ಬೆಳ್ಳಾರ ಗ್ರಾಮದ ಬಳಿ ಶಾಲಾ ಮಕ್ಕಳ ಕಿಡ್ನಾಪ್‌ಗೆ ವಿಫ‌ಲ ಯತ್ನ?


Team Udayavani, Oct 30, 2022, 12:43 PM IST

TDY-12

ಹುಳಿಯಾರು: ಹೋಬಳಿಯ ಬೆಳ್ಳಾರದ ಬಳಿ ಶನಿವಾರ ಬೆಳಗ್ಗೆ ಶಾಲೆಯಿಂದ ಮನೆಗೆ ಹಿಂದಿರುಗುವಾಗ ಕಪ್ಪು ಕಾರಿನಲ್ಲಿ ಬಂದ ಕೆಲ ಅಪರಿಚಿತರು ಮಕ್ಕಳನ್ನು ಕಿಡ್ನಾಪ್‌ ಗೆ ವಿಫಲ ಯತ್ನ ಮಾಡಿದ್ದು, ಈ ಕುರಿತು ಮಕ್ಕಳು ನೀಡಿರುವ ಹೇಳಿಕೆ ವೈರಲ್‌ ಆಗಿದೆ.

ಎಂದಿನಂತೆ ಬೆಳ್ಳಾರ ಸೇತುವೆ ಬಳಿ ಇರುವ ಸರ್ಕಾರಿ ಶಾಲೆಯ ಶನಿವಾರದ ಬೆಳಗ್ಗಿನ ತರಗತಿ ಮುಗಿಸಿಕೊಂಡು ನಾಲ್ವರು ಮಕ್ಕಳು ತಮ್ಮೂರಾದ ಬೆಳ್ಳಾರ ಮೇಗಲಗೊಲ್ಲರಹಟ್ಟಿಗೆ ಹಿಂದಿರುಗಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ನಡೆದುಕೊಂಡು ಹೋಗುವಾಗ ಕಪ್ಪು ಕಾರನ್ನು ಮಕ್ಕಳ ಪಕ್ಕ ನಿಲ್ಲಿಸಿ, ಬುರ್ಖಾಧಾರಿಗಳಿಬ್ಬರು ಇಳಿದು ಮಕ್ಕಳ ಕೈ ಹಿಡಿದು ಎಳೆದಿದ್ದಾರೆ. ಇದಕ್ಕೆ ಮಕ್ಕಳು ಪ್ರತಿರೋಧ ತೋರಿದ್ದು, ಕೈ ಬಿಡಿಸಿಕೊಂಡು ಪಕ್ಕದ ಮುಳ್ಳಿನ ಪೊದೆಗೆ ಬಿದ್ದಿದ್ದಾರೆ.

ಇದರಿಂದ ಗಾಬರಿಗೊಂಡ ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು ಚಿಕ್ಕನಾಯಕನಹಳ್ಳಿ ಕಡೆ ಪರಾರಿಯಾಗಿದ್ದಾರೆ. ಮುಳ್ಳಿನ ಪೊದೆಗೆ ಬಿದ್ದ ಪರಿಣಾಮ ಲೋಹಿತ್‌, ಹರ್ಷಿತ್‌ ಎಂಬ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ತರಚು ಗಾಯಗಳಾಗಿವೆ. ಕಾರಿನಲ್ಲಿ ಇನ್ನೂ ಮೂವರು ಮಕ್ಕಳಿದ್ದರು ಎಂದು ಮಕ್ಕಳು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ದಾರಿ ಹೋಕರಾದ ಬಸವರಾಜುಗೆ ಮಕ್ಕಳು ವಿಷಯ ಮುಟ್ಟಿಸಿದಾಗ ಪೊಲೀಸರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಕ್ಕಳಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ರಾಜ್ಯ ಜೀವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್‌.ಕಿರಣ್‌ಕುಮಾರ್‌ ಸಹ ಸ್ಥಳಕ್ಕೆ ಆಗಮಿಸಿ ಮಕ್ಕಳಿಂದ ಮಾಹಿತಿ ಪಡೆದಿದ್ದಾರೆ.

ಮುಳ್ಳಿನ ಪೊದೆ ತೆರವು ಮಾಡಿಲ್ಲ : ಬೆಳ್ಳಾರ ಮೇಗಲಗೊಲ್ಲರಹಟ್ಟಿಯಿಂದ ವಿದ್ಯಾರ್ಥಿಗಳು ಬೆಳ್ಳಾರ ಸೇತುವೆ ಹತ್ತಿರದ ಶಾಲೆಗೆ ನಿತ್ಯ 1.5 ಕಿ.ಮೀ. ನಡೆದು ಬರುತ್ತಾರೆ. ಈ ರಸ್ತೆಯ ಇಕ್ಕೆಲಗಳಲ್ಲಿ ಮುಳ್ಳಿನಗಿಡಗಳು ರಸ್ತೆಗೆ ಚಾಚಿಕೊಂಡಿವೆ. ಅದರ ಮರೆಯಲ್ಲಿ ಮಕ್ಕಳನ್ನು ಕಿಡ್ನಾಪ್‌ ಮಾಡಿದರೂ ಯಾರಿಗೂ ತಿಳಿಯದು. ಹಾಗಾಗಿ ಅನೇಕ ಬಾರಿ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ತೆರವಿಗೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಈಗಲಾದ್ರೂ ಎಚ್ಚೆತ್ತು ರಸ್ತೆ ಬದಿಯಲ್ಲಿ ಬೆಳೆದಿರುವ ಗಿಡಗಳನ್ನು ತೆರವು ಮಾಡಲಿ ಎಂದು ಸ್ಥಳೀಯರಾದ ಬಸವರಾಜು ಹೇಳುತ್ತಾರೆ.

ಕಪ್ಪು ಮಾರುತಿ ಕಾರಿನಲ್ಲಿ ಬಂದು ಕೈ ಹಿಡಿದು ಎಳೆದರು ಎಂದು ಮಕ್ಕಳು ಹೇಳುತ್ತಿದ್ದಾರೆ. ಅದೃಷ್ಟವಷಾತ್‌ ಇವರಿಬ್ಬರೂ ಪಾರಾಗಿದ್ದಾರೆ. ಆದರೆ, ಅದೇ ವ್ಯಾನ್‌ನಲ್ಲಿ ಇನ್ನೂ ಮೂವರು ಮಕ್ಕಳು ಇದ್ದಾರೆ ಎಂದು ಇದೇ ಮಕ್ಕಳು ಹೇಳುತ್ತಿದ್ದಾರೆ. ರಕ್ಷಿಸಿ ಪೋಷಕರಿಗೆ ಹಿಂದಿರುಗಿಸುವಂತೆ ಈಗಾಗಲೇ ಮೇಲಧಿಕಾರಿಗಳಿಗೆ ಸೂಚಿಸಿದ್ದೇನೆ. ಬಹುಮುಖ್ಯವಾಗಿ ಮಕ್ಕಳ ಪೋಷಕರಿಗೆ ಈ ಘಟನೆ ಆತಂಕ ಮೂಡಿಸಿದ್ದು, ಘಟನೆಯ ಸತ್ಯಾಸತ್ಯತೆ ಬಯಲಿಗೆಳೆದು ಆತಂಕ ದೂರಮಾಡಬೇಕಿದೆ. -ಕೆ.ಎಸ್‌.ಕಿರಣ್‌ಕುಮಾರ್‌, ಅಧ್ಯಕ್ಷ, ರಾಜ್ಯ ಜೈವಿಕ ಇಂಧನ ಮಂಡಳಿ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.