ಜಾಗೃತ ಮನಸ್ಸಿನಿಂದ ಉತ್ತಮ ಸಮಾಜ


Team Udayavani, Feb 17, 2020, 3:00 AM IST

jagruti-mana

ತುಮಕೂರು: ಸರಿ ತಪ್ಪುಗಳ ವಿವೇಚನೆಯಿಂದ ಜಾಗೃತ ಮನಸ್ಸಿನಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ನಗರದ ಬಾಲಭವನ ಸಭಾಂಗಣದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ನೆಹರು ಯುವಕೇಂದ್ರದ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ವ್ಯಕ್ತಿ ದೇಶದ ಸಂಪತ್ತಾಗಬೇಕು. ಬಲಹೀನ ದೌರ್ಬಲ್ಯಗಳಿಂದ ಕೂಡಿದ ವ್ಯಕ್ತಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪವಿತ್ರ ಜೀವನ ನೆಮ್ಮದಿಯ ಬದುಕಿಗೆ ಮುಖ್ಯ. ಧೂಮಪಾನ, ಮದ್ಯಪಾನ ಹಾಗೂ ಡ್ರಗ್ಸ್‌ನಂತಹ ದುಶ್ಚಟಗಳಿಂದ ದೂರವಿದ್ದು, ಯುವಶಕ್ತಿ ನೈತಿಕತೆಯ ಬದುಕು ಆಯ್ದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಆರೋಗ್ಯಯುತ ಬದುಕಿಗೆ ಯೋಗ, ಧ್ಯಾನ ಮತ್ತು ನಿರ್ಮಲ ಪರಿಸರ ಮುಖ್ಯ. ಪ್ರೀತಿಯ ಮಾತುಗಳಿಂದ ತಪ್ಪು ಮಾಡಿದವರಿಗೆ ಅರಿವು ಮೂಡಿಸಿದಾಗ ಒಳ್ಳೆಯವರಾಗಲು ಸಾಧ್ಯ. ಸ್ವಾಮಿ ವಿವೇಕಾನಂದ “ಲವ್‌ ಇಸ್‌ ಲಾ’ ನಾಣ್ಣುಡಿಯಲ್ಲಿ ಮಾರ್ಮಿಕವಾಗಿ ತಿಳಿಸಿದ್ದಾರೆ ಎಂದರು.

ಮಹಾನಗರ ಪಾಲಿಕೆ ಮೇಯರ್‌ ಫ‌ರಿದಾ ಬೇಗಂ ಮಾತನಾಡಿ, ಒಂದು ಕುಟುಂಬ ನಿರ್ವಹಿಸುವಲ್ಲಿ ಸ್ತ್ರೀ-ಪುರುಷರ ಪಾತ್ರ ಬಹಳ ಮಹತ್ವದ್ದು, ಕುಟುಂಬದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಇಬ್ಬರೂ ಸಂಸ್ಕಾರಯುತ ಜೀವನ ಸಾಗಿಸಿ, ಆತ್ಮಾವಲೋಕನದ ಮೂಲಕ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದು ತಿಳಿಸಿದರು.

ಭಾರತ ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ದೇಶ. ಪಾಶ್ಚಾತ್ಯ ದೇಶದ ಅನುಕರಣೆಯಿಂದ ಧೂಮಪಾನ, ಮದ್ಯಪಾನದಂತಹ ದುಶ್ಚಟಗಳ ದಾಸರಾಗಿದ್ದೇವೆ. ಸಂತೋಷ ಮತ್ತು ದುಃಖಗಳ ಸಂದರ್ಭಗಳಲ್ಲೂ ಮದ್ಯಪಾನ ಮಾಡಿ ಸಂಭ್ರಮಿಸುವುದು ಪಾಶ್ಚತ್ಯ ದೇಶದ ಸಂಸ್ಕೃತಿಯಾಗಿದೆ.

ಈ ಸಂಸ್ಕೃತಿ ನಮ್ಮದಲ್ಲ. ಇದನ್ನು ಯುವ ಶಕ್ತಿ ಅರಿತು ನೈತಿಕ ಬದುಕಿನ ದಾರಿ ಕಂಡುಕೊಳ್ಳಬೇಕು ಎಂದು ಹೇಳಿದರು. ಮದ್ಯಪಾನ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ ಕ್ರಾಂತಿಕಾರಿ ಬದಲಾವಣೆ ಮೂಲಕ ಶುದ್ಧ ಜೀವನದ ಹಾದಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಪಂ ಅಧ್ಯಕ್ಷೆ ಲತಾ ಮಾತನಾಡಿದರು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅಚರ್ಡ್‌ ಸಂಸ್ಥೆಯ ಡಾ.ಎಚ್‌.ಜಿ.ಸದಾಶಿವಯ್ಯ ಉಪನ್ಯಾಸ ನೀಡಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ.ರೋಹಿಣಿ, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ದುಡಿದಿದ್ದನ್ನು ಕುಡಿತಕ್ಕೆ ಹಾಕಿ ದೇಹ, ಮನಸ್ಸು ಮತ್ತು ಮನೆ ಹಾಳು ಮಾಡಿಕೊಂಡು ಬೀದಿಪಾಲಾಗಿರುವ ಎಷ್ಟೋ ಕುಟುಂಬಗಳಿವೆ. ಇದು ಗೊತ್ತಿದ್ದರೂ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಮೂರ್ಖತನದ ಪರಮಾವಧಿ. ಇದನ್ನು ಅರಿತು ಪ್ರತಿಯೊಬ್ಬರೂ ಜೀವನ ಸುಂದರವಾಗಿಸಿಕೊಳ್ಳುವುದು ಅಥವಾ ವಿಕೃತಗೊಳಿಸಿಕೊಳ್ಳುವುದು ಅವರವರ ಕೈಯಲ್ಲಿದೆ ಎಂದು
-ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.