ನಿರ್ವಹಣೆ ಇಲ್ಲದೆ ಸೊರಗಿದ ಜಲಾಶಯ


Team Udayavani, Sep 25, 2019, 5:28 PM IST

TK-TDY-1

ಕುಣಿಗಲ್‌: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಗಳಲ್ಲಿ ಒಂದಾಗಿರುವ ಮಾರ್ಕೋನಹಳ್ಳಿ ಜಲಾಶಯ ನಿರ್ಲಕ್ಷ್ಯತೆಗೆ ಒಳಗಾಗಿ ತನ್ನ ಅಸ್ಥಿತ್ವ ಕಳೆದುಕೊಳ್ಳವ ಹಂಚಿನಲ್ಲಿದೆ. ಜಲಾಶಯದಲ್ಲಿನ ಕ್ರಸ್ಟ್‌ಗೇಟ್‌ ಗಳು ತುಕ್ಕು ಹಿಡಿದಿದ್ದು ನಾಲಾ ಏರಿಗಳು ಬಿರುಕು ಬಿಟ್ಟಿವೆ. ಇದರಿಂದಾಗಿ ನೀರು ಸಾಕಷ್ಟು ಪ್ರಮಾಣದಲ್ಲಿ ಪೋಲಾಗುತ್ತಿದೆ. ಡ್ಯಾಂನ ತಳ ಭಾಗದಲ್ಲಿ ವಿಶಾಲವಾದ ಉದ್ಯಾ ನವನ ಇದೆ. ಇಲ್ಲಿ ಈಗ ಜಾನುವಾರುಗಳು ಹುಲ್ಲು ಮೇಯುತ್ತಿವೆ. ಬೃಹತ್‌ ಗಾತ್ರದ 5 ಕ್ರೆಸ್ಟ್‌ ಗೇಟುಗಳು ಇದರ ಪಕ್ಕದಲ್ಲೇ ಎರಡು ಸ್ವಯಂ ಚಾಲಿತ ಸೈಫಾನ್‌ಗಳು ಇವೆ. ಡ್ಯಾಂ ತುಂಬಿ ಸ್ವಯಂ ಚಾಲಿತ ಸೈಫಾನ್‌ಗಳಲ್ಲಿ ನೀರು ಹೊರ ಹೋಗಲಿದ್ದು ಈ ದೃಶ್ಯ ಕಣ್ಮನ ಸೆಳೆಯುತ್ತದೆ.

ಪ್ರವಾಸಿ ಮಂದಿರದಿಂದ ಏರಿ ಮೂಲಕದವರೆಗೂ ಜಲಾಶಯದ ಮೇಲೆ ನಡೆದು ಹೋಗುವಾಗ ಇಡೀ ಜಲಾಶಯ ರಮಣೀಯವಾಗಿ ಕಣ್ಮನ ಸೆಳೆಯುತ್ತದೆ. ಈ ಜಲಾಶಯ ತುಂಬಿ ಹೆಚ್ಚುವರಿ ನೀರು ಕೋಡಿ ಮೂಲಕ ಹರಿದು ಶಿಂಷಾ ಕೊಳ್ಳಕ್ಕೆ ಹರಿಯಲಿದೆ. ಹೀಗಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಪ್ರವಾಸಿತಾಣವ ನ್ನಾಗಿ ಅಭಿವೃದ್ಧಿಪಡಿಸಲು ಮುಂದಾಗದಿರುವುದು ಅಸಮಾಧಾನ ಮೂಡಿಸಿದೆ.

ಸರ್‌ ಎಂ.ವಿ.ಪುತ್ಥಳಿ ಸ್ಥಾಪಿಸಿ: ವಿಶ್ವೇಶ್ವರಯ್ಯ ಅವರನ್ನು ನೆನಪಿಸಿಕೊಳ್ಳುವ ಹಾಗೂ ಗೌರವ ಸಲ್ಲಿಸುವ ಕೆಲಸ ಅಗಿಲ್ಲ. ಬಹುತೇಕ ಎಂಜಿನಿಯರ್‌ ಗಳಿಂದಲೇ ತುಂಬಿ ತುಳುಕುತ್ತಿರುವ ಕಾವೇರಿ ನೀರಾವರಿ ನಿಗಮದ ಎಂಜಿನೀಯರ್‌ಗಳು, ರೈತ ಬಾಂಧವರು ಎಚ್ಚೆತ್ತು ಜಲಾಶಯದ ಅದ್ಭುತ ತಂತ್ರಜ್ಞಾನ ಪರಿಚಯ, ಸಾಧನೆ ತಿಳಿಸಲು ಪುತ್ಥಳಿ ನಿರ್ಮಿಸಲು ಸ್ಥಳೀಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈಗಿನ ನೀರಿನ ಮಟ್ಟ: ಜಲಾಶಯ 4700 ಚ.ಮೀ ವಿಸ್ತೀರ್ಣ ಹೊಂದಿದೆ. ಒಟ್ಟು 2.4ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯಹೊಂದಿದೆ. ಹಾಲಿ ಈಗ 1.6 ಟಿಎಂಸಿ ನೀರು ಲಭ್ಯವಿದ್ದು 15ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಕಳೆದ ವರ್ಷ ಇದೇ ವೇಳೆ ಡ್ಯಾಂನಲ್ಲಿ 227ಎಂಟಿಎಫ್‌ಸಿ ಮಾತ್ರ ನೀರು ಸಂಗ್ರಹವಾಗಿತ್ತು. ಶಿಂಷಾ ನದಿ, ವೀರವೈಷ್ಣವಿ ನದಿ, ಹೇಮಾವತಿ ಲೀಕೇಜ್‌ ನೀರೇ ಜಲಾಶಯದ ನೀರಿನ ಮೂಲ. ಡಿಕೆ ಬ್ರದರ್ಸ್‌ ಹಾಗೂ ಶಾಸಕ ಡಾ.ರಂಗನಾಥ್‌ ರ ಪ್ರಯತ್ನದ ಫಲವಾಗಿ ಪ್ರಸಕ್ತ ವರ್ಷ ದಿಂದ ಹೇಮಾವತಿ ಜಲಾಶದಿಂದ ಒಂದು ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಮಾಡಿರುವುದು ರೈತರ ಮುಖದಲ್ಲಿ ಹರ್ಷ ಮೂಡಿಸಿದೆ.

ಕೇಂದ್ರ ಸರ್ಕಾರದ ಡ್ಯಾಂ ಅಭಿವೃದ್ಧಿ ಯೋಜನೆಯಡಿ ಮಾರ್ಕೋನಹಳ್ಳಿ ಜಲಾಶಯದಲ್ಲಿನ ಕ್ರೆಸ್ಟ್‌ ಗೇಟ್‌ ರಿಪೇರಿ, ಲೀಕೇಜ್‌ ದುರಸ್ತಿ, ಕೋಡಿ ದುರಸ್ತಿ ಕಾರ್ಯಕ್ಕೆ ಈಗಾಗಲೇ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೂ ಪ್ರವಾಸಿ ತಾಣ ಮಾಡಲೂ ಯೋಜನೆ ಸಿದ್ಧಪಡಿಸಲಾಗುತ್ತಿದ್ದು ಜಲಸಂಪನ್ಮೂಲ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು.●ಮಂಜೇಶ್‌ಗೌಡ, ಇಇ, ಹೇಮಾವತಿನಾಲಾವಲಯ ಯಡಿಯೂರು

ಮಾರ್ಕೋನಹಳ್ಳಿ ಜಲಾಶಯದಿಂದ ಸಾವಿರಾರು ರೈತ ಕುಟುಂಬ ಸೇರಿದಂತೆ ಮೀನುಗಾರರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇಂತಹ ಅದ್ಬುತ ಜಲಾಶಯ ನಿರ್ಮಿಸಿದ ಸರ್‌ ಎಂ.ವಿ. ಅವರನ್ನು ನೆನಪಿಸಿಕೊಳ್ಳದಿರುವುದು ನೋವಿನ ಸಂಗತಿ. 75 ವರ್ಷ ಪೂರೈಸಿರುವ ಜಲಾಶಯಕ್ಕೆ ವಜ್ರಮಹೋತ್ಸವ ಸಂಭ್ರಮ ಆಚರಿಸಬೇಕಾಗಿದೆ. ●ಆನಂದ್‌ ಪಟೇಲ್‌, ಜಿಲ್ಲಾ ರೈತ ಸಂಘದ ಅಧ್ಯಕ್ಷ

 

ಲೋಕೇಶ್‌

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.