೆ
Team Udayavani, Oct 27, 2019, 3:49 PM IST
ಪಾವಗಡ: ಪಟ್ಟಣದ ವೈ.ಇ.ರಂಗಯ್ಯ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧನೆ ಕುಂಠಿತವಾಗಿದ್ದು, ಪ್ರಾಂಶುಪಾಲರು ಮೊಬೈಲ್ ವೀಕ್ಷಣೆಗಷ್ಟೇ ಸೀಮಿತರಾಗಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪ್ರಾಂಶುಪಾಲರಿಂದ ಕಾಲೇಜು ವ್ಯವಸ್ಥೆ ಹದಗಟ್ಟಿದೆ ಎಂದು ಪ್ರಾಂಶುಪಾಲ ಕೆ.ಅರ್.ನಾರಾಯಣ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿಲ್ಲ.
ಹೆಣ್ಣುಮಕ್ಕಳ ಶೌಚಗೃಹದಲ್ಲಿ ಆರು ತಿಂಗಳಿನಿಂದ ನೀರಿಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನ ಹರಿಸದೇ, ವಿದ್ಯಾರ್ಥಿಗಳು ಸಮಸ್ಯೆ ಹೇಳಲು ಹೋದರೆ ಕೇಳದೆ, ಪ್ರಾಂಶು ಪಾಲರು ಮೊಬೈಲ್ ನೋಡುವುದರಲ್ಲಿ ನಿರತರಾಗಿರುತ್ತಾರೆ ಎಂದು ಅರೋಪಿಸಲಾಗಿದೆ.
ವರ್ಗಾವಣೆ ಪ್ರಮಾಣಪತ್ರ, ಘಟಿಕೋತ್ಸವ ಪ್ರಮಾಣಪತ್ರ, ವಿದ್ಯಾರ್ಥಿ ವೇತನವೂ ನಿಗದಿತ ಸಮಯಕ್ಕೆ ಬರುತ್ತಿಲ್ಲ. ರಜಾ ತೆರಳುವ ವೇಳೆ ಮತ್ತೂಬ್ಬರಿಗೆ ಜವಾಬ್ದಾರಿ ನೀಡದೆ ತೆರಳುತ್ತಾರೆ. ಹಲವು ಬಾರಿ ಪ್ರಾಂಶು ಪಾಲರ ಕಾಣಲು ಹೋದರೂ ಸಿಗುವುದಿಲ್ಲ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಸಿಬ್ಬಂದಿ ನಡುವೆ ಮುಸಕಿನ ಗುದ್ದಾಟದಿಂದ ಕಾಲೇಜಿನಲ್ಲಿ ಶಿಕ್ಷಣ ವ್ಯವಸ್ಥೆ ಹದಗಟ್ಟಿದೆ. ಪ್ರಾಂಶುಪಾಲರು ಮೂರು ವರ್ಷಗಳಿಂದ ಯಾವುದೇ ತರಗತಿಯಲ್ಲಿ ಒಂದು ತಾಸು ಬೋಧನೆಯೂ ಮಾಡಿಲ್ಲ. ಕಾಲೇಜಿಗೆ ಬಂದರೆ ಮೊಬೈಲ್ ನೋಡಿಕೊಂಡು ಸಮಯ ಕಳೆಯುತ್ತಾರೆ ಎಂದು ಕೆಲವರು ಸಂದೇಶದಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ
Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!
MUST WATCH
ಹೊಸ ಸೇರ್ಪಡೆ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ