PWD ವಾಲ್ ಚರಂಡಿ ನಿರ್ಮಾಣ ವೇಳೆ ಬಡ ಮಹಿಳೆಯ ಮನೆಗೋಡೆ ಕುಸಿತ

ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ

Team Udayavani, Sep 4, 2023, 8:36 PM IST

1-sdad

ಕೊರಟಗೆರೆ: ಲೋಕೋಪಯೋಗಿ ಇಲಾಖೆ ವತಿಯಿಂದ ಅನುಷ್ಠಾನಗೊಂಡ  ವಾಲ್ ಚರಂಡಿ ನಿರ್ಮಾಣದ ಸಂದರ್ಭದಲ್ಲಿ ಬಡ ಮಹಿಳೆಯ ಮನೆಯ ಗೋಡೆ ಕುಸಿದಿದ್ದು, ಅದನ್ನ ರಿಪೇರಿ ಮಾಡಿಕೊಡಿ ಎಂದು ಗುತ್ತಿಗೆದಾರರನ್ನ ಪರಿಪರಿಯಾಗಿ ಬೇಡಿಕೊಂಡರೂ ನಿರ್ಲಕ್ಷ್ಯವಹಿಸಿ ಕಾಮಗಾರಿ ಅಂತಿಮಗೊಳಿಸಿ ಕೈ ತೊಳೆದುಕೊಂಡಿರುವುದು ಬಡ ಮಹಿಳೆಗೆ ಅನ್ಯಾಯವಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಕೊರಟಗೆರೆ ತಾಲೂಕ್ ಕೋಳಾಲ ಹೋಬಳಿ  ಚಿನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಹಳ್ಳಿ ಗ್ರಾಮದ ದಿ. ನರಸಪ್ಪನ ಮಡದಿ ಅಯ್ಯಮ್ಮ ಅವರ ಮನೆ ಹಾನಿಗೊಳಗಾಗಿದೆ. ಲೋಕಪಯೋಗಿ ಇಲಾಖೆಯ ಕಾಮಗಾರಿ ರಸ್ತೆಯ ಎರಡು ಬದಿಯ ವಾಲ್ ಚರಂಡಿ ನಿರ್ಮಾಣ ಸಂದರ್ಭದಲ್ಲಿ ಕೂಲಿ ಕಾರ್ಮಿಕ ಮಹಿಳೆಯ ಮನೆಯ ಮೇಲ್ಚಾವಣಿ ಮುಂಭಾಗದ ಕಂಬಗಳು ಜೆಸಿಬಿ ಡ್ರೈವರ್ ನಿರ್ಲಕ್ಷದಿಂದ ಅರ್ಧಕ್ಕೆ ಮುರಿದಿದ್ದು, ಯಾವ ಸಂದರ್ಭದಲ್ಲಾದರೂ ಮನೆ ಕುಸಿಯುವ ಆತಂಕದಲ್ಲಿ ಬಡ ಮಹಿಳೆ ಕಾಲ ಕಳೆಯುತ್ತಿದ್ದಾರೆ.

ಕೋಳಾಲ ಹೋಬಳಿ ಸುಂಕದಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಗುತ್ತಿಗೆದಾರ ಸಂಗಮೇಶ್ವರ್ ಎಂಬುವರು ಸಿಸಿ ರಸ್ತೆ ಹಾಗೂ ವಾಲ್ ಚರಂಡಿ ಕಾರ್ಯ ನಿರ್ವಹಿಸುತಿದ್ದು, ವಾಲ್ ಚರಂಡಿ ನಿರ್ಮಾಣ ಸಂದರ್ಭದಲ್ಲಿ  ಜೆಸಿಪಿ ಡ್ರೈವರ್ ನಿರ್ಲಕ್ಷದಿಂದ ಬಿಲ್ಡಿಂಗನ ವಾಲ್ ಗೆ ಜೆಸಿಬಿ ಗುದ್ದಿದ ಪರಿಣಾಮ  ಬಡ ಕೂಲಿ ಕಾರ್ಮಿಕೆ ಅರಿಯಮ್ಮನ ಮನೆಯ ಮೇಲ್ಚಾವಣಿ ಕುಸಿಯುತಿದ್ದು , ದುರಸ್ತಿಗೊಳಿಸುವಂತೆ ಮನವಿ ಮಾಡಿಕೊಂಡರು ಗುತ್ತಿಗೆದಾರ ಉದಾಸೀನತೆಯಿಂದ ಸರಿಪಡಿಸಿಕೊಳ್ಳದೆ ಕೆಲಸ ಮುಗಿಸಿಕೊಂಡು ಹೋಗಿದ್ದಾನೆ ಎಂದು ನೊಂದ ಮಹಿಳೆ ಅರಿಯಮ್ಮ ಅಳಲು ತೋಡಿಕೊಂಡಿದ್ದಾರೆ.

ಲೋಕೋಪಯೋಗಿ ಇಲಾಖೆ ಅದೀನದಲ್ಲಿ ಕಾಮಗಾರಿ ನಡೆಯುತ್ತಿತದ್ದು, ಕಾಮಗಾರಿ ನಡೆಯುವ ಸಂದರ್ಭದಲ್ಲಿ ರಸ್ತೆಯ ಎರಡು ಬದಿಯ ವಾಲ್ ಚರಂಡಿ ನಿರ್ಮಾಣದ ಸಂದರ್ಭದಲ್ಲಿ ಜೆಸಿಬಿ ಬಳಸುವುದರಿಂದ ಅಲ್ಲಿನ ಮನೆಗಳಿಗೆ ಡ್ಯಾಮೇಜ್ ಆಗಲಿದೆ ಎಂಬ ಸಾಮಾನ್ಯ ಜ್ಞಾನವು ಅಲ್ಲಿನ ಉಸ್ತವರಿ‌ ಉಳಿಸಿಕೊಂಡ ಇಂಜಿನಿಯರ್ ಆಗಲಿ ಅಥವಾ ಗುತ್ತಿಗೆದಾರನಿಗೆ ಆಗಲಿ ಬಾರದಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಮನೆಗಳ ಪಕ್ಕದಲ್ಲಿ ನಿರ್ಮಾಣ ಮಾಡುವ ವಾಲ್ ಚರಂಡಿಗಳನ್ನ (ಮ್ಯಾನುಯೆಲ್) ಕೂಲಿ ಕಾರ್ಮಿಕರಿಂದ ಕಾರ್ಯ ನಿರ್ವಹಿಸಬೇಕು ಆದರೆ ಆತುರದ ಕೆಲಸಕ್ಕೆ ಗುತ್ತಿಗೆದಾರ ಜೆಸಿಬಿ ಬೆಳಸಿ ಅಲ್ಲಿನ ಬಹಳಷ್ಟು ಮನೆಗಳ ಪಾಯಕ್ಕೆ ತೊಂದರೆಯಾಗಿದ್ದು, ಅರಿಯಮ್ಮನ ಮನೆಯ ಮುಂಭಾಗದ ಮೇಲ್ಛಾವಣಿ ಕುಸಿಯುತ್ತಿದ್ದು, ಬಡ ಕೂಲಿ ಕಾರ್ಮಿಕೆ ಮನೆಯ ದುರಸ್ತಿ ಗಾಗಿ ಅಂಗಲಾಚುತಿದ್ದಾಳೆ.

ವಾಲ್ ಚರಂಡಿ ನಿರ್ಮಾಣದ ಸಂದರ್ಭದಲ್ಲಿ ಜನರು ಕೈಯಲ್ಲಿ ಕೆಲಸ ಮಾಡಿದೆ ಜೆಸಿಬಿ ಬಳಸಿ ಕೆಲಸ ಮಾಡಲು ಹೋಗಿ ಗೋಡೆ ಕುಸಿಯು ವಂತೆ ಮಾಡಿದ್ದಾರೆ, ಗ್ರಾಮ ಪಂಚಾಯತಿಯವರು ಗಮನಹರಿಸಿಲ್ಲ, ಕೆಲಸ ಮಾಡಿದವರು ಗಮನಹರಿಸಿಲ್ಲ ನಾವು ಏನು ಮಾಡುವುದು, ನನಗೆ ಎರಡು ಹೆಣ್ಣು ಮಕ್ಕಳಿದ್ದಾರೆ.

ಅರಿಯಮ್ಮ, ಮನೆ ಹಾನಿಗೊಳಗಾದ ಮಹಿಳೆ

 ಜೆಸಿಬಿ ಯಿಂದ ದೊಡ್ಡ ದೊಡ್ಡ ಕಂಬಗಳನ್ನು ಅರ್ಧಕ್ಕೆ ಕುಸಿಯುವಂತೆ ಮಾಡಲಾಗಿದೆ, ಕಾಂಪೌಂಡ್ ಸಹ ಕುಸಿಯುವಂತೆ ಮಾಡಿದ್ದಾರೆ, ನಾವು ಗುತ್ತಿಗೆದಾರರನ್ನು ಕೇಳಿದ್ದಕ್ಕೆ ಜಗಳ ಮಾಡುತ್ತಾರೆ, ಜಗಳ ಮಾಡಿಕೊಂಡು ಹೋದವ ಇಲ್ಲಿವರೆಗೂ ಬಂದಿಲ್ಲ

ನಂದಿನಿ, ಸುಂಕದಹಳ್ಳಿ. ಹಾನಿಗೊಳಗಾದ ಮನೆಯ ಮನೆಮಗಳು

ಸುಂಕದಹಳ್ಳಿಯಲ್ಲಿ ಕಾಮಗಾರಿ ನಡೆದು2-3 ತಿಂಗಳು ಕಳೆದಿದೆ, ಇಲ್ಲಿನ ಕಾಮಗಾರಿಯ ಗುತ್ತಿಗೆ ಪಡೆದ ಸಂಗಮೇಶ್ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಅಂತಿಮಗೊಳಿಸಿಲ್ಲ, ಉಳಿಕೆ ಕಾಮಗಾರಿಯನ್ನ ಬೇರೆ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು ಅತಿ ಶೀಘ್ರವಾಗಿ ಕಾಮಗಾರಿ ಕೈಗೆತ್ತುಕೊಳ್ಳುವುದರ ಜತೆಗೆ ಮನೆ ಹಾನಿಗೊಳಗಾಗಿರುವದರ ಬಗ್ಗೆ ಪರಿಶೀಲಿಸಿದ್ದೇನೆ ಗುತ್ತಿಗೆದಾರನಿಗೆ ರಿಪೇರಿ ಗೊಳಿಸುವಂತೆ ಈಗಾಗಲೇ ತಿಳಿಸಲಾಗಿದ್ದು ಅತಿ ಶೀಘ್ರವಾಗಿ ಮನೆ ರಿಪೇರಿ ಸಹ ಮಾಡಿಕೊಳ್ಳುವುದರ ಜತೆಗೆ ಉಳಿಕೆ ಕಾಮಗಾರಿಯನ್ನ ನಮ್ಮ ಇಲಾಖೆ ವತಿಯಿಂದ ಪೂರ್ಣಗೊಳಿಸಲಾಗುವುದು.

ಮಲ್ಲಿಕಾರ್ಜುನ್ , ಪಿಡಬ್ಲ್ಯೂಡಿ ಎಇಇ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.